Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರಿಂದ ಹಲ್ಲೆ ಪ್ರಕರಣ:...

ಗೋರಕ್ಷಕರಿಂದ ಹಲ್ಲೆ ಪ್ರಕರಣ: ಐಸಿಯುನಲ್ಲಿ ದಾಖಲಾಗಿದ್ದ ವ್ಯಕ್ತಿಯನ್ನು ಠಾಣೆಯಲ್ಲಿ ಕೂಡಿಹಾಕಿದ ಪೊಲೀಸರು : ಆರೋಪ

ವಾರ್ತಾಭಾರತಿವಾರ್ತಾಭಾರತಿ7 April 2017 8:15 PM IST
share
ಗೋರಕ್ಷಕರಿಂದ ಹಲ್ಲೆ ಪ್ರಕರಣ: ಐಸಿಯುನಲ್ಲಿ ದಾಖಲಾಗಿದ್ದ ವ್ಯಕ್ತಿಯನ್ನು ಠಾಣೆಯಲ್ಲಿ ಕೂಡಿಹಾಕಿದ ಪೊಲೀಸರು : ಆರೋಪ

ಜೈಪುರ, ಎ.7: ಒಂದು ವಾರದ ಹಿಂದೆ ಅಝ್ಮತ್ ಖಾನ್ ತನ್ನ ಒಂದು ವರ್ಷದ ಮಗಳನ್ನು ಎತ್ತಿಕೊಂಡು ಆಕೆಯೊಡನೆ ಗಂಟೆಗಟ್ಟಲೆ ಆಟವಾಡುತ್ತಾ ಸಂಭ್ರಮದಲ್ಲಿದ್ದರು. ಆದರೆ ಇದೀಗ ಎದ್ದುನಿಲ್ಲಲೂ ಇವರಿಗೆ ಇನ್ನೊಬ್ಬರ ಸಹಾಯ ಹಸ್ತದ ಅಗತ್ಯವಿದೆ.

 ‘ಗೋರಕ್ಷಕ’ರಿಂದ ಅಮಾನುಷ ಥಳಿತಕ್ಕೊಳಗಾಗಿ ಬಳಿಕ ದಿನವಿಡೀ ಬೆಹ್ರೂರ್ ಪೊಲೀಸ್ ಠಾಣೆಯಲ್ಲಿ ಯಾವುದೇ ವೈದ್ಯಕೀಯ ಚಿಕಿತ್ಸೆಯಿಲ್ಲದೆ ದಿನವಿಡೀ ಕಳೆದ ಬಳಿಕ 22ರ ಹರೆಯದ ಅಝ್ಮತ್ ಖಾನ್‌ಗೆ ಈಗ ಎದ್ದುನಿಲ್ಲಲೂ ಸಾಧ್ಯವಾಗುತ್ತಿಲ್ಲ. ಮೇವಟ್‌ನಲ್ಲಿ ರುವ ತನ್ನ ಮನೆಯಲ್ಲಿ ಮಂಚದ ಮೇಲೆ ಮಲಗಿಕೊಂಡು ಅಸಹಾಯಕರಾಗಿ ಕುಟುಂಬ ವರ್ಗದವರ ಮುಖ ನೋಡುವುದು ಮತ್ತು ಆಗಿಂದಾಗ್ಗೆ ಮನೆಗೆ ಭೇಟಿ ನೀಡುತ್ತಿರುವ ಮಾಧ್ಯಮದ ಮಂದಿಯ ಪ್ರಶ್ನೆಗಳಿಗೆ ಉತ್ತರಿಸುವುದು ಇದು ಅವರ ದಿನಚರಿಯಾಗಿ ಬಿಟ್ಟಿದೆ.

ಗೋರಕ್ಷಕರ ಆಕ್ರಮಣದ ಬಳಿಕ ಪ್ರಜ್ಞಾಹೀನನಾಗಿ ಬಿದ್ದಿದ್ದ ನನ್ನ ಸೋದರನನ್ನು ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕ(ಐಸಿಯು)ಕ್ಕೆ ದಾಖಲಿಸಲಾಯಿತು. ಎರಡು ದಿನಗಳ ಬಳಿಕ ಆತನನ್ನು ಇನ್ನಿಬ್ಬರ ಸಹಿತ ಪೊಲೀಸ್ ಠಾಣೆಗೆ ಕರೆತರಲಾಯಿತು. ಅಲ್ಲಿ ಅವರನ್ನು ದಿನವಿಡೀ ಇರಿಸಲಾಯಿತು. ಈ ವೇಳೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸಲಾಗಿತ್ತು . ಇದರಿಂದ ಸೋದರನ ಆರೋಗ್ಯಸ್ಥಿತಿ ಹದಗೆಟ್ಟಿತು ಎಂದು ಅಝ್ಮತ್‌ಖಾನ್ ಸೋದರ ಯೂಸುಫ್ ತಿಳಿಸಿದ್ದಾರೆ.

ಠಾಣೆಯ ನೆಲದ ಮೇಲೆ ತನ್ನನ್ನು ಮಲಗಿಸಲಾಗಿತ್ತು. ತನ್ನನ್ನು ಆಸ್ಪತ್ರೆಯ ಐಸಿಯುವಿನಿಂದ ಠಾಣೆಗೆ ಕರೆತರಲು ಕಾರಣ ಏನು ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ. ಅಲ್ಲದೆ ಆಸ್ಪತ್ರೆಗೆ ತೆರಳಲೂ ಬಿಡಲಿಲ್ಲ ಎಂದು ಅಝ್ಮತ್ ಖಾನ್ ತಿಳಿಸಿದ್ದಾರೆ.

 ಎಪ್ರಿಲ್ 1ರಂದು ಜೈಪುರದ ಮಾರುಕಟ್ಟೆಯಲ್ಲಿ (ಹಾಲು) ಕರೆಯುವ ಹಸುವೊಂದನ್ನು ಖರೀದಿಸಿದ್ದ ಖಾನ್ ಮತ್ತು ಇನ್ನಿತರರು ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಗೋರಕ್ಷಕರಿಂದ ಹಲ್ಲೆಗೆ ಒಳಗಾಗಿದ್ದರು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಪೆಹ್ಲೂ ಖಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಪೆಹ್ಲೂಖಾನ್ ಮೃತಪಟ್ಟ ಬಳಿಕ ಠಾಣೆಗೆ ಹೋಗಿ ನನ್ನ ಸೋದರ ಹಾಗೂ ಇತರ ಮೂವರನ್ನು ಬಿಡುಗಡೆಗೊಳಿಸುವಂತೆ ಪೊಲೀಸರನ್ನು ಬೇಡಿಕೊಂಡೆವು. ಅಝ್ಮತ್ ದೇಹಸ್ಥಿತಿ ಎಷ್ಟೊಂದು ಬಿಗಡಾಯಿಸಿತ್ತು ಎಂದರೆ ಅವರನ್ನು ತಕ್ಷಣ ಇನ್ನೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಯೂಸುಫ್ ತಿಳಿಸಿದ್ದಾರೆ.

ಮೇವಾಟ್‌ನಲ್ಲಿ ನೂರಾರು ವರ್ಷಗಳಿಂದ ಹಿಂದೂ ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಈ ಘಟನೆಯನ್ನು ನಂಬಲಾಗುತ್ತಿಲ್ಲ. ಇನ್ನೂ 22ರ ಹರೆಯದಲ್ಲಿರುವ ಅಝ್ಮತ್ ಹಾಸಿಗೆ ಹಿಡಿದಿರುವುದು ಆಘಾತಕಾರಿಯಾಗಿದೆ ಎಂದು ನೆರೆಮನೆಯ ಮಂಗಲ್ ರಾಮ್ ಹೇಳಿದ್ದಾರೆ.

ಗೋರಕ್ಷಕರು ಅಮಾಯಕರ ಮೇಲೆ ಹಲ್ಲೆ ನಡೆಸಿ ಓರ್ವನನ್ನು ಹತ್ಯೆ ಮಾಡಿದ್ದಾರೆ. ಅವರನ್ನು ಬಂಧಿಸುವ ಬದಲು ಪೊಲೀಸರು ಗಾಯಗೊಂಡು ಐಸಿಯು ಘಟಕದಲ್ಲಿ ದಾಖಲಾಗಿದ್ದ ವ್ಯಕ್ತಿಯನ್ನು ದಿನವಿಡೀ ಚಿಕಿತ್ಸೆಯ ವ್ಯವಸ್ಥೆ ಮಾಡದೆ ಠಾಣೆಯಲ್ಲಿರಿಸಿದ್ದಾರೆ. ಇದು ಯಾವ ರೀತಿಯ ಕಾನೂನಿನ ಪರಿಪಾಲನೆ ಎಂದು ಅಝ್ಮತ್ ಕುಟುಂಬದ ನಿಕಟ ಸ್ನೇಹಿತ ಹಾಜಿ ಮುಹಮ್ಮದಿನ್ ಪ್ರಶ್ನಿಸುತ್ತಾರೆ.

ಆದರೆ ಈ ಆರೋಪ ನಿರಾಕರಿಸಿರುವ ಬೆಹ್ರೂರ್ ಡಿಎಸ್‌ಪಿ ಪರ್ಮಾಲ್ ಸಿಂಗ್, ಇದು ಸುಳ್ಳು ಆರೋಪ. ಐಸಿಯುವಿನಲ್ಲಿ ದಾಖಲಾಗಿರುವವರನ್ನು ನಾವೇಕೆ ಠಾಣೆಗೆ ಕರೆದೊಯ್ಯಬೇಕು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X