Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮ್ ಬಾಹುಳ್ಯದ ಈ ಗ್ರಾಮದಲ್ಲಿ...

ಮುಸ್ಲಿಮ್ ಬಾಹುಳ್ಯದ ಈ ಗ್ರಾಮದಲ್ಲಿ ಹೈನುಗಾರಿಕೆಯೇ ಪ್ರಧಾನ ಉದ್ಯೋಗ

ವಾರ್ತಾಭಾರತಿವಾರ್ತಾಭಾರತಿ7 April 2017 4:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಸ್ಲಿಮ್ ಬಾಹುಳ್ಯದ ಈ ಗ್ರಾಮದಲ್ಲಿ ಹೈನುಗಾರಿಕೆಯೇ ಪ್ರಧಾನ ಉದ್ಯೋಗ

 ಚಂಡೀಗಢ, ಎ.7: ಗೋರಕ್ಷಕರಿಂದ ಅಮಾನುಷ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂಖಾನ್ ಹರ್ಯಾಣಾದ ಮೇವಟ್ ಜಿಲ್ಲೆಯ ಜೈಸಿಂಗ್‌ಪುರ ಗ್ರಾಮದ ನಿವಾಸಿ. ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಈ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿರುವ 1000 ಕುಟುಂಬಗಳ ಪೈಕಿ ಸುಮಾರು 800 ಕುಟುಂಬಗಳು ಹೈನುಗಾರಿಕೆಯನ್ನೇ ಜೀವನಧಾರವನ್ನಾಗಿ ನೆಚ್ಚಿಕೊಂಡಿವೆ.

 ಜೈಪುರದ ಮಾರುಕಟ್ಟೆಗೆ ಹೋಗಿ ತಮಗೆ ಬೇಕಾದ ಗೋವುಗಳನ್ನು ಖರೀದಿಸಿ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವುದು ಈ ಕುಟುಂಬಗಳು ಹಲವು ವರ್ಷಗಳಿಂದ ನಡೆಸಿಕೊಂಡು ಬಂದಿದ್ದ ಪದ್ದತಿಯಾಗಿತ್ತು. ಈ ಗ್ರಾಮದಿಂದ ಹಾಲನ್ನು ದಿಲ್ಲಿ, ಫರೀದಾಬಾದ್ ನಗರಗಳಿಗೆ ಸರಬರಾಜು ಮಾಡಲಾಗುತ್ತಿದೆ. ಆದರೆ ಇದೀಗ ಈ ಗ್ರಾಮದವರು ಭಯದ ನೆರಳಲ್ಲೇ ದಿನ ಕಳೆಯುವ ಪರಿಸ್ಥಿತಿ ಬಂದಿದೆ.

 ಗೋವುಗಳನ್ನು ತಮ್ಮ ಕುಟುಂಬ ಸದಸ್ಯರಂತೆಯೇ ಇಲ್ಲಿ ಪರಿಗಣಿಸಲಾಗುತ್ತದೆ. 56 ವರ್ಷದ ಮುಹಮ್ಮದ್ ಯೂನುಸ್ ಎಂಬವರಿಗೆ ಹೈನುಗಾರಿಕೆಯೇ ಪ್ರಧಾನ ಉದ್ಯೋಗ. ಇವರ ದನದ ಹಟ್ಟಿಯಲ್ಲಿ ಫ್ಯಾನ್‌ಗಳನ್ನು ಅಳವಡಿಸಲಾಗಿದೆ. ಪ್ರತೀ ತಿಂಗಳೂ ಸುಮಾರು 50000 ರೂ.ಯನ್ನು ಪಶುಗಳ ಆಹಾರಕ್ಕೆಂದೇ ವ್ಯಯಿಸುತ್ತಿದ್ದಾರೆ.

  ಆದರೆ ಈ ಕುಟುಂಬಗಳು ಈಗ ಭಯದ ನೆರಳಲ್ಲಿ ಬದುಕುವಂತಾಗಿದೆ. ಪೆಹ್ಲೂಖಾನ್ ಮೇಲೆ ಗುಂಪೊಂದು ಹಲ್ಲೆ ನಡೆಸುತ್ತಿರುವುದನ್ನು ಕಣ್ಣಾರೆ ಕಂಡಿದ್ದರು ಮುಹಮ್ಮದ್ ಯೂನುಸ್. ಪೆಹ್ಲೂಖಾನ್ ಮೇಲೆ ಹಲ್ಲೆ ನಡೆಸಿದ ಗುಂಪು ಬಳಿಕ ಅಝ್ಮತ್ ಮೇಲೆ ಹಲ್ಲೆ ನಡೆಸಿದಾಗ ಆತ ಪ್ರಜ್ಞೆತಪ್ಪಿ ರಸ್ತೆಯಲ್ಲೇ ಕೆಳಗುರುಳಿದ. ಆದರೂ ಆತನ ಮೇಲೆ ಹಾಕಿಸ್ಟಿಕ್‌ನಿಂದ ಹಲ್ಲೆ ನಡೆಸಲಾಯಿತು. ನಾನು ಹೇಗೆ ಬದುಕಿ ಬಂದೆ ಎಂದು ಈಗಲೂ ಅಚ್ಚರಿಯಾಗುತ್ತಿದೆ ಎಂದು ಯೂನುಸ್ ತಿಳಿಸಿದ್ದಾರೆ.

ನಾವು ಮುಸ್ಲಿಮರೆಂಬ ಏಕೈಕ ಕಾರಣಕ್ಕೆ ಹಸುಗಳ ಮೇಲೆ ನಮಗೆ ಮಮತೆಯಿಲ್ಲ ಎಂದು ಪರಿಗಣಿಸುವುದು ಸರಿಯಲ್ಲ . ಈ ಗ್ರಾಮದಲ್ಲಿರುವ ಜನರು ಗೋವುಗಳ ಬಗ್ಗೆ ಗೋರಕ್ಷಕರಿಗಿಂತ ಹೆಚ್ಚಿನ ಕಾಳಜಿ ಹೊಂದಿದ್ದಾರೆ ಎನ್ನುತ್ತಾರೆ ಜಬಿನ್ ಎಂಬ ಸ್ಥಳೀಯ ನಿವಾಸಿ.

ಮುಸ್ಲಿಮರೂ ದನದ ಹಾಲು ಕುಡಿಯುತ್ತಾರೆ, ದನದ ಬಗ್ಗೆ ಕಾಳಜಿ ವಹಿಸುತ್ತಾರೆ. ಅವರೂ ಕೂಡಾ ಗೋರಕ್ಷಕರೇ ಎನ್ನುತ್ತಾರೆ ಮತ್ತೋರ್ವ ಸ್ಥಳೀಯ ನಿವಾಸಿ ಮುಸ್ತಾಕ್ ಅಹ್ಮದ್. ಗೋರಕ್ಷಕರು ಡಕಾಯಿತರು. ಹಸುಗಳ ರಕ್ಷಣೆಯ ನೆಪ ನೀಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಹಸುಗಳ ಅಕ್ರಮ ಸಾಗಾಟಗಾರರ ದಂಧೆ ಎಗ್ಗಿಲ್ಲದೆ ಸಾಗುತ್ತಿದೆ. ನಮ್ಮಂತಹ ಗೋ ಪಾಲಕರು ಹಲ್ಲೆಗೊಳಗಾಗಿ ಪ್ರಾಣ ಬಿಡುತ್ತಿದ್ದಾರೆ ಎನ್ನುತ್ತಾರೆ ಅಹ್ಮದ್.

   ಜೈಪುರದಲ್ಲಿ ನಡೆಯುವ ಜಾನುವಾರು ಜಾತ್ರೆಗೆ ಹೋಗಿ ಖರೀದಿಸುವುದು ಹಲವಾರು ವರ್ಷಗಳಿಂದ ನಡೆದುಕೊಂಡ ಬಂದಿರುವ ಪ್ರಕ್ರಿಯೆಯಾಗಿದೆ. ಅಲ್ಲಿ ಗೋವುಗಳು ಕಡಿಮೆ ದರದಲ್ಲಿ ದೊರೆಯುತ್ತವೆ. ಹೈನುಗಾರರಲ್ಲಿ ಜನಪ್ರಿಯವಾಗಿರುವ ಶೆಖಾವತಿ ತಳಿಯ ಗೋವುಗಳು ಜೈಪುರ ಜಾನುವಾರು ಜಾತ್ರೆಯಲ್ಲಿ ದೊರೆಯುತ್ತದೆ. ಹೈನುಗಾರಿಕೆ ನಡೆಸಲೂ ಗೋವುಗಳನ್ನು ತರುವಂತಿಲ್ಲ ಎಂದಾದರೆ ಮತ್ತೆ ಇಲ್ಲಿ ಹೇಳಲೇನು ಉಳಿದಿದೆ ಎಂದು ಪ್ರಶ್ನಿಸುತ್ತಾರೆ ಹೈನುಗಾರಿಕೆ ವೃತ್ತಿಯ ಉಮರ್ ಮುಹಮ್ಮದ್. ಪ್ರತೀ ದಿನ 1000 ಲೀಟರ್‌ಗೂ ಹೆಚ್ಚಿನ ಹಾಲು ಇಲ್ಲಿ ಉತ್ಪಾದನೆಯಾಗುತ್ತಿದೆ. ಬಹುತೇಕ ಹೈನುಗಾರರು ಮುಸ್ಲಿಮರು. ದಿನಕ್ಕೆ ಎರಡು ಬಾರಿ ಹಾಲನ್ನು ಸಂಗ್ರಹಿಸಿ ದಿಲ್ಲಿ , ಗುರ್ಗಾಂವ್ ಮತ್ತು ಫರೀದಾಬಾದ್‌ನಲ್ಲಿರುವ ಹಾಲಿನ ಡೈರಿಗೆ ರವಾನಿಸಲಾಗುತ್ತದೆ ಎಂದು ಈ ಪ್ರಕ್ರಿಯೆಯ ಉಸ್ತುವಾರಿ ವಹಿಸಿರುವ ಅಬ್ದುಲ್ ಖಯೂಂ ತಿಳಿಸಿದ್ದಾರೆ.

ಆದರೆ ಇದೀಗ ಗ್ರಾಮದಲ್ಲಿ ನೀರವ ವೌನದ ವಾತಾವರಣವಿದೆ. ಗೋರಕ್ಷಕರು ನಡೆಸಿದ ಹಲ್ಲೆಯ ಕುರಿತ ವರದಿ, ಇತ್ತೀಚಿನ ಬೆಳವಣಿಗೆಯನ್ನು ಟಿವಿಯಲ್ಲಿ ವೀಕ್ಷಿಸುತ್ತಾ, ಮುಂದೇನಾಗಬಹುದು ಎಂಬ ಭಯದಲ್ಲೇ ದಿನ ಕಳೆಯುತ್ತಿದ್ದಾರೆ ಜೈಸಿಂಗ್‌ಪುರ ಗ್ರಾಮದ ಹೈನುಗಾರರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X