Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಯಾಣಿಕನಿಗೆ 149 ಕೋಟಿ ರೂ. ಬಿಲ್...

ಪ್ರಯಾಣಿಕನಿಗೆ 149 ಕೋಟಿ ರೂ. ಬಿಲ್ ಮಾಡಿದ ಓಲಾ ಕ್ಯಾಬ್ !

ಇದು ತಮಾಷೆಗಲ್ಲ

ವಾರ್ತಾಭಾರತಿವಾರ್ತಾಭಾರತಿ4 April 2017 10:26 PM IST
share
ಪ್ರಯಾಣಿಕನಿಗೆ 149 ಕೋಟಿ ರೂ. ಬಿಲ್ ಮಾಡಿದ ಓಲಾ ಕ್ಯಾಬ್ !

ಮುಂಬೈ, ಎ . : ಮುಂಬೈ ನಿವಾಸಿ ಸುಶೀಲ್ ನರ್ಸಿಯನ್ ಈ ಬಾರಿಯ ಮೂರ್ಖರ ದಿನ ಮರೆಯಲು ಸಾಧ್ಯವೇ ಇಲ್ಲ. ಎಪ್ರಿಲ್ ಒಂದರಂದು ಮುಲುಂಡ್ ನಲ್ಲಿರುವ ತಮ್ಮ ಮನೆಯಿಂದ ವಕೋಲ ಮಾರ್ಕೆಟ್ ಗೆ ಹೋಗಲು ಅವರು ಓಲಾ ಕ್ಯಾಬ್ ಬುಕ್ ಮಾಡಿದರು. ಆದರೆ ಬುಕ್ಕಿಂಗ್ ಪಡೆದ ಚಾಲಕನ ಮೊಬೈಲ್ ಬಂದ್ ಆದ್ದರಿಂದ ಆತನಿಗೆ ಸುಶೀಲ್ ಮನೆ ಕಂಡು ಹಿಡಿಯಲು ಆಗಲಿಲ್ಲ. ಸುಶೀಲ್ ಸ್ವತಃ ಚಾಲಕನಿರುವಲ್ಲಿಗೆ ನಡೆದುಕೊಂಡು ಹೋದರಾದರೂ ಅಷ್ಟು ಹೊತ್ತಿಗೆ ಆತ ಬುಕ್ಕಿಂಗ್ ರದ್ದು ಮಾಡಿ ಹೊರಟು ಹೋಗಿದ್ದ. 

ಆದರೆ ಆ ಬಳಿಕ ನಡೆದದ್ದು ಮಾತ್ರ ಅತ್ಯಂತ ಆಶ್ಚರ್ಯಕರವಾಗಿದೆ. ತನಗೆ ಇನ್ನೊಂದು ಕ್ಯಾಬ್ ಬುಕ್ ಮಾಡಲು ಹೋರಾಟ ಸುಶೀಲ್ ಗೆ ದೊಡ್ಡ ಅಚ್ಚರಿ ಜೊತೆಗೆ ಆಘಾತ ಕಾದಿತ್ತು. ತಾನು ಈಗಾಗಲೇ 1,49,10,51,648 ರೂಪಾಯಿ ಬಾಕಿ ಇಟ್ಟಿರುವುದರಿಂದ ಬುಕ್ ಮಾಡಲು ಸಾಧ್ಯವಿಲ್ಲ ಎಂದು ಓಲಾ ಮೊಬೈಲ್ ಆಪ್ ಅವರಿಗೆ ಹೇಳುತ್ತಿತ್ತು !  ಆ ಮೊತ್ತ ಎಷ್ಟು ಎಂದು ಎಣಿಸಲು ಹೆಣಗಾಡುತ್ತಿದ್ದೀರಾ ? 149 ಕೋಟಿಗೂ ಹೆಚ್ಚು ಮೊತ್ತ ಅದು ! ಸಾಲದ್ದಕ್ಕೆ ಸುಶೀಲ್ ರ ಮೊಬೈಲ್ ವ್ಯಾಲೆಟ್ ನಲ್ಲಿದ್ದ 127 ರೂ . ವನ್ನು ಓಲಾ ಕಟ್ ಮಾಡಿತ್ತು. 

ಇದು ಏಪ್ರಿಲ್ ಫೂಲ್ ಪ್ರಯತ್ನ ಇರಬಹುದು ಎಂದುಕೊಂಡ ಸುಶೀಲ್ ಓಲಾ ಕಂಪೆನಿಯನ್ನು ಸಂಪರ್ಕಿಸಿದರು. ಇದು ತಾಂತ್ರಿಕ ಸಮಸ್ಯೆಯಿಂದ ಆಗಿರುವ ಅವಾಂತರ ಎಂದು ಕಂಪೆನಿ ಸ್ಪಷ್ಟಪಡಿಸಿತು. ಅವರಿಂದ ಪಡೆದಿದ್ದ ಹಣವನ್ನು ವಾಪಸ್ ಮಾಡಿ ಬಳಿಕ ಅವರನ್ನು " 149 ಕೋಟಿ ಸಾಲದ ಹೊರೆ " ಯಿಂದಲೂ ಮುಕ್ತ ಮಾಡಿತು. 

ಓಲಾದ ಈ ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ, ಹಾಸ್ಯಕ್ಕೆ ಕಾರಣವಾಯಿತು. " ಪ್ಲುಟೊ ಗೃಹದಿಂದ ನೇಪ್ಚೂನ್ ಗ್ರಹಕ್ಕೆ " ಕರೆದುಕೊಂಡು ಹೋಗಲು ಇಷ್ಟು ದರ ವಿಧಿಸಿತೇ ಓಲಾ ? " ಎಂಬ ಹಾಸ್ಯ ಚಟಾಕಿಗಳು ಹರಿದಾಡಿದವು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X