Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೊಮಾಲಿಯ ಕಡಲ್ಗಳ್ಳರಿಂದ ಭಾರತೀಯ ಹಡಗು...

ಸೊಮಾಲಿಯ ಕಡಲ್ಗಳ್ಳರಿಂದ ಭಾರತೀಯ ಹಡಗು ಅಪಹರಣ : ಹಡಗಿನಲ್ಲಿ 11 ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ3 April 2017 9:30 PM IST
share
ಸೊಮಾಲಿಯ ಕಡಲ್ಗಳ್ಳರಿಂದ ಭಾರತೀಯ ಹಡಗು ಅಪಹರಣ : ಹಡಗಿನಲ್ಲಿ 11 ಸಿಬ್ಬಂದಿ

ಬೊಸಾಸೊ (ಸೊಮಾಲಿಯ), ಎ. 3: ಸೊಮಾಲಿಯ ಕರಾವಳಿಯಲ್ಲಿ ಕಡಲ್ಗಳ್ಳರು ಭಾರತೀಯ ವಾಣಿಜ್ಯ ಹಡಗೊಂದನ್ನು ಅಪಹರಿಸಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ‘ರಾಯ್ಟರ್ಸ್’ ಸೋಮವಾರ ವರದಿ ಮಾಡಿದೆ.

ಹಲವು ವರ್ಷಗಳಿಂದ ನಿಷ್ಕ್ರಿಯರಾಗಿದ್ದ ಕಡಲ್ಗಳ್ಳರು ಕೆಲವು ವಾರಗಳ ಹಿಂದೆ ತಮ್ಮ ದಂಧೆಯನ್ನು ಪುನಾರಂಭಿಸಿದ್ದಾರೆ. ಇದು ಇತ್ತೀಚಿನ ಅವರ ಎರಡನೆ ಅಪಹರಣವಾಗಿದೆ.

ದುಬೈಯಿಂದ ಬೊಸಾಸೊಗೆ ಹೋಗುತ್ತಿದ್ದ ಹಡಗನ್ನು ಸೊಕೊಟ್ರ ದ್ವೀಪದ ಸಮೀಪ ಅಪಹರಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ ಎಂದು ಯುನೈಟಡ್ ಕಿಂಗ್‌ಡಂ ಸಾಗರ ವ್ಯಾಪಾರ ಕಾರ್ಯಾಚರಣೆ (ಯುಕೆಎಂಟಿಒ) ಎಂಬ ಸಂಸ್ಥೆ ತಿಳಿಸಿದೆ. ಈ ಸಂಸ್ಥೆಯು ಏಡನ್ ಕೊಲ್ಲಿ ಪ್ರದೇಶದಲ್ಲಿ ಸಾಗುವ ಎಲ್ಲ ವಾಣಿಜ್ಯ ಹಡಗುಗಳು ಮತ್ತು ಹಾಯಿದೋಣಿ (ಯಾಟ್)ಗಳ ಸಮನ್ವಯ ಮತ್ತು ಉಸ್ತುವಾರಿಯ ಕಾರ್ಯವನ್ನು ನೋಡಿಕೊಳ್ಳುತ್ತದೆ.

‘ಅಲ್ ಕೌಸರ್’ ಎಂಬ ಹಡಗು ಎಲ್ಲಿ ಇದೆ ಅಥವಾ ಏನಾಗಿತ್ತು ಎಂಬ ಮಾಹಿತಿ ಲಭ್ಯವಿಲ್ಲ ಎಂದು ಯುಕೆಎಂಟಿಒದ ವಕ್ತಾರರೋರ್ವರು ತಿಳಿಸಿದರು. ತನಿಖೆ ನಡೆಯುತ್ತಿದೆ ಎಂದಷ್ಟೇ ಅವರು ಹೇಳಿದರು.

‘‘ಭಾರತೀಯ ವಾಣಿಜ್ಯ ಹಡಗೊಂದನ್ನು ಸೊಮಾಲಿ ಕಡಲ್ಗಳ್ಳರು ಅಪಹರಿಸಿದ್ದಾರೆ ಹಾಗೂ ಅದು ಸೊಮಾಲಿ ತೀರದತ್ತ ಚಲಿಸುತ್ತಿದೆ ಎನ್ನುವುದು ನಮಗೆ ತಿಳಿದಿದೆ’’ ಎಂದು ಸೊಮಾಲಿಯದ ಪುಂಟ್‌ಲ್ಯಾಂಡ್ ವಲಯದ ಕಡಲ್ಗಳ್ಳತನ ನಿಗ್ರಹ ದಳದ ಮಾಜಿ ನಿರ್ದೇಶಕರು ಹೇಳಿದರು.

ಕಡಲ್ಗಳ್ಳರು ಹಡಗು ಮತ್ತು 11 ಸಿಬ್ಬಂದಿಯನ್ನು ಪುಂಟ್‌ಲ್ಯಾಂಡ್‌ನ ಎಯ್ಲಾ ಎಂಬಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಬ್ರಿಟನ್‌ನ ಡ್ರೈಯಡ್ ಮ್ಯಾರಿಟೈಮ್ ಸೆಕ್ಯುರಿಟಿಯ ಗ್ರೇಮ್ ಗಿಬ್ಬನ್ ಬ್ರೂಕ್ಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X