Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲೇ ಭೂಮಿ...

ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲೇ ಭೂಮಿ ನೀಡಬೇಕು: ಜಿಗ್ನೇಶ್ ಮೆವಾನಿ

ಬೆಂಗಳೂರು ಚಲೋಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 April 2017 6:04 PM IST
share
ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲೇ ಭೂಮಿ ನೀಡಬೇಕು: ಜಿಗ್ನೇಶ್ ಮೆವಾನಿ

ಸಿದ್ದಾಪುರ, ಎ.7: ರಾಜ್ಯದ ಕಾಂಗ್ರೆಸ್ ಹಾಗೂ ಕೇಂದ್ರದ ಬಿಜೆಪಿ ಸರಕಾರಗಳ ಹೊಂದಾಣಿಕೆಯ ಫಲವಾಗಿ ದಿಡ್ಡಳ್ಳಿ ಆದಿವಾಸಿಗಳ ಗುಡಿಸಲು ತೆರವು ಮಾಡಲಾಗಿದೆ ಎಂದು ಗುಜರಾತಿನ ಹೋರಾಟಗಾರ ಜಿಗ್ನೇಶ್ ಮೆವಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ದಿಡ್ಡಳ್ಳಿಯಿಂದ ಪ್ರಾರಂಭವಾದ 'ಬೆಂಗಳೂರು ಚಲೋ' ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಡಿಸಂಬರ್ 7ರ ಬೆಳಗ್ಗಿನ ಜಾವ 4 ಗಂಟೆಗೆ ಪೊಲೀಸ್ ಹಾಗೂ ಅರಣ್ಯ ಇಲಾಖೆ ಜಿಲ್ಲಾಡಳಿತದ ಆದೇಶದಂತೆ ಜೆಸಿಬಿ ಮೂಲಕ ಅಮಾನವೀಯವಾಗಿ ದಿಡ್ಡಳ್ಳಿಯ ಆದಿವಾಸಿಗಳ ಗುಡಿಸಲನ್ನು ತೆರವುಗೊಳಿಸಿದ್ದು, ಮಕ್ಕಳು ಹಾಗೂ ಮಹಿಳೆಯರು ಹಸಿವು ಮತ್ತು ನೋವುಗಳನ್ನು ಅನುಭವಿಸಿರುವುದು ಸರಕಾರಕ್ಕೆ ನಾಚಿಕೆ ತರುವ ವಿಚಾರವಾಗಿದೆ ಎಂದರು.

ಜಿಲ್ಲೆಯ ಕಾಫಿ ತೋಟಗಳಲ್ಲಿ ಜೀತದಾಳುಗಳಾಗಿದ್ದವರು ಹೊರ ಬಂದಿರುವುದನ್ನು ಸಹಿಸಲಾಗದ ಕೆಲವರು ಜಿಲ್ಲಾಡಳಿತದ ಮೂಲಕ ಸರಕಾರದ ಮೇಲೆ ಒತ್ತಡ ತಂದಿದ್ದಾರೆ. ನಮ್ಮ ಹೋರಾಟ ಬೆಂಗಳೂರು ತಲುಪುವಷ್ಟರಲ್ಲಿ ದಿಡ್ಡಳ್ಳಿಯಲ್ಲೇ ಭೂಮಿ ನೀಡಲು ಸರಕಾರ ಮುಂದಾಗಬೇಕು. ಜೀತ ಪದ್ಧತಿಯ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಎಲ್ಲರಿಗೂ ವಾಸಿಸಲು ಮನೆ ನೀಡಬೇಕು. ಒಂದು ಲಕ್ಷಕ್ಕೂ ಹೆಚ್ಚು ಲ್ಯಾಂಡ್ ಬ್ಯಾಂಕ್ ಭೂಮಿ ಇದ್ದರೂ ಸರಕಾರ ಯಾಕೆ ಬಡವರಿಗೆ ಭೂಮಿ ಹಂಚುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಶ್ರೀಮಂತರು ಮತ್ತು ಬಹು ರಾಷ್ಟ್ರೀಯ ಕಂಪನಿಗಳು ಕೇಳಿದರೆ ತಕ್ಷಣ ಭೂಮಿ ನೀಡುವ ಸರಕಾರಗಳು ಬಡವರಿಗೆ ಭೂಮಿ ನೀಡದೆ ಮೇಲ್ವರ್ಗದ ಪರವಾಗಿದೆ ಎಂದು ಆರೋಪಿಸಿದರು.

ಗುಜರಾತಿನಲ್ಲಿ ಶೇ 15 ರಷ್ಟು ಆದಿವಾಸಿಗಳಿದ್ದು, ಕರ್ನಾಟಕದಲ್ಲಿ ಭೂಮಿ ಹಕ್ಕು ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಒಂದು ಮತವನ್ನೂ ನೀಡಬೇಡಿ ಎಂದು ಗುಜರಾತಿನ ಆದಿವಾಸಿಗಳಿಗೆ ತಿಳಿಸುವುದಾಗಿ ಎಚ್ಚರಿಸಿದರು. ದೇಶದಲ್ಲಿ ಮೋದಿಯ ಬಿಜೆಪಿ ಸರಕಾರ ಸಂವಿಧಾನವನ್ನು ಬುಡಮೇಲು ಮಾಡಿ, ಸಮಾಜವಾದಿ ದೇಶವನ್ನು ಹಾಳು ಮಾಡಿ ಒಂದು ಧರ್ಮದ ಆದಾರದಲ್ಲಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ನಮ್ಮ ಹೋರಾಟವನ್ನು ಮೋದಿ ಸರಕಾರಕ್ಕೂ ತಲುಪಬೇಕೆಂದ ಅವರು ರಾಜ್ಯ ಸರಕಾರ ಸ್ಪಂದಿಸದಿದ್ದರೆ ಹೋರಾಟವನ್ನು ದೆಹಲಿಗೆ ಕೊಂಡೊಯ್ಯಲಾಗುವುದು ಎಂದರು. ಸರಕಾರಗಳು ಬಡ ಜನತೆಯ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದ ಅವರು, ಎಲ್ಲಾ ಜನಪರ ಸಂಘಟನೆಗಳು ಜೊತೆ ಸೇರಿ ಪರ್ಯಾಯ ರಾಜಕೀಯವನ್ನು ಕಟ್ಟಿ ಬೆಳೆಸಬೇಕಾಗಿದೆ ಎಂದರು.

ನೂರಾರು ಆದಿವಾಸಿಗಳು ಘೋಷಣೆಗಳನ್ನು ಕೂಗುತ್ತಾ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದರು.

ಈ ಸಂದರ್ಭ ಭೂಮಿ ಮತ್ತು ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ನಿರ್ವಾಣಪ್ಪ, ಪತ್ರಕರ್ತೆ ಗೌರಿ ಲಂಕೇಶ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಪ್ರಮುಖರಾದ ಬಶೀರ್, ಕಂದೇಕಾಲ ಶ್ರೀನಿವಾಸ್, ಪೀಟರ್, ಹೇಮಂತ್, ಶೌಕತ್ ಅಲಿ, ನೇಮಿ ಚಂದ್, ರಫ್‌ಶೀರ್, ಮನ್ಸೂರ್, ಅಪ್ಪಾಜಿ, ಅಬ್ದುಲ್ ಅಡ್ಕಾರ್, ಸ್ವಾಮಿ, ಮುತ್ತಮ್ಮ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X