Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಹುಬಲಿ1ನಿರ್ಮಾಪಕರಿಗೆ ಲಾಭ...

ಬಾಹುಬಲಿ1ನಿರ್ಮಾಪಕರಿಗೆ ಲಾಭ ತಂದಿಲ್ವಂತೆ!

ವಾರ್ತಾಭಾರತಿವಾರ್ತಾಭಾರತಿ8 April 2017 9:29 PM IST
share
ಬಾಹುಬಲಿ1ನಿರ್ಮಾಪಕರಿಗೆ ಲಾಭ ತಂದಿಲ್ವಂತೆ!

ಭಾರತೀಯ ಚಿತ್ರರಸಿಕರ ಬಹುದಿನಗಳ ಕಾತರ ಎಪ್ರಿಲ್‌ನಲ್ಲಿ ಅಂತ್ಯಗೊಳ್ಳಲಿದೆ.ರಾಜವೌಳಿ ನಿರ್ದೇಶನದ ‘ಬಾಹುಬಲಿ 2’ ವಿಶ್ವದಾದ್ಯಂತ 6,500 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದ್ದು, ಹಿಂದಿನ ಎಲ್ಲಾ ಬಾಕ್ಸ್ ಆಫೀಸ್ ದಾಖಲೆಗಳನ್ನು ನುಚ್ಚುನೂರು ಮಾಡಲು ಸಜ್ಜಾಗಿದೆ.

ಬಾಹುಬಲಿ 2 ಬಗ್ಗೆ ಭಾರೀ ಕ್ರೇಝ್ ಸೃಷ್ಟಿಯಾಗಿರುವ ಈ ಸಂದರ್ಭದಲ್ಲಿಯೇ, ಚಿತ್ರದ ಮೊದಲ ಭಾಗವು ವಾಸ್ತವಿಕವಾಗಿ ನಿರ್ಮಾಪಕರಿಗೆ ಯಾವುದೇ ಲಾಭ ತಂದುಕೊಟ್ಟಿಲ್ಲವೆಂಬ ಸ್ವಾರಸ್ಯಕರ ಸಂಗತಿಯೊಂದು ಈಗ ಬಯಲಾಗಿದೆ. ಇದಕ್ಕೆ ಕಾರಣವೂ ಇದೆ. ಆದರೆ ಅದರಿಂದ ನಿರ್ಮಾಪಕರಿಗೆ ಲಾಭ ಬಂದಿಲ್ಲವೆಂಬುದಕ್ಕೆ ಚಿತ್ರ ವಿತರಕ ಆಕ್ಷಯ್ ರಥಿ ಕಾರಣ ನೀಡಿದ್ದಾರೆ.

ಬಾಹುಬಲಿ 1 ಬಾಕ್ಸ್‌ಆಫೀಸ್‌ನಲ್ಲಿ 600 ಕೋಟಿ ರೂ. ಸಂಪಾದಿಸಿದ್ದೇನೂ ಹೌದು. ಆದರೆ ಅದರ ನಿರ್ಮಾಣವೆಚ್ಚ ಹಾಗೂ ಮಾರ್ಕೆಟಿಂಗ್ ವೆಚ್ಚವು ಸುಮಾರು 450 ಕೋಟಿ ರೂ.ನ ಆಸುಪಾಸಿನಲ್ಲಿತ್ತು. ಇದರ ಜೊತೆಗೆ ಬಾಹುಬಲಿ ಎರಡನೆ ಭಾಗದ ಚಿತ್ರೀಕರಣ ಕೂಡಾ ನಡೆಸಲಾಗಿತ್ತು. ಅದರ ಸೆಟ್‌ಗಳು ಹಾಗೂ ಲೋಕೇಶನ್‌ಗಳಿಗಾಗಿಯೂ ನಿರ್ಮಾಪಕರು ವಿಪರೀತ ಖರ್ಚು ಮಾಡಿದ್ದಾರೆ.

ಬಾಹುಬಲಿ ಮೊದಲ ಭಾಗದ ಬಿಡುಗಡೆಗೆ ಮೊದಲೇ ನಿರ್ಮಾಪಕರು ಎರಡನೆ ಭಾಗದ ಮಹತ್ವದ ಭಾಗಗಳನ್ನೂ ಚಿತ್ರೀಕರಿಸಿದ್ದರು. ಹೀಗಾಗಿ ನಿರ್ಮಾಣ ವೆಚ್ಚವು 600 ಕೋಟಿ ರೂ. ದಾಟಿತ್ತು. ಹೀಗಾಗಿ ಬಾಹುಬಲಿ ನಿರ್ಮಾಪಕರಿಗೆ ಲಾಭ ಬರುವುದಿದ್ದರೆ ಅದು ಬಾಹುಬಲಿ 2ನಿಂದಲೇ ಬರಬೇಕಾಗಿದೆಯೆಂದು ಅಕ್ಷಯ್‌ರಥಿ ಅವರ ಅಂಬೋಣ. ಆದಾಗ್ಯೂ ಈ ಎರಡೂ ಚಿತ್ರಗಳ ಥಿಯೇಟರ್ ಪ್ರದರ್ಶನದ ಹಕ್ಕುಗಳ ಮಾರಾಟದಿಂದ ನಿರ್ಮಾಪಕರು 600 ಕೋಟಿ ರೂ. ಸಂಪಾದಿಸಿದ್ದಾರೆ. ಹೀಗಾಗಿ ನಿರ್ಮಾಪಕರು, ಈ ಎರಡು ಚಿತ್ರಗಳಿಂದ ಒಟ್ಟು 150 ರಿಂದ 200 ಕೋಟಿ ರೂ.ವರೆಗೆ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿಯೇ ಬಾಹುಬಲಿ 2 ಟ್ರೆಂಡ್‌ಸೆಟ್ಟರ್ ಆಗಲಿದೆಯೆಂಬ ನಿರೀಕ್ಷೆಯನ್ನು ಅಕ್ಷಯ್ ಹೊಂದಿದ್ದಾರೆ. ‘‘ ಬಾಹುಬಲಿಯನ್ನು ಅತ್ಯಂತ ಲೆಕ್ಕಾಚಾರದ ರಿಸ್ಕ್ ನೊಂದಿಗೆ ಸೃಷ್ಟಿಸಲಾಗಿದೆ’’ ಎಂದವರು ಹೇಳಿದ್ದಾರೆ. ಮೊದಲ ಭಾಗದ ಬಹುತೇಕ ಪಾತ್ರಗಳು ಬಾಹುಬಲಿ 2ನಲ್ಲಿಯೂ ಮುಂದುವರಿದಿದೆ. ಪ್ರಭಾಸ್, ರಾಣಾದುಗ್ಗುಬಾಟಿ, ಅನುಷ್ಕಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X