Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಥೋತ್ಸವ ಅಂಗವಾಗಿ ಮುಸ್ಲಿಂ ಯುವಕರಿಂದ...

ರಥೋತ್ಸವ ಅಂಗವಾಗಿ ಮುಸ್ಲಿಂ ಯುವಕರಿಂದ ಕುಡಿಯುವ ನೀರು ವಿತರಣೆ

ವಾರ್ತಾಭಾರತಿವಾರ್ತಾಭಾರತಿ8 April 2017 11:15 PM IST
share
ರಥೋತ್ಸವ ಅಂಗವಾಗಿ ಮುಸ್ಲಿಂ ಯುವಕರಿಂದ ಕುಡಿಯುವ ನೀರು ವಿತರಣೆ

ಕಡೂರು, ಎ.8: ಯುವಕರು ಜಾತಿ ಮನೋಭಾವ ತೊರೆದು ಮಾನವೀಯ ವೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಕುರುಬ ಸಮಾಜದ ಅಧ್ಯಕ್ಷ ಕೆ.ಎಸ್.ರಮೇಶ್ ಯುವಕರಿಗೆ ಕರೆ ನೀಡಿದರು. 

ಖಂಡಗದಹಳ್ಳಿ ಸೋಮೇಶ್ವರ ಜಾತ್ರಾ ಮಹೋತ್ಸವ ಮತ್ತು ಮಲ್ಲೇಶ್ವರ ಸ್ವರ್ಣಾಂ ದೇವಿಯ ರಥೋತ್ಸವದ ಅಂಗವಾಗಿ ಮರವಂಜಿ ವೃತ್ತದಲ್ಲಿ ಕಡೂರಿನ ಸಫಾ ಬ್ಯೆತುಲು ಮಾಲ್ ಎಜುಕೇಷನ್ ವೆಲ್ಫೇರ್ ಅಂಡ್ ಚಾರಿಟೆಬಲ್ ಟ್ರಸ್ಟ್‌ನ ಯುವಕರು ಏರ್ಪಡಿಸಿದ್ದ ಶುದ್ಧ ಕುಡಿಯುವ ನೀರಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ಪಟ್ಟಣದಲ್ಲಿ ಹಿಂದು, ಮುಸ್ಲಿಂ, ಕ್ರಿಶ್ಚಿಯನ್ನರು ಅಣ್ಣ-ತಮ್ಮಂದಿರಂತೆ ಜೀವನ ನಡೆಸುತ್ತಿದ್ದಾರೆ. ಆದರೆ ಕೆಟ್ಟ ರಾಜಕೀಯ ವ್ಯವಸ್ಥೆ ಜಾತಿ, ಧರ್ಮಗಳ ನಡುವೆ ಜಗಳ ತಂದು ಹೊಡೆದಾಡಿಸುತ್ತಿವೆ. ಇಂತಹವರನ್ನು ದೂರವಿಟ್ಟು ಮಾನವೀಯತೆಯತ್ತ ಗಮನ ಹರಿಸಲು ಯುವಕರು ಮುಂದೆ ಬರಬೇಕಾಗಿದೆ ಎಂದರು. 

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಆನಂದ ಮಾತನಾಡಿ, ಬರಗಾಲದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಮುಸ್ಲಿಂ ಯುವಕರ ಕಾರ್ಯ ಶ್ಲಾಘನೀಯ. ಯುವಕರು ಮೊದಲು ಸಮಾಜ ಮುಖಿಯಾಗಿ ಬಡವರ, ದೀನ ದಲಿತರ ಪರವಾಗಿ ಉತ್ತಮ ಕೆಲಸ ಮಾಡಿದರೆ ಅದರಂತಹ ಪುಣ್ಯ ಬೇರೊಂದಿಲ್ಲ ಎಂದು ನುಡಿದರು.

ಪುರಸಭೆ ಸದಸ್ಯ ತೋಟದ ಮನೆ ಮೋಹನ ಮಾತನಾಡಿದರು.

ಟ್ರಸ್ಟ್‌ನ ಕಾರ್ಯದರ್ಶಿ ಇರ್ಫಾನ್  ಮಾತನಾಡಿ, ನಮ್ಮ ಟ್ರಸ್ಟ್ ಸಾರ್ವಜನಿಕರ ಸೇವೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಬಡ ರೋಗಿಗಳಿಗೆ ಉಚಿತ ಹಣ್ಣು ನೀಡುವುದಲ್ಲದೆ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದವರನ್ನು ಗುರುತಿಸಿ ಹೆಚ್ಚಿನ ಚಿಕಿತ್ಸೆಗೆ ಸಹಾಯ ನೀಡುತ್ತಿದೆ. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ನಾಗರಿಕರು ಕುಡಿಯುವ ನೀರಿಗಾಗಿ ಪ್ರತಿದಿನ ಪರಿತಪಿಸುವಂತಾಗಿದೆ ಎಂದರು.

ಟ್ರಸ್ಟ್‌ನ ಅಧ್ಯಕ್ಷ ಮುಹಿದ್ದಿನ್ ಮಾತನಾಡಿ, ಯುವಕರು ಸಮಾಜಕ್ಕೆ ಉಪಯೋಗವಾಗುವ ಚಟುವಟಿಕೆಗಳಲ್ಲಿ ತೊಡಗಿಕೊಂಡು ಉತ್ತಮ ಸಮಾಜ ಕಟ್ಟುವ ನಿಟ್ಟಿನಲ್ಲಿ ಶ್ರಮಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಟ್ರಸ್ಟ್‌ನ ಕಲೀಂ, ಸಲೀಂ, ನಾಸೀರ್, ಇಸಾಖ್, ಇಮ್ರಾನ್, ಅನೀಪ್, ರೂಮಾನ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X