Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಮೊದಲ...

ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಮೊದಲ ಸುತ್ತಿನಲ್ಲೇ ಸಿಂಧು, ಸೈನಾಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ5 April 2017 11:26 PM IST
share

ಕೌಲಾಲಂಪುರ, ಎ.5: ವಿಶ್ವದ ಮಾಜಿ ನಂ.1 ಆಟಗಾರ್ತಿ ಸೈನಾ ನೆಹ್ವಾಲ್ ಹಾಗೂ ಪಿ.ವಿ. ಸಿಂಧು ಬುಧವಾರ ಆರಂಭವಾದ ಮಲೇಷ್ಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಮೊದಲ ಸುತ್ತಿನಲ್ಲಿ ಸೋತು ನಿರ್ಗಮಿಸಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಸೈನಾ ಅವರು ನಾಲ್ಕನೆ ಶ್ರೇಯಾಂಕಿತೆ ಜಪಾನ್‌ನ ಅಕಾನೆ ಯಮಗುಚಿ ವಿರುದ್ಧ 21-19, 13-21, 15-21 ಅಂಕಗಳ ಅಂತರದಿಂದ ಸೋತಿದ್ದಾರೆ.

ಮತ್ತೊಂದು ಪಂದ್ಯದಲ್ಲಿ ಸಿಂಧು ಚೀನಾದ ಚೆನ್ ಯೂಫೆ ವಿರುದ್ಧ 21-18, 19-21,17-21 ಅಂಕಗಳ ಅಂತರದಿಂದ ಶರಣಾಗಿದ್ದಾರೆ.

 ಕಳೆದ ವಾರ ಹೊಸದಿಲ್ಲಿಯ ಸಿರಿ ಫೋರ್ಟ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದ ಇಂಡಿಯಾ ಓಪನ್ ಸೂಪರ್ ಸಿರೀಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಸೈನಾ ನೆಹ್ವಾಲ್ ಅವರು ಪಿ.ವಿ. ಸಿಂಧು ವಿರುದ್ಧ ಸೋತಿದ್ದರು. ಸಿಂಧು ಇಂಡಿಯಾ ಓಪನ್‌ನ ಫೈನಲ್‌ಗೆ ತಲುಪಿ ಒಲಿಂಪಿಕ್ಸ್ ಚಾಂಪಿಯನ್ ಕರೋಲಿನಾ ಮರಿನ್‌ರನ್ನು ಮಣಿಸಿ ಚೊಚ್ಚಲ ಇಂಡಿಯಾ ಓಪನ್ ಪ್ರಶಸ್ತಿ ಜಯಿಸಿದ್ದರು.

56 ನಿಮಿಷಗಳಲ್ಲಿ ಕೊನೆಗೊಂಡಿದ್ದ ಮೊದಲ ಸುತ್ತಿನ ಪಂದ್ಯದಲ್ಲಿ ಸೈನಾ ಅವರು ಮೊದಲ ಗೇಮ್‌ನ್ನು 21-19 ರಿಂದ ಗೆದ್ದುಕೊಂಡು ಉತ್ತಮ ಆರಂಭವನ್ನು ಪಡೆದಿದ್ದರು. ಆದರೆ, ಆ ನಂತರ ತನ್ನಹಿಡಿತವನ್ನು ಕಳೆದುಕೊಂಡ ಸೈನಾ ಎರಡನೆ ಹಾಗೂ 3ನೆ ಗೇಮ್‌ನಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದರು.

ಸಿಂಧುಗೆ ವೀರೋಚಿತ ಸೋಲು: ಇದೇ ವೇಳೆ, 67 ನಿಮಿಷಗಳ ಕಾಲ ನಡೆದಿದ್ದ ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಸಿಂಧು ಅವರು ಚೆನ್ ಯೂಫೆ ವಿರುದ್ಧ ವೀರೋಚಿತ ಸೋಲುಂಡರು. ಮೂರು ಗೇಮ್‌ಗಳು ತೀವ್ರ ಪೈಪೋಟಿಯಿಂದ ಕೂಡಿದ್ದವು. ಸಿಂಧು ಮೊದಲ ಗೇಮ್‌ನ್ನು 21-18 ಅಂಕಗಳಿಂದ ಜಯ ಸಾಧಿಸಿ ಮುನ್ನಡೆ ಸಾಧಿಸಿದ್ದರು. ಆದರೆ, ಎರಡು ಹಾಗೂ 3ನೆ ಸೆಟ್‌ನಲ್ಲಿ ತಿರುಗಿ ಬಿದ್ದ ಚೀನಾದ ಆಟಗಾರ್ತಿ ಕ್ರಮವಾಗಿ 21-19 ಹಾಗೂ 21-17 ಅಂಕಗಳಿಂದ ಜಯ ಸಾಧಿಸಿದರು.

ಜಯರಾಮ್‌ಗೆ ಜಯ: ಭಾರತದ ಪಾಳಯದಲ್ಲಿ ಪುರುಷರ ವಿಭಾಗದಿಂದ ಸಿಹಿ ಸುದ್ದಿ ಲಭಿಸಿದೆ. ಪುರುಷರ ಸಿಂಗಲ್ಸ್‌ನಲ್ಲಿ ಅಜಯ್ ಜಯರಾಮ್ 2ನೆ ಸುತ್ತಿಗೆ ತಲುಪಿದ್ದಾರೆ.

ಬುಧವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಜಯರಾಮ್ ಚೀನಾದ ಕ್ವಿಯಾನ್ ಬಿನ್‌ರನ್ನು 21-11, 21-8 ಅಂಕಗಳ ಅಂತರದಿಂದ ಸುಲಭವಾಗಿ ಮಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X