Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೀಫ್ ಚರ್ಚೆ : ತನ್ನದೇ ಹೊಸ ಕಾನೂನು...

ಬೀಫ್ ಚರ್ಚೆ : ತನ್ನದೇ ಹೊಸ ಕಾನೂನು ಹೇರಲು ಹೊರಟ ವಿಹಿಂಪ ನಾಯಕನನ್ನು ಷೋ ನಿಂದ ಹೊರಗಟ್ಟಿದ ಟಿವಿ ಪತ್ರಕರ್ತ

ವಾರ್ತಾಭಾರತಿವಾರ್ತಾಭಾರತಿ6 April 2017 12:26 PM IST
share
ಬೀಫ್ ಚರ್ಚೆ : ತನ್ನದೇ ಹೊಸ ಕಾನೂನು ಹೇರಲು ಹೊರಟ  ವಿಹಿಂಪ ನಾಯಕನನ್ನು ಷೋ ನಿಂದ ಹೊರಗಟ್ಟಿದ ಟಿವಿ ಪತ್ರಕರ್ತ

ಹೊಸದಿಲ್ಲಿ, ಎ. 6 : ಉತ್ತರ ಪ್ರದೇಶ ಸರಕಾರವು ಅಕ್ರಮ ಕಸಾಯಿಖಾನೆಗಳು ಮತ್ತು ಮಾಂಸದಂಗಡಿಗಳ ಮೇಲೆ ದಾಳಿ ನಡೆಸಲಾರಂಭಿಸಿದಂದಿನಿಂದ ಈ ವಿಚಾರ ದೇಶದಾದ್ಯಂತ ಗಂಭೀರ ಚರ್ಚೆಗೆ ಆಸ್ಪದ ನೀಡಿದೆ. ರಾಷ್ಟ್ರೀಯ ಟಿವಿ ವಾಹಿನಿಗಳೂ ಚರ್ಚೆಗಳಲ್ಲಿ ಹಿಂದೆ ಬಿದ್ದಿಲ್ಲ. ಆದರೆ ಇಂತಹ ಒಂದು ಚರ್ಚೆ ಸಿಎನ್‌ಎನ್ -ನ್ಯೂಸ್ 18 ವಾಹಿನಿಯಲ್ಲಿ ಬುಧವಾರ ಸಂಜೆ ನಡೆಯುತ್ತಿದ್ದಾಗ, ಚರ್ಚೆಯಲ್ಲಿ ಪಾಲ್ಗೊಂಡ ವಿಹಿಂಪ ನಾಯಕರೊಬ್ಬರ ಉತ್ತರದಿಂದ ಕೆಂಡಾಮಂಡಲವಾದ ಕಾರ್ಯಕ್ರಮ ಆಂಕರ್ ಝಕ್ಕಾ ಜೇಕಬ್ ಅವರು ಆ ನಾಯಕನನ್ನು ಗೆಟ್ ಔಟ್ ಎಂದು ಹೇಳಿ ಷೋ ದಿಂದ ಹೊರಗಟ್ಟಿದ ಘಟನೆ ನಡೆದಿದೆ.

ಈ ಚರ್ಚೆ ಕಾರ್ಯಕ್ರಮದಲ್ಲಿ ವಿಹಿಂಪ, ಹಮ್ ಹಿಂದು ಸಂಘಟನೆ, ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿನಿಧಿಗಳು ಭಾಗವಹಿಸಿದ್ದರು. ಗೋಮಾಂಸ ಮಾರಾಟ ಮಾಡಲಾಗುತ್ತಿದೆಯೆಂಬ ಸಂಶಯದ ಮೇಲೆ ಅಂಗಡಿಯೊಂದನ್ನು ಮುಚ್ಚಿದ ಪ್ರಕರಣದ ಬಗ್ಗೆ ಉಲ್ಲೇಖಿಸುತ್ತಾ ಅಂಗಡಿಯಾತ ತಾನು ಕೋಳಿ ಮಾಂಸ ಮಾತ್ರ ಮಾರಾಟ ಮಾಡುತ್ತಿರುವುದಾಗಿ ಹೇಳಿದ ಹೊರತಾಗಿಯೂ ಅಲ್ಲಿಗೆ ಆಹಾರ ಪರೀಕ್ಷಕ ಅವರನ್ನು ಕರೆಸಿ ತಪಾಸಣೆ ನಡೆಸಿಲ್ಲವೇಕೆ ಎಂದು ನಿರೂಪಕ ಜೇಕಬ್ ಪ್ರಶ್ನಿಸಿದ್ದರು. ಆಗ ವಿಹಿಂಪದ ವಿಜಯ ಶಂಕರ್ ತಿವಾರಿ ‘‘ಯಾವ ಕಳ್ಳನೂ ತಾನು ಕಳ್ಳನೆಂದು ಹೇಳಿಕೊಳ್ಳುವುದಿಲ್ಲ. ತನಿಖೆ ನಡೆಯಲಿ,’’ ಎಂದು ಹೇಳಿದರು.

ಆಗ ಜೇಕಬ್ ‘‘ಹಾಗಾದರೆ ತನಿಖೆ ನಡೆಯುವ ಮುನ್ನವೇ ಆತ ತಪ್ಪಿತಸ್ಥ ಎಂದು ನೀವು ತೀರ್ಮಾನಿಸಿದ್ದೀರಾ?’’ ಎಂದು ಕೇಳಿ ಬಿಟ್ಟಾಗ ಹಮ್ ಹಿಂದು ಸಂಘಟನೆಯ ಅಜಯ್ ಗೌತಮ ‘‘ಆತ ಶಂಕಿತ’’ ಎಂದರು. ಆಗ ವಿಹಿಂಪ ಪ್ರತಿನಿಧಿ ಜೇಕಬ್ ಅವರನ್ನುದ್ದೇಶಿಸಿ ‘‘ಹಿಂದಿಯಲ್ಲಿ ಮಾತನಾಡಿ’’ಎಂದು ಹೇಳಲು ಪ್ರಾರಂಭಿಸಿದರು. ಆಗ ಸಿಟ್ಟುಗೊಂಡ ಜೇಕಬ್ ‘ಅರೆ ಭಾಯಿ ಸಾಬ್, ಆರೋಪ ಸಾಬೀತಾಗುವ ತನಕ ನೀವು ಅಪರಾಧಿಯಲ್ಲ. ನೀವು ನನಗೆ ಕಾನೂನು ಕಲಿಸಬೇಕಿಲ್ಲ’’ ಎಂದು ಬಿಟ್ಟರು. ಇದರಿಂದ ಕೆಂಡಾಮಂಡಲವಾದ ತಿವಾರಿ ‘‘ ವಾಟ್ ನಾನ್ಸೆನ್ಸ್’’ ಎನ್ನುತ್ತಾ ಎದ್ದಾಗ ‘‘ ನನ್ನ ಷೋದಿಂದ ಹೊರನಡೆಯಿರಿ,’’ ಎಂದು ಜೇಕಬ್ ಏರಿದ ದನಿಯಲ್ಲಿ ಹೇಳಿದರು.

ಈ ವೀಡಿಯೋ ಇದೀಗ ವೈರಲ್ ಆಗಿ ಬಿಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X