Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ' ರೈಲ್ವೆ ಚಿಲ್ಡ್ರನ್‌ ' ಮನೋಹರ್‌ಗೆ...

' ರೈಲ್ವೆ ಚಿಲ್ಡ್ರನ್‌ ' ಮನೋಹರ್‌ಗೆ ಬಾಲನಟ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ7 April 2017 10:05 PM IST
share
 ರೈಲ್ವೆ ಚಿಲ್ಡ್ರನ್‌  ಮನೋಹರ್‌ಗೆ ಬಾಲನಟ ಪ್ರಶಸ್ತಿ

ಉಡುಪಿ, ಎ.7: ಉಡುಪಿ ಮೂಲದ ಸರಕಾರೇತರ ಸಂಸ್ಥೆ 'ಟಿನ್‌ಡ್ರಮ್ ಬೀಟ್ಸ್‌' ಕ್ಲೌಡ್ ಫಂಡಿಂಗ್ ತತ್ವದ ಮೂಲಕ ನಿರ್ಮಿಸಿದ ಚೊಚ್ಚಲ ಕನ್ನಡ ಚಲನಚಿತ್ರ 'ರೈಲ್ವೆ ಚಿಲ್ಡ್ರನ್‌' ನಲ್ಲಿ ನಟಿಸಿದ ಬೆಂಗಳೂರು ಮೂಲದ ಮನೋಹರ್ ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಲ್ಲಿ ಅತ್ಯುತ್ತಮ ಬಾಲನಟ ಪ್ರಶಸ್ತಿಗೆ ಬಾಜನನಾಗಿದ್ದಾನೆ.

 ರೈಲುಗಳ ಮೂಲಕ ಮನೆಯಿಂದ ಓಡಿಹೋಗುವ ಮಕ್ಕಳ ಕುರಿತಂತೆ ತಯಾರಿಸಲಾದ 'ರೈಲ್ವೆ ಚಿಲ್ಡ್ರನ್‌' ಚಿತ್ರವನ್ನು ಸಾರ್ವಜನಿಕರಿಂದ ದೇಣಿಗೆ ಪಡೆದು ಸುಮಾರು 40 ಲಕ್ಷ ರೂ.ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಎರಡು ಗಂಟೆಗಳ ಈ ಪೂರ್ಣಪ್ರಮಾಣದ ಚಿತ್ರವನ್ನು ನಿರ್ಮಾಪಕರಲ್ಲಿ ಪ್ರಮುಖ ಉಡುಪಿಯವರು ಎಂಬುದು ವಿಶೇಷ.

  ಉಡುಪಿಯ ಬಿರ್ತಿ ಗಂಗಾಧರ್, ಚೇತನ್ ಮಂಗಳೂರು ಹಾಗೂ ಲಯನ್ ವಿ.ಜಿ.ಶೆಟ್ಟಿ ಈ ಚಿತ್ರದ ಪ್ರಮುಖ ಪಾಲುದಾರರು. ಪೃಥ್ವಿ ಕೊಣನೂರು ಚಿತ್ರದ ನಿರ್ದೇಶಕರಾಗಿದ್ದಾರೆ. ಚಿತ್ರವನ್ನು ಲಲಿತಾ ಅಯ್ಯರ್ ಅವರ 'ರಿಸ್ಕೂಯಿಂಗ್ ರೈಲ್ವೆ ಚಿಲ್ಡ್ರನ್‌' ಪುಸ್ತಕದ ಆಧಾರದಲ್ಲಿ ನಿರ್ಮಿಸಲಾಗಿದೆ. ಚಿತ್ರವನ್ನು ಮುಂದಿನ ಮೇ ಅಥವಾ ಜೂನ್ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಆಲೋಚನೆ ಸಂಸ್ಥೆಗಿದೆ.

 ಭಾರತದಲ್ಲಿ ಪ್ರತಿ ವರ್ಷ ಸುಮಾರು ಒಂದು ಲಕ್ಷ ಮಕ್ಕಳು ರೈಲುಗಳ ಮೂಲಕ ಮನೆ ಬಿಟ್ಟು ಓಡಿ ಹೋಗುತಿದ್ದು, ಅವರು ದಿಲ್ಲಿ, ಹೈದರಾಬಾದ್ ಹಾಗೂ ಉತ್ತರ ಭಾರತದ ವಿವಿದೆಡೆಗಳಲ್ಲಿ ಕಾರ್ಯಾಚರಿಸುವ ಗ್ಯಾಂಗ್‌ಗಳ ಪಾಲಾಗಿ ವಿವಿಧ ರೀತಿಯ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗವಹಿಸುತಿದ್ದಾರೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ. ಇಂಥ ಮಕ್ಕಳನ್ನು ರಕ್ಷಿಸುವ ಹಲವು ಸರಕಾರೇತರ ಸಂಸ್ಥೆಗಳು ಬೆಂಗಳೂರು ಸೇರಿದಂತೆ ವಿವಿದೆಡೆ ಕಾರ್ಯಾಚರಿಸುತಿದ್ದು ಬೆಂಗಳೂರಿನ 'ಸಾಥಿ' ಇಂಥ ಎನ್‌ಜಿಓಗಳಲ್ಲಿ ಒಂದು.

 ಪ್ರಮುಖವಾಗಿ ಇಬ್ಬರು ಮಕ್ಕಳನ್ನು ಆಧಾರವಾಗಿಟ್ಟುಕೊಂಡು ಇಂಥ ಮಕ್ಕಳ ಕರುಣಾಜನಕ ಕಥೆಯನ್ನು ಚಿತ್ರದಲ್ಲಿ ಹೇಳಲಾಗಿದೆ. ಇವುಗಳಲ್ಲಿ ಒಂದು ಪಾತ್ರವನ್ನು ಮನೋಹರ್ ನಿರ್ವಹಿಸಿದ್ದು, ಆತನ ಪಾತ್ರಕ್ಕೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪಾತ್ರಕ್ಕೆ ಸೂಕ್ತ ಮಕ್ಕಳ ತಲಾಶೆಯಲ್ಲಿ ಈತ ಬೆಂಗಳೂರಿನಲ್ಲಿ ತಂಡಕ್ಕೆ ಸಿಕ್ಕಿದ್ದ. ಯಾವುದೇ ತರಬೇತಿ ಇಲ್ಲದೇ ಆತನ ಅದ್ಭುತ, ಸಹಜ ಅಭಿನಯಕ್ಕೆ ಚಿತ್ರ ತಂಡ ದಂಗಾಗಿದ್ದು, ಆತನಿಗೆ ಪ್ರಶಸ್ತಿಯನ್ನು ನಿರೀಕ್ಷಿಸಿತ್ತು ಎಂದು ಚಿತ್ರ ತಂಡದ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದ ವಿಷ್ಣುಮೂರ್ತಿ ತಿಳಿಸಿದ್ದಾರೆ.

 ರಿಸರ್ವೇಷನ್‌ಗೂ ಜಿಲ್ಲೆಯ ನಂಟು:

ಈ ಬಾರಿ ಪ್ರಾದೇಶಿಕ ಭಾಷಾ ಚಿತ್ರ ಪ್ರಶಸ್ತಿಯನ್ನು ಕನ್ನಡಕ್ಕಾಗಿ ಪಡೆದ ಱರಿಸರ್ವೇಶನ್‌ೞಚಿತ್ರಕ್ಕೂ ಉಡುಪಿ ಜಿಲ್ಲೆಯೊಂದಿಗೆ ನಂಟಿದೆ. ಜಾತಿ ಹಾಗೂ ಮೀಸಲಾತಿಯ ತಲ್ಲಣಗಳನ್ನು ತೆರೆದಿಡುವ ಈ ಚಿತ್ರದಲ್ಲಿ ಕುಂದಾಪುರ ಕನ್ನಡದ ಸೊಗಡು ಧಾರಾಳವಾಗಿದೆ.

ಗುಲ್ವಾಡಿ ಟಾಕೀಸ್ ಬ್ಯಾನರ್‌ನಡಿ ನಟ, ಸಾಹಿತಿ ಯಾಕೂಬ್ ಖಾದರ್ ಗುಲ್ವಾಡಿ ಈ ಚಿತ್ರವನ್ನು ನಿರ್ಮಿಸಿದ್ದು, ನಿಖಿಲ್ ಮಂಜು ನಿರ್ದೇಶಿಸಿದ್ದರು. ಶ್ರೀಲಲಿತೆ ಅವರ ಕಥೆಯಾದರಿಸಿದ ಈ ಚಿತ್ರದ ನಾಯಕಿ, ಕನ್ನಡ ಖ್ಯಾತ ಸಾಹಿತಿ, ವಿಮರ್ಶಕ ಮುರಳೀಧರ ಉಪಾಧ್ಯ ಹಿರಿಯಡಕ ಇವರ ಪುತ್ರಿ ಮಾನಸಿ ಸುಧೀರ್. ಬಿ.ಶಿವಾನಂದ್ ಚಿತ್ರದ ಸಂಭಾಷಣೆ ಬರೆದಿದ್ದು, ಸಮೀರ್ ಸಂಗೀತ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X