Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿವಸೇನೆಯ ಸಂಸದನ ಮೇಲಿದ್ದ ವಿಮಾನಯಾನ...

ಶಿವಸೇನೆಯ ಸಂಸದನ ಮೇಲಿದ್ದ ವಿಮಾನಯಾನ ನಿರ್ಬಂಧ ತೆರವು

ಏರ್‌ಇಂಡಿಯಾ ಪೈಲಟ್‌ಗಳ ಸಂಘಟನೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ7 April 2017 9:00 PM IST
share
ಶಿವಸೇನೆಯ ಸಂಸದನ ಮೇಲಿದ್ದ ವಿಮಾನಯಾನ ನಿರ್ಬಂಧ ತೆರವು

  ಹೊಸದಿಲ್ಲಿ, ಎ.7: ವಿಮಾನಯಾನ ಸಚಿವಾಲಯದ ಒತ್ತಡಕ್ಕೆ ಮಣಿದಿರುವ ಏರ್ ಇಂಡಿಯಾ , ವಿಮಾನ ಯಾನದ ವೇಳೆ ಸಿಬ್ಬಂದಿಯೋರ್ವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಶಿವಸೇನೆಯ ಸಂಸದ ರವೀಂದ್ರ ಗಾಯಕ್‌ವಾಡ್ ಅವರ ಮೇಲಿದ್ದ ವಿಮಾನಯಾನ ನಿರ್ಬಂಧವನ್ನು ತೆರವುಗೊಳಿಸಿದೆ.

ಇತರ ಐದು ವಿಮಾನಯಾನ ಸಂಸ್ಥೆಗಳೂ ಇದೇ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ. ಅದಾಗ್ಯೂ, ಗಾಯಕ್‌ವಾಡ್ ಲಿಖಿತರೂಪದಲ್ಲಿ ಕ್ಷಮಾಪಣೆ ಕೇಳಿದರೆ ಮಾತ್ರ ಅವರ ಮೇಲಿರುವ ವಿಮಾನಯಾನ ನಿರ್ಬಂಧ ತೆರವುಗೊಳಿಸುವುದಾಗಿ ಏರ್ ಇಂಡಿಯಾ ಪೈಲಟ್‌ಗಳ ಯೂನಿಯನ್ ಆಗಿರುವ ಭಾರತೀಯ ವಾಣಿಜ್ಯ ಪೈಲಟ್‌ಗಳ ಸಂಘಟನೆ ತಿಳಿಸಿದೆ.

 ವಿಮಾನಯಾನ ಸಚಿವಾಲಯದ ನಿರ್ದೇಶನದ ಮೇರೆಗೆ ಗಾಯಕ್‌ವಾಡ್ ಮೇಲಿದ್ದ ವಿಮಾನಯಾನ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಸರಕಾರೀ ಸಂಸ್ಥೆಯಾಗಿರುವ ಇಂಡಿಯನ್ ಏರ್‌ಲೈನ್ಸ್‌ನ ಅಧಿಕಾರಿಯೋರ್ವರು ತಿಳಿಸಿದ್ದಾರೆ. ವಾಯುಯಾನ ಸಚಿವ ಅಶೋಕ್ ಗಜಪತಿರಾಜು ಅವರಿಗೆ ಬರೆದಿರುವ ಪತ್ರದಲ್ಲಿ ಗಾಯಕ್‌ವಾಡ್ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ ಅವರು ಕ್ಷಮಾಪಣೆ ಕೇಳಿರಲಿಲ್ಲ.

ತನ್ನ ನಡವಳಿಕೆ ಮುಂದಿನ ದಿನಗಳಲ್ಲಿ ಮತ್ತೆ ಮರುಕಳಿಸಬಹುದು ಎಂಬ ಭಾವನೆ ಸರಿಯಲ್ಲ. ಪ್ರಕರಣದ ಬಗ್ಗೆ ಇದೀಗ ಸಾಗುತ್ತಿರುವ ತನಿಖೆ ವಾಸ್ತವ ಸಂಗತಿಯನ್ನು ಅನಾವರಣಗೊಳಿಸಲಿದೆ ಎಂದು ಗಾಯಕ್‌ವಾಡ್ ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದರು.

  ಈ ಪ್ರಕರಣದ ಬಗ್ಗೆ ಸಂಸತ್ತಿನಲ್ಲಿ ಶಿವಸೇನೆಯ ಸಂಸದರು ಭಾರೀ ಗದ್ದಲ ಎಬ್ಬಿಸಿದ್ದರು. ಕೇಂದ್ರದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ಶಿವಸೇನೆ, ಮುಂಬೈಯಿಂದ ಹೊರಡುವ ಎಲ್ಲಾ ವಿಮಾನಯಾನಗಳ ಸಂಚಾರವನ್ನು ತಡೆಹಿಡಿಯುವುದಾಗಿ ಮತ್ತು ಎನ್‌ಡಿಎ ಸಭೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಒಡ್ಡಿತ್ತು.

 ವಾಯುಯಾನದ ಮೇಲೆ ನಿರ್ಬಂಧ ಹೇರಿದ ಪರಿಣಾಮ ಗುರುವಾರ ನಡೆದ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಗಾಯಕ್‌ವಾಡ್ ಬಾಡಿಗೆ ವಿಮಾನದಲ್ಲಿ ಪ್ರಯಾಣಿಸ ಬೇಕಾಯಿತು. ಈ ಹಿನ್ನೆಲೆಯಲ್ಲಿ , ನಿರ್ಬಂಧ ತೆರವುಗೊಳಿಸುವಂತೆ ಸಚಿವ ರಾಜು ಏರ್‌ಇಂಡಿಯಾ ಸಂಸ್ಥೆಗೆ ಪತ್ರ ಬರೆದಿದ್ದರು.

  ಆದರೆ ಗಾಯಕ್‌ವಾಡ್ ಬೇಷರತ್ ಕ್ಷಮಾಪಣೆ ಕೇಳುವವರೆಗೆ ಅವರ ಮೇಲಿನ ವಿಮಾನಯಾನ ನಿರ್ಬಂಧ ತೆರವು ಸರಿಯಲ್ಲ ಎಂದು ಏರ್‌ಇಂಡಿಯಾ ಕ್ಯಾಬಿನ್ ಸಿಬ್ಬಂದಿಗಳ ಸಂಘ ಪ್ರತಿಕ್ರಿಯೆ ನೀಡಿದೆ. ನಿರ್ಬಂಧ ತೆರವುಗೊಳಿಸುವ ಸಚಿವಾಲಯದ ಅಥವಾ ಸಂಸತ್ತಿನ ನಿರ್ಧಾರವು ಸಂಸ್ಥೆಯ ಸಿಬ್ಬಂದಿಗಳ ಮನೋಬಲವನ್ನು ಕುಗ್ಗಿಸುತ್ತದೆ ಎಂದು ಏರ್‌ಇಂಡಿಯಾ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಅಶ್ವನಿ ಲೊಹಾನಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.

    ಗಾಯಕ್‌ವಾಡ್ ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ ಚಿಕಾಗೊ ಮತ್ತು ಟೋಕಿಯೊ ಸಮ್ಮೇಳನದ ತೀರ್ಮಾನಕ್ಕೆ ಬದ್ಧರಿರುವುದಾಗಿ ಮತ್ತು ವಾಯುಯಾನ ನಿಯಮ ಪಾಲಿಸುವುದಾಗಿ ಲಿಖಿತ ರೂಪದಲ್ಲಿ ಪ್ರಮಾಣೀಕರಿಸಬೇಕು. ವಿಮಾನದ ಸಿಬ್ಬಂದಿಗಳ ರಕ್ಷಣೆ ಮತ್ತು ಸಾರ್ವಜನಿಕ ನಡವಳಿಕೆಯ ಸಂಸ್ಕಾರವನ್ನು ಪಾಲಿಸುವುದಾಗಿ ಭರವಸೆ ನೀಡದ ಹೊರತು ಅವರ ಮೇಲಿನ ನಿರ್ಬಂಧ ಸಡಿಲಿಕೆ ಸಲ್ಲದು. ರವೀಂದ್ರ ಗಾಯಕ್‌ವಾಡ್ ವಿಮಾನ ಯಾನಕ್ಕೆ ಹಾಗೂ ವಿಮಾನದ ಸಿಬ್ಬಂದಿಗಳ ಸುರಕ್ಷತೆಗೆ ಗಂಡಾಂತರವಾಗಿದ್ದಾರೆ. ಅವರನ್ನು ‘ಕಿರುಬೆರಳಿಗೂ ಒಂದು ಸಣ್ಣ ನೋವು’(ಕನಿಷ್ಠ ಕ್ಷಮಾಪಣೆ ಕೇಳದೆ) ಮಾಡದೆ ಬಿಟ್ಟರೆ ಅದೊಂದು ನಾಚಿಕೆಗೇಡಿನ ವಿಷಯವಾಗಿದೆ. ಆದ್ದರಿಂದ ಅವರ ಮೇಲಿರುವ ವಿಮಾನಯಾನ ನಿಷೇದ ತೆರವುಗೊಳಿಸುವ ಮೊದಲು ಸರಕಾರ ಯೋಚಿಸಬೇಕು ಎಂದು ಸಂಘ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X