Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಹಾರಕ್ರಮದ ಆಯ್ಕೆ ಬದುಕಿನ ಹಕ್ಕು...

ಆಹಾರಕ್ರಮದ ಆಯ್ಕೆ ಬದುಕಿನ ಹಕ್ಕು :ಹೈಕೋರ್ಟ್

ಕಸಾಯಿಖಾನೆ ನಿಯಮ: ಆದಿತ್ಯನಾಥ್ ಸರಕಾರಕ್ಕೆ 10 ದಿನದ ಗಡುವು

ವಾರ್ತಾಭಾರತಿವಾರ್ತಾಭಾರತಿ5 April 2017 10:00 PM IST
share
ಆಹಾರಕ್ರಮದ ಆಯ್ಕೆ ಬದುಕಿನ ಹಕ್ಕು :ಹೈಕೋರ್ಟ್

ಲಕ್ನೊ, ಎ.5: ಆಹಾರಕ್ರಮದ ಆಯ್ಕೆ ಮತ್ತು ಆಹಾರ ಪದಾರ್ಥಗಳ ವ್ಯಾಪಾರ ಅವರವರ ಬದುಕಿನ ಹಕ್ಕಾಗಿದೆ ಎಂದು ತಿಳಿಸಿರುವ ಅಲಹಾಬಾದ್ ಹೈಕೋರ್ಟ್, ಅಕ್ರಮ ಕಸಾಯಿಖಾನೆ ಮತ್ತು ಮಾಂಸದಂಗಡಿಗಳನ್ನು ಮುಚ್ಚುವ ಸರಕಾರದ ಕ್ರಮವು ಜನರ ಜೀವನಾಧಾರ ವೃತ್ತಿ ಅಥವಾ ಆಹಾರವನ್ನು ಕಸಿದುಕೊಳ್ಳದ ರೀತಿಯಲ್ಲಿ ಸೂಕ್ತ ಯೋಜನೆಯನ್ನು 10 ದಿನದ ಒಳಗೆ ರೂಪಿಸುವಂತೆ ಉತ್ತರ ಪ್ರದೇಶ ಸರಕಾರಕ್ಕೆ ಸೂಚಿಸಿದೆ.

ಉತ್ತರಪ್ರದೇಶದಲ್ಲಿ ಹಲವು ಆಹಾರ ಸಂಸ್ಕೃತಿಯಿದ್ದು ಇದು ರಾಜ್ಯದ ಜಾತ್ಯಾತೀತ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಎಂದು ಹೈಕೋರ್ಟ್‌ನ ಲಕ್ನೊ ಪೀಠ ತಿಳಿಸಿದೆ. ತನ್ನ ಮಾಂಸದಂಗಡಿಯ ಪರವಾನಿಗೆಯನ್ನು ನವೀಕರಿಸುವಂತೆ ಉ.ಪ್ರ.ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ವ್ಯಾಪಾರಿಯೋರ್ವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಕಾನೂನು ಬಾಹಿರ ಚಟುವಟಿಕೆಯನ್ನು ನಿಷೇಧಿಸುವ ಸಂದರ್ಭದಲ್ಲೇ ಕಾನೂನು ಸಮ್ಮತವಾದ ಚಟುವಟಿಕೆ ನಡೆಸಲು ಆಸ್ಪದ ಮಾಡಿಕೊಡಬೇಕು. ವಿಶೇಷವಾಗಿ ಆಹಾರ, ಆಹಾರ ಪದ್ಧತಿ, ಆಹಾರದ ಮಾರಾಟ ಇತ್ಯಾದಿಗಳು ಬದುಕುವ ಹಕ್ಕಿಗೆ ಸಂಬಂಧಿಸಿದೆ ಎಂದು ನ್ಯಾಯಮೂರ್ತಿಗಳಾದ ಅಮರೇಶ್ವರ ಪ್ರತಾಪ್ ಸಾಹಿ ಮತ್ತು ಸಂಜಯ್ ಹರ್‌ಕೌಲಿ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಆರೋಗ್ಯಕ್ಕೆ ಪೂರಕವಾಗಿರುವ ಆಹಾರವನ್ನು ತಪ್ಪು ಆಯ್ಕೆ ಎಂದು ಪರಿಗಣಿಸಬಾರದು. ಇಂತಹ ಆಹಾರ ಪೂರೈಕೆಯಾಗುವಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ತಿಳಿಸಿತು.

 ಇದಕ್ಕೆ ಉತ್ತರಿಸಿದ ಸರಕಾರ, ಮಾಂಸವನ್ನು ನಿಷೇಧಿಸುವ ಅಥವಾ ಎಲ್ಲಾ ಕಸಾಯಿಖಾನೆಗಳನ್ನೂ ನಿಷೇಧಿಸುವ ಯೋಜನೆಯಿಲ್ಲ. ಸುಪ್ರೀಂಕೋರ್ಟ್‌ನ ಆದೇಶದಂತೆ ಅಕ್ರಮ ಕಸಾಯಿಖಾನೆಗಳನ್ನು ನಿಷೇಧಿಸಿ, ಕಸಾಯಿಖಾನೆಗಳ ಚಟುವಟಿಕೆಯನ್ನು ಕ್ರಮಬದ್ಧಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿತು. ತಮ್ಮ ಪರವಾನಿಗೆಯನ್ನು ನವೀಕರಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಹಲವಾರು ಮಂದಿ ಅರ್ಜಿ ಸಲ್ಲಿಸಿದ್ದು ಈ ಎಲ್ಲಾ ಅರ್ಜಿಗನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿ, ಮುಂದಿನ ವಿಚಾರಣೆಯನ್ನು ಎಪ್ರಿಲ್ 13ಕ್ಕೆ ನಿಗದಿಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X