Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. " ಇನ್ನು ಬೀಫ್ ತಿನ್ನುವುದಿಲ್ಲ" ಎಂದು...

" ಇನ್ನು ಬೀಫ್ ತಿನ್ನುವುದಿಲ್ಲ" ಎಂದು ಪ್ರಮಾಣ ಮಾಡಿದ ಅಜ್ಮೀರ್ ದರ್ಗಾ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ3 April 2017 10:56 PM IST
share
 ಇನ್ನು ಬೀಫ್ ತಿನ್ನುವುದಿಲ್ಲ ಎಂದು ಪ್ರಮಾಣ ಮಾಡಿದ ಅಜ್ಮೀರ್ ದರ್ಗಾ ಮುಖ್ಯಸ್ಥ

ಅಜ್ಮೇರ್, ಎ.3: ಗೋಮಾಂಸ(ಬೀಫ್) ತಿನ್ನಬಾರದು ಮತ್ತು ಶರಿಯಾ ಕಾನೂನಿಗೆ ವಿರುದ್ಧವಾಗಿರುವ ತ್ರಿವಳಿ ತಲಾಖ್ ಪದ್ದತಿಯನ್ನು ಕೈಬಿಡುವಂತೆ ಅಜ್ಮೇರ್ ಶರೀಫ್ ದರ್ಗಾದ ಧಾರ್ಮಿಕ ಮುಖಂಡರು ಮುಸ್ಲಿಮರಿಗೆ ಕರೆ ನೀಡಿದ್ದಾರೆ.

ಅಲ್ಲದೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಒತ್ತಾಯಿಸಿದ್ದಾರೆ.

  ಹಿಂದೂ ಮತ್ತು ಮುಸ್ಲಿಮರು ಶಾಂತಿಯುತ ಸಹಬಾಳ್ವೆ ನಡೆಸಬೇಕೆಂದು ತನ್ನ ಜೀವನಪರ್ಯಂತ ಪ್ರಯತ್ನಿಸಿದ ಖ್ವಾಜಾ ಮೊನುದ್ದಿನ್ ಹಸನ್ ಚಿಸ್ತಿ ಅವರ 805ನೇ ಉರುಸ್ (ವಾರ್ಷಿಕ ಪುಣ್ಯತಿಥಿ) ಸಂದರ್ಭದಲ್ಲಿ , ಹಿಂದೂಗಳ ಧಾರ್ಮಿಕ ಭಾವನೆಯನ್ನು ಗೌರವಿಸುವ ಸಲುವಾಗಿ ನಾವು ಗೋಮಾಂಸ ತಿನ್ನುವುದನ್ನು ಬಿಟ್ಟುಬಿಡಬೇಕು ಎಂದು ದರ್ಗಾದ ಧರ್ಮಗುರು ಝೈನು ಲ್ ಅಬೆದಿನ್ ಖಾನ್ ಕರೆ ನೀಡಿದರು.

ನಾವಿನ್ನು ಗೋಮಾಂಸ ತ್ಯಜಿಸುತ್ತೇವೆ ಎಂದು ಇದೇ ಸಂದರ್ಭ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಝೈನುಲ್ ಅಬೆದಿನ್ ಖಾನ್ ಅವರು ಸೂಫಿ ಸಂತ ಖ್ವಾಜಾ ಮೊನುದ್ದೀನ್ ಚಿಸ್ತಿ ಅವರ 22ನೆ ವಂಶಸ್ಥರಾಗಿದ್ದಾರೆ.

ಗೋ ಹತ್ಯೆ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಗುಜರಾತ್ ಸರಕಾರದ ಕ್ರಮವನ್ನು ಅವರು ಬೆಂಬಲಿಸಿದ್ದು ಗೋವುಗಳನ್ನು ಮಾಂಸಕ್ಕಾಗಿ ಹತ್ಯೆ ಮಾಡುವ ಕೃತ್ಯ ತಡೆಗಟ್ಟಲು ಇದು ಸೂಕ್ತ ಕ್ರಮ ಎಂದಿದ್ದಾರೆ.

ತ್ರಿವಳಿ ತಲಾಖ್ ಪದ್ಧತಿಯನ್ನು ಖಂಡಿಸಿದ ಅವರು, ಖುರಾನ್ ಮತ್ತು ಶರಿಯಾದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮಾನವೀಯ, ಇಸ್ಲಾಮಿ ವಿರೋಧಿ ಮತ್ತು ಲಿಂಗ ಸಮಾನತೆಗೆ ವಿರುದ್ಧವಾಗಿರುವ ಈ ಪದ್ದತಿಯನ್ನು ಅತೀ ಶೀಘ್ರ ನಿಷೇಧಿಸಬೇಕು ಎಂದರು. ಖುರಾನ್ ಮತ್ತು ಪ್ರವಾದಿಯವರು ಎಂದಿಗೂ ಅನುಮೋದಿಸದ ಈ ಪದ್ದತಿ ಕೈಬಿಡಲು ಸಮುದಾಯದ ಕೆಲವರು ವಿರೋಧಿಸುತ್ತಿರುವುದು ಸರಿಯಲ್ಲ. ಈ ಕೆಟ್ಟ ಪದ್ದತಿಗೆ ನಮ್ಮ ಸೋದರಿಯರು ಮತ್ತು ಪುತ್ರಿಯರು ಬಲಯಾಗದಂತೆ ತಡೆಯಬೇಕು ಎಂದವರು ಹೇಳಿದರು. ದೇಶದ ಅತ್ಯಂತ ಪವಿತ್ರ ಮುಸ್ಲಿಮ್ ಕ್ಷೇತ್ರಗಳಲ್ಲಿ ಅಜ್ಮೇರ್ ದರ್ಗವೂ ಸೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X