Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಹೈದರಲಿ-ಟಿಪ್ಪು: ಇತಿಹಾಸ ಕಥನ ಚಾರಿತ್ರಿಕ...

ಹೈದರಲಿ-ಟಿಪ್ಪು: ಇತಿಹಾಸ ಕಥನ ಚಾರಿತ್ರಿಕ ಸಿಕ್ಕುಗಳನ್ನು ಬಿಡಿಸುವ ಯತ್ನ

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ8 April 2017 12:01 AM IST
share
ಹೈದರಲಿ-ಟಿಪ್ಪು: ಇತಿಹಾಸ ಕಥನ ಚಾರಿತ್ರಿಕ ಸಿಕ್ಕುಗಳನ್ನು ಬಿಡಿಸುವ ಯತ್ನ

‘ಹೈದರಲಿ-ಟಿಪ್ಪು: ಇತಿಹಾಸ ಕಥನ’ ಬಾರ್ಕೂರು ಉದಯ ಅವರ ಕಿರು ಸಂಶೋಧನಾ ಕೃತಿ. ವಸಾಹತು ಇತಿಹಾಸದ ಹಿನ್ನೆಲೆ ಮತ್ತು ಚರಿತ್ರೆಯ ವಾಸ್ತವಗಳನ್ನು ಈ ಕೃತಿಯ ಮೂಲಕ ಚರ್ಚಿಸುತ್ತಾರೆ. ಈ ಕೃತಿಯಲ್ಲಿ ಒಟ್ಟು 11 ಅಧ್ಯಾಯಗಳಿವೆ. ಮೊದಲ ಅಧ್ಯಾಯದಲ್ಲಿ ಹೇಗೆ ಬ್ರಿಟಿಷ್ ಬರಹಗಾರರು ರಾಜಕೀಯ ಪೂರ್ವಗ್ರಹದಿಂದ ಮುಸ್ಲಿಮ್ ಕಾಲಘಟ್ಟವನ್ನು ನೋಡುತ್ತಾ, ಬರೆಯುತ್ತಾ ಬಂದರು ಎನ್ನುವುದನ್ನು ವಿವರಿಸುತ್ತಾರೆ. ಬ್ರಿಟಿಷ್ ಇತಿಹಾಸ ಕಥನ ಮತ್ತು ಸಮಗ್ರವಾದ ವಿಮರ್ಶೆಯನ್ನೊಳಗೊಳ್ಳದ ಹಿಂದೂ ಇತಿಹಾಸ ಕಥನವಿಲ್ಲದ ಕಾರಣ, ಮುಸ್ಲಿಮ್ ಆಡಳಿತದ ಬಗ್ಗೆ ವ್ಯಕ್ತವಾಗುವ ಹಿಂದೂ ರಾಷ್ಟ್ರೀಯವಾದಿ ಚಿಂತನೆ ಇಷ್ಟು ಪ್ರಚಾರವಾಗಲು ಕಾರಣವಾಯಿತು ಎಂದು ಅವರು ಅಭಿಪ್ರಾಯಪಡುತ್ತಾರೆ. ಟಿಪ್ಪು ಮತ್ತು ಹೈದರಾಲಿಯೂ ಇದೇ ಚಿಂತನೆಗಳ ಬಲಿಪಶುಗಳು ಎಂದೂ ಅವರು ಭಾವಿಸುತ್ತಾರೆ. ಎರಡನೆ ಅಧ್ಯಾಯದಲ್ಲಿ ಇತಿಹಾಸದ ಪರಿಕಲ್ಪನೆಯ ಕುರಿತಂತೆ ಚರ್ಚಿಸುತ್ತಾರೆ. ಸಿಪಾಯಿ ದಂಗೆ ಮತ್ತು ಸ್ವಾತಂತ್ರ ಹೋರಾಟ ಹೇಗೆ ಕಾಲದಿಂದ ಕಾಲಕ್ಕೆ ಬದಲಾಗುತ್ತದೆ ಎನ್ನುವುದನ್ನು ಚರ್ಚಿಸುತ್ತಾ, ಅಶೋಕನ ಕಾಲದಲ್ಲಿ ಪ್ರಭುತ್ವ ಹೇಗೆ ಬೌದ್ಧ ಧರ್ಮ ಮತಾಂತರಕ್ಕೆ ಪೂರಕವಾಗಿತ್ತೋ, ಹಾಗೆಯೇ ಟಿಪ್ಪುವಿನ ಕಾಲದಲ್ಲಿ ಪ್ರಭುತ್ವ ಇಸ್ಲಾಂ ಧರ್ಮ ಮತಾಂತರಕ್ಕೆ ಪೂರಕವಾಗಿದ್ದರೆ ಅದನ್ನು ಆಕ್ಷೇಪಿಸುವುದು ಸರಿಯಲ್ಲ ಎನ್ನುತ್ತಾರೆ. ಧರ್ಮ ಮತ್ತು ರಾಜಕೀಯ ಬೇರೆ ಬೇರೆಯಾಗಿರುವುದನ್ನೂ ಅವರು ಈ ಸಂದರ್ಭದಲ್ಲಿ ಉಲ್ಲೇಖಿಸುತ್ತಾರೆ. ಹೈದರಲಿ ಮತ್ತು ಟಿಪ್ಪು ಉಳಿದ ರಾಜರಿಗೆ ಹೋಲಿಸಿದರೆ ಹೇಗೆ ಭಿನ್ನ ನೋಟಗಳನ್ನು ಒಳಗೊಂಡಿದ್ದಾರೆ ಎನ್ನುವುದನ್ನು ಮೂರನೆ ಅಧ್ಯಾಯದಲ್ಲಿ ವಿವರಿಸುತ್ತಾರೆ. ಬ್ರಿಟಿಷರು ಕಟ್ಟಿಕೊಟ್ಟ ಹೈದರಲಿ ಮತ್ತು ಟಿಪ್ಪುವಿನ ವ್ಯಕ್ತಿತ್ವ ಹಾಗೆಯೇ ಸಾಮಾಜಿಕ ಬದಲಾವಣೆಯಲ್ಲಿ ಅವರಿಬ್ಬರ ಒಳನೋಟಗಳನ್ನು ಅವರು ಬೇರೆ ಬೇರೆ ಗ್ರಂಥಗಳ ಆಧಾರದಲ್ಲಿ ಮುಂದಿಡುವ ಪ್ರಯತ್ನ ಮಾಡುತ್ತಾರೆ. ಈ ಪುಟ್ಟ ಕೃತಿಯಲ್ಲಿ ಹೈದರಲಿ ಮತ್ತು ಟಿಪ್ಪುವಿನ ಕುರಿತಂತೆ ಅಪಾರ ಮಾಹಿತಿಗಳನ್ನು ಕಲೆ ಹಾಕುತ್ತಲೇ ಆ ಕಾಲಘಟ್ಟವನ್ನು ವಿಶ್ಲೇಷಿಸುವ ಪ್ರಯತ್ನವನ್ನು ಕೃತಿಯಲ್ಲಿ ಮಾಡಿದ್ದಾರೆ. ಒಂದು ರೀತಿಯಲ್ಲಿ ವಿವಿಧ ಇತಿಹಾಸತಜ್ಞರ ಬೃಹತ್ ಗ್ರಂಥಗಳನ್ನು ಸೋಸಿ ತೆಗೆದು, ಅದರ ಸಾರವನ್ನು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಟಿಪ್ಪು ಸುಲ್ತಾನ್ ಇತಿಹಾಸ ಸಂಶೋಧನಾ ಸಮಿತಿ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 134. ಮುಖಬೆಲೆ 100 ರೂಪಾಯಿ. ಆಸಕ್ತರು 9343565343 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X