Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್‌ನಲ್ಲಿ ಲಿಯಾಂಡರ್ ಪೇಸ್‌ಗೆ...

ಡೇವಿಸ್‌ಕಪ್‌ನಲ್ಲಿ ಲಿಯಾಂಡರ್ ಪೇಸ್‌ಗೆ ಸ್ಥಾನವಿಲ್ಲ

ವಾರ್ತಾಭಾರತಿವಾರ್ತಾಭಾರತಿ7 April 2017 12:21 AM IST
share
ಡೇವಿಸ್‌ಕಪ್‌ನಲ್ಲಿ ಲಿಯಾಂಡರ್ ಪೇಸ್‌ಗೆ ಸ್ಥಾನವಿಲ್ಲ

  ಬೆಂಗಳೂರು, ಎ.6: ಉಜ್ಬೇಕಿಸ್ತಾನ ವಿರುದ್ಧ ಶುಕ್ರವಾರ ಆರಂಭವಾಗಲಿರುವ ಏಷ್ಯಾ/ಒಶಿಯಾನಿಯ ಡೇವಿಸ್ ಕಪ್ ಪಂದ್ಯಕ್ಕೆ ಪ್ರಕಟಿಸಲಾದ ಭಾರತ ತಂಡದಿಂದ ಹಿರಿಯ ಆಟಗಾರ ಲಿಯಾಂಡರ್ ಪೇಸ್‌ರನ್ನು ಹೊರಗಿಡಲಾಗಿದೆ. ಈ ಮೂಲಕ ಡೇವಿಸ್‌ಕಪ್‌ನ ಸ್ಟಾರ್ ಆಟಗಾರನಿಗೆ ಅವಮಾನ ಮಾಡಲಾಗಿದೆ.

  ಎ.7 ರಿಂದ 9ರ ತನಕ ನಡೆಯಲಿರುವ ಡೇವಿಸ್‌ಕಪ್‌ನಲ್ಲಿ ಭಾಗವಹಿಸುವ ಉದ್ದೇಶದಿಂದ ಪೇಸ್ ಮೆಕ್ಸಿಕೋದಿಂದ ಬೆಂಗಳೂರಿಗೆ ಬಂದು ಈಗಾಗಲೇ ಅಭ್ಯಾಸವನ್ನು ಆರಂಭಿಸಿದ್ದರು. ಭಾರತದ ಡೇವಿಸ್‌ಕಪ್ ನಾಯಕ ಮಹೇಶ್ ಭೂಪತಿ ಅವರು ಪೇಸ್‌ರನ್ನು ಕೊನೆಯಕ್ಷಣದಲ್ಲಿ ಸಕಾರಣವಿಲ್ಲದೆ ತಂಡದಿಂದ ಕೈಬಿಟ್ಟು ಅವರ ಬದಲಿಗೆ ರೋಹನ್ ಬೋಪಣ್ಣರನ್ನು ಆಯ್ಕೆ ಮಾಡಿದ್ದಾರೆ. ಬೋಪಣ್ಣ ಡೇವಿಸ್‌ಕಪ್‌ನ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಶ್ರೀರಾಮ್ ಬಾಲಾಜಿ ಅವರೊಂದಿಗೆ ಡಬಲ್ಸ್ ಪಂದ್ಯವನ್ನು ಆಡಲಿದ್ದಾರೆ.

   ಭಾರತದ ಹಿರಿಯ ಟೆನಿಸ್ ಪಟು ಪೇಸ್ 1990ರಲ್ಲಿ ಜೈಪುರದಲ್ಲಿ ನಡೆದಿದ್ದ ಡೇವಿಸ್‌ಕಪ್‌ನಲ್ಲಿ ಜಪಾನ್ ವಿರುದ್ಧ ಚೊಚ್ಚಲ ಪಂದ್ಯ ಆಡಿದ್ದರು. ಇದೀಗ 27 ವರ್ಷಗಳ ಬಳಿಕ ಮೊದಲ ಬಾರಿ ಡೇವಿಸ್ ಕಪ್ ತಂಡದಿಂದ ಪೇಸ್‌ರನ್ನು ಕೈಬಿಡಲಾಗಿದೆ. 42ರ ಹರೆಯದ ಪೇಸ್ ಇನ್ನೊಂದು ಪಂದ್ಯವಾಡಿದರೆ ಡೇವಿಸ್ ಕಪ್‌ನ ಇತಿಹಾಸದಲ್ಲಿ ಗರಿಷ್ಠ ಪಂದ್ಯಗಳನ್ನು ಆಡಿದ ದಾಖಲೆ ನಿರ್ಮಿಸುವ ಅವಕಾಶವಿತ್ತು. ತನ್ನ ಹಾಗೂ ಭೂಪತಿ ನಡುವಿನ ಭಿನ್ನಾಭಿಪ್ರಾಯವೇ ಈ ಬೆಳವಣಿಗೆಗೆ ಕಾರಣವಾಗಿರಬಹುದು ಎಂದು ಪೇಸ್ ಹೇಳಿದ್ದಾರೆ.

ಯೂಕಿ ಭಾಂಬ್ರಿ ಗಾಯಗೊಂಡು ಟೂರ್ನಿಯಿಂದ ಹೊರಗುಳಿದ ಹಿನ್ನೆಲೆಯಲ್ಲಿ ರಾಮ್‌ಕುಮಾರ್ ರಾಮನಾಥನ್ ಭಾರತದ ಸಿಂಗಲ್ಸ್ ಸವಾಲನ್ನು ಮುನ್ನಡೆಸಲಿದ್ದಾರೆ.

 ಶುಕ್ರವಾರ ಇಲ್ಲಿ ಆರಂಭವಾಗಲಿರುವ ಡೇವಿಸ್‌ಕಪ್‌ನ ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಟೆಮುರ್ ಇಸ್ಮೈಲೊವ್‌ರನ್ನು ಎದುರಿಸಲಿದ್ದಾರೆ. ಭಾಂಬ್ರಿ ಬದಲಿಗೆ ತಂಡಕ್ಕೆ ಆಯ್ಕೆಯಾಗಿರುವ ಗುಣೇಶ್ವರನ್ ಎರಡನೆ ಸಿಂಗಲ್ಸ್ ಪಂದ್ಯದಲ್ಲಿ ಸಂಜರ್ ಫೆಝೀವ್‌ರನ್ನು ಎದುರಿಸಲಿದ್ದಾರೆ.

ರವಿವಾರ ರಿವರ್ಸ್ ಸಿಂಗಲ್ಸ್ ಪಂದ್ಯ ನಡೆಯಲಿದ್ದು, ರಾಮನಾಥನ್ ಅವರು ಫಝೀವ್‌ರನ್ನು ಹಾಗೂ ಗುಣೇಶ್ವರನ್ ಅವರು ಇಸ್ಮೈಲೊವ್‌ರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X