ದಿಲ್ಲಿ ಮಹಾನಗರಪಾಲಿಕೆ ಚುನಾವಣೆ: ಸ್ವರಾಜ್ ಇಂಡಿಯಾ ಪಕ್ಷಕ್ಕೆ ಸಾಮಾನ್ಯ ಚಿಹ್ನೆಗೆ ನಕಾರ

ಹೊಸದಿಲ್ಲಿ, ಎ.3: ದಿಲ್ಲಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳಿಗೆ ಸಾಮಾನ್ಯ ಚಿಹ್ನೆ ನೀಡಬೇಕೆಂಬ ಯೋಗೇಂದ್ರ ಯಾದವ್ ನೇತೃತ್ವದ ಸ್ವರಾಜ್ ಇಂಡಿಯಾ ಪಕ್ಷದ ಕೋರಿಕೆಯನ್ನು ದಿಲ್ಲಿ ಹೈಕೋರ್ಟ್ ತಳ್ಳಿ ಹಾಕಿದೆ.
ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು ಈ ರೀತಿಯ ಆದೇಶ ನೀಡಿದರೆ ಸಮಸ್ಯೆಯಾಗಬಹುದು ಎಂದು ನ್ಯಾಯಮೂರ್ತಿ ಸಂಜಯ್ ಖನ್ನಾ ಮತ್ತು ಚಂದರ್ಶೇಖರ್ ಅವರನ್ನೊಳಗೊಂಡ ನ್ಯಾಯಪೀಠವೊಂದು ತಿಳಿಸಿತು. ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳುವ ಮೊದಲು ಇಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 19ಕ್ಕೆ ನಿಗದಿಗೊಳಿಸಿತು.
Next Story