Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಗರಿಕ ಹಕ್ಕುಗಳ ದಮನಕ್ಕೆ ಖಂಡನೆ:...

ನಾಗರಿಕ ಹಕ್ಕುಗಳ ದಮನಕ್ಕೆ ಖಂಡನೆ: ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 April 2017 10:13 PM IST
share

ಮಂಗಳೂರು, ಎ. 5: ಪಿಎಫ್‌ಐ ಸಂಘಟನೆಯ ಪ್ರತಿಭಟನಾ ಧರಣಿಯ ಮೇಲೆ ಮಂಗಳೂರಿನ ಪೋಲಿಸರು ನಡೆಸಿದ ದೌರ್ಜನ್ಯವನ್ನು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯು ತೀವ್ರವಾಗಿ ಖಂಡಿಸಿದೆ.

ಇದು ಮಂಗಳೂರಿನ ಪೋಲಿಸರು ನಡೆಸಿದ ಮತ್ತೊಂದು ಹೀನಾಯವಾದ ನಾಗರಿಕ ಹಕ್ಕುಗಳ ದಮನವಾಗಿದೆ ಎನ್ನುವುದನ್ನು ಗಮನಿಸಬೇಕು. ಕೊಲೆ ಪ್ರಕರಣವೊಂದರ ಆರೋಪಿ ಎಂಬ ನೆಪದಲ್ಲಿ, ಪೋಲಿಸರು ಅಹ್ಮದ್ ಖುರೇಷಿ ಎಂಬವರನ್ನು 6 ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟು, ಅವರ ಮೂತ್ರಪೀಂಡಗಳು ಜರ್ಝರಿತವಾಗುವ ಹಾಗೆ ಹೀನಾಯ ಹಿಂಸೆ ನೀಡಿದ್ದಾರೆಂಬ ವಿದ್ಯಮಾನಕ್ಕೆ ನ್ಯಾಯ ಬೇಡಲು ಜನರು ಮಂಗಳೂರಿನ ಕಮಿಷನರ್ ಕಚೇರಿ ಎದುರು ಪ್ರತಿಭಟನೆಗೆ ಬಂದಿದ್ದರು.

ಜನರ ದೂರನ್ನು ಸಹಾನೂಭೂತಿಯಿಂದ ಕೇಳಿ ತನಿಖೆಗೆ ಆದೇಶಿಸುವುದು ಕಾನೂನು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಖುರೇಷಿಯವರ ದೈಹಿಕ ಸ್ಥಿತಿ ಹಾಗೂ ಅದರ ಹಿನ್ನಲೆಗಳ ಬಗ್ಗೆ ಅವರ ಕುಟುಂಬದವರ ವಿವರಣೆಗಳನ್ನು ಕೇಳಿಸಿಕೊಳ್ಳದ ಕಮಿಷನರ್, ಆರು ದಿನಗಳ ಅಕ್ರಮ ಬಂಧನ-ಹಿಂಸೆಯ ನಂತರ ಆರೋಪಿಯು ನ್ಯಾಯಾಧೀಶರ ಮುಂದೆ ಕೊಟ್ಟ ಹೇಳಿಕೆಯ ಆಧಾರದಲ್ಲಿ ವಿಷಯ ಇತ್ಯಾರ್ಥವಾಗಿದೆ ಎಂಬಂತೆ ವರ್ತಿಸಿರುವುದೂ ವಿವೇಚನಾಹೀನವಾಗಿದೆ ಎಂದು ವೇದಿಕೆ ಹೇಳಿದೆ.

ಪಿಎಫ್‌ಐ ಸಂಘಟನೆಯ ಸಿದ್ಧಾಂತ, ಸಂಘಟನಾ ಮಾದರಿಗಳ ಬಗ್ಗೆ ವೇದಿಕೆಗೆ ಭಿನ್ನಮತಗಳಿವೆ. ಆದರೆ, ಪ್ರಜಾಪ್ರಭುತ್ವ ಸಮಾಜದಲ್ಲಿ, ಎಲ್ಲರಿಗೂ ಇರಬೇಕಾದಂತೆ ಅವರಿಗೂ ಸಂಪೂರ್ಣ ನಾಗರಿಕ ಹಕ್ಕು-ಸ್ವಾತಂತ್ರಗಳಿವೆ. ಅದನ್ನು ಮಂಗಳೂರಿನ ಪೋಲಿಸರು ದಮನಿಸಿದ್ದಾರೆ. ಇದು ಪ್ರಜಾತಂತ್ರ ವಿರೋಧಿ, ಸಂವಿಧಾನ ವಿರೋಧಿ, ನಾಗರಿಕ ಹಕ್ಕು, ಸ್ವಾತಂತ್ರ್ಯಗಳ ವಿರೋಧಿ ಕೃತ್ಯವಾಗಿದೆ ಎಂದು ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.

ಈಗಾಗಲೇ ಕರಾವಳಿಯಲ್ಲಿ ಮುಸ್ಲಿಮರು ಅಪರಿಮಿತ ಹಿಂಸೆಗೆ ತುತ್ತಾಗಿದ್ದಾರೆ; ಕಾನೂನುಬಾಹಿರ ಶಕ್ತಿಗಳ ಆಟಾಟೋಪವನ್ನು ಕರಾವಳಿಯ ಕಾನೂನುಪಾಲಕರು ನಿಗ್ರಹಿಸುವಲ್ಲಿ ವಿಫಲರಾಗಿದ್ದಾರೆ. ಪ್ರಸ್ತುತ ಘಟನೆಯು ಕಾನೂನು ಪಾಲಕರು ಸಂವಿಧಾನಬಾಹಿರ ಶಕ್ತಿಗಳ ಮನೋಭಾವವನ್ನೇ ಎತ್ತಿ ಹಿಡಿಯುತ್ತಿದ್ದಾರೆ ಎಂಬ ಭಾವನೆಯು ಗಣನೀಯವಾಗಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಬೆಳೆಯುವುದನ್ನು ತಡೆಯುವುದು ಸರಕಾರದ ಹಾಗೂ ಕಾನೂನುಪಾಲಕರ ಕರ್ತವ್ಯವಾಗಿದೆ.

ಆದರೆ, ಸರಕಾರವೇ ಸಾರ್ವಜನಿಕ ಅಶಾಂತಿಗೆ ಕಾರಣವಾಗುತ್ತಿದೆ ಎನ್ನುವುದು ಆತಂಕಕಾರಿ. ಖುರೇಷಿಯವರ ಅಕ್ರಮ ಬಂಧನ, ಹಿಂಸೆ ಹಾಗೂ ಪ್ರತಿಭಟನಾಕಾರರ ಮೇಲೆ ನಡೆದ ದೌರ್ಜನ್ಯಗಳ ಬಗ್ಗೆ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಯ ಬೇಕೆಂದು ವೇದಿಕೆಯು ಗೃಹ ಸಚಿವಾಲಯವನ್ನು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X