Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಶಾಲೆಗಳಲ್ಲಿ ಅನಧಿಕೃತ ಶಾಲಾ...

ಸರಕಾರಿ ಶಾಲೆಗಳಲ್ಲಿ ಅನಧಿಕೃತ ಶಾಲಾ ಪೂರ್ವ ಶಿಕ್ಷಣ ವಿರೋಧಿಸಿ ಅಂಗನವಾಡಿ ನೌಕರರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ7 April 2017 9:48 PM IST
share
ಸರಕಾರಿ ಶಾಲೆಗಳಲ್ಲಿ ಅನಧಿಕೃತ ಶಾಲಾ ಪೂರ್ವ ಶಿಕ್ಷಣ ವಿರೋಧಿಸಿ ಅಂಗನವಾಡಿ ನೌಕರರಿಂದ ಧರಣಿ

ಉಡುಪಿ, ಎ.7: ಉಡುಪಿ ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಅನಧಿಕೃತ ಶಾಲಾ ಪೂರ್ವ ಶಿಕ್ಷಣ (ಆಂಗ್ಲ ಮಾಧ್ಯಮ) ನಡೆಸುತ್ತಿರುವುದನ್ನು ವಿರೋಧಿಸಿ ಮತ್ತು ಜಿಲ್ಲಾಧಿಕಾರಿಗಳ ಮೇಲೆ ಮರಳು ಮಾಫಿಯಾ ನಡೆಸಿರುವ ಕೊಲೆಯತ್ನವನ್ನು ಖಂಡಿಸಿ ಕರ್ನಾಟಕ ರಾಜ್ಯ ಅಂಗನ ವಾಡಿ ನೌಕರರ ಸಂಘ(ಸಿಐಟಿಯು) ಉಡುಪಿ ಜಿಲ್ಲಾ ಸಮಿತಿ ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿತು.

 ಜಿಲ್ಲೆಯ ಕೆಲವು ಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತರ ಸಹಕಾರ ದೊಂದಿಗೆ ಅನಧಿಕೃತವಾಗಿ 3-6ವರ್ಷದೊಳಗಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಿಂದ 6ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಸರಕಾರಕ್ಕೆ ನೀಡಿದ್ದು, ಸಂಖ್ಯೆಗೆ ಅನುಗುಣವಾಗಿ ಪೌಷ್ಠಿಕ ಆಹಾರ ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ ಈ ವರ್ಷದಿಂದ ಮಕ್ಕಳಿಗೆ ವಾರದ ಎಲ್ಲ ದಿನ ಹಾಲು, ಮೊಟ್ಟೆಗಳನ್ನು ವಿತರಿಸಲು ಉದ್ದೇಶಿಸಿದೆ. ಸರಕಾರಿ ಶಾಲೆಗಳಲ್ಲಿ 0-6ವರ್ಷದ ಮಕ್ಕಳನ್ನು ದಾಖಲಿಸಿಕೊಂಡರೆ ಶಾಲಾ ವ್ಯಾಪ್ತಿಯ 10-12 ಅಂಗನವಾಡಿ ಕೇಂದ್ರಗಳ ಮಕ್ಕಳು ಪೌಷ್ಠಿಕ ಆಹಾರದಿಂದ ವಂಚಿತ ರಾಗುತ್ತಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಆರೋಪಿಸಿದ್ದಾರೆ.

ಆದುದರಿಂದ ಸರಕಾರ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಎಲ್‌ಕೆಜಿ, ಯುಕೆಜಿ ಆಂಗ್ಲ ಮಾಧ್ಯಮ ಶಿಕ್ಷಣ ವಿಸ್ತರಿಸಲು ಕ್ರಮ ತೆಗೆದುಕೊಳ್ಳಬೇಕು. ಕಾರ್ಯಕರ್ತೆ ಸಹಾಯಕಿಯರಿಗೆ ಕಾಲಕಾಲಕ್ಕೆ ಸೂಕ್ತವಾದ ತರಬೇತಿ ನೀಡ ಬೇಕು. ಇಲಾಖೆಯಿಂದ ಉತ್ತಮ ಗುಣಮಟ್ಟದ ಪಠ್ಯಪುಸ್ತಕ ಪರಿಕರಗಳು, ಆಟಿಕೆಗಳನ್ನು ನೀಡಬೇಕು. ಇಲಾಖೆಯಿಂದ ಸಮವಸ್ತ್ರ ಶೂಗಳನ್ನು ಒದಗಿಸ ಬೇಕು ಎಂದು ಅವರು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಅನುರಾಧ ಮೂಲಕ ಮುಖ್ಯ ಮಂತ್ರಿಗಳಿಗೆ ಈ ಕುರಿತ ಮನವಿಯನ್ನು ಸಲ್ಲಿಸಲಾಯಿತು. ಸಮಿತಿಯ ಜಿಲ್ಲಾಧ್ಯಕ್ಷೆ ಗೀತಾ ಶೆಟ್ಟಿ, ಪದಾಧಿಕಾರಿಗಳಾದ ಜಯಲಕ್ಷ್ಮಿ ಎಸ್.ಶೆಟ್ಟಿ, ಶೈಲಾ ಸಾಸ್ತಾನ, ತಾರಾ ಕೋಟ್ಯಾನ್, ಶಂಕುಂತಳಾ ಹಿರೇಬೆಟ್ಟು, ವಾಣಿ ಪಡುಬಿದ್ರಿ, ಸಿಐಟಿಯು ಮುಖಂಡರಾದ ವಿಶ್ವನಾಥ ರೈ, ಬಾಲಕೃಷ್ಣ ಶೆಟ್ಟಿ, ಕೆ.ಶಂಕರ್, ಕವಿವಾರ್ ಮೊದಲಾದವರು ಉಪಸ್ಥಿತರಿದ್ದರು.

ಬೆಂಗಳೂರು ಚಲೋ ಎಚ್ಚರಿಕೆ

ರಾಜ್ಯ ಮುಖ್ಯಮಂತ್ರಿ ನೀಡಿದ ಭರವಸೆಯಂತೆ ಅಂಗನವಾಡಿ ನೌಕರರಿಗೆ ಎ.10ರಂದು ವೇತನ ಹೆಚ್ಚಳ ಘೋಷಣೆ ಮಾಡದೆ ಮಾತಿಗೆ ತಪ್ಪಿದರೆ ಎ.11 ರಿಂದ ಮತ್ತೆ ವಿಧಾನಸೌಧ ಚಲೋ ನಡೆಸಲು ಸಂಘಟನೆಯ ರಾಜ್ಯ ಸಮಿತಿ ನಿರ್ಧರಿಸಿದೆ ಎಂದು ಜಿಲ್ಲಾಧ್ಯಕ್ಷೆ ಗೀತಾ ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X