Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಹ್ಮದ್ ಖುರೇಷಿ ಮೇಲೆ ದೌರ್ಜನ್ಯ: ಪೊಲೀಸರ...

ಅಹ್ಮದ್ ಖುರೇಷಿ ಮೇಲೆ ದೌರ್ಜನ್ಯ: ಪೊಲೀಸರ ಅಮಾನತಿಗೆ 15 ದಿನಗಳ ಗಡುವು ನೀಡಿದ ದಲಿತ ಸಂಘಟನೆ

ವಾರ್ತಾಭಾರತಿವಾರ್ತಾಭಾರತಿ9 April 2017 1:43 PM IST
share

ಮಂಗಳೂರು, ಎ.9: ಅಹ್ಮದ್ ಖರೇಷಿ ಮೇಲೆ ದೈಹಿಕ ದೌರ್ಜನ್ಯ ಎಸಗಿರುವ ಪೊಲೀಸರನ್ನು 15 ದಿನದೊಳಗೆ ಅಮಾನತು ಮಾಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.

ಸಮಿತಿ ರಾಜ್ಯ ಸಂಚಾಲಕ ಬಿ.ಆರ್.ಭಾಸ್ಕರ್ ಮತ್ತು ದಿನೇಶ್ ಕುಮಾರ್ ರವಿವಾರ ನಗರದ ರೋಶನಿ ನಿಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಖುರೇಷಿಯ ಚಿಕಿತ್ಸೆಯ ವೆಚ್ಚವನ್ನು ಸರಕಾರ ಭರಿಸಬೇಕು. ಆತನ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ದೌರ್ಜನ್ಯ ಎಸಗಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪೊಲೀಸ್ ಆಯುಕ್ತ ಚಂದ್ರಶೇಖರ್‌ರಂತಹ ದಕ್ಷ ಅಧಿಕಾರಿಯ ಸಮ್ಮುಖ ಇಂತಹ ಘಟನೆ ನಡೆಯಬಾರದಿತ್ತು. ಆಯುಕ್ತರ ಕಚೇರಿ ಮುಂದೆ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಪಿಎ‍ಫ್ ಐ  ಕಾರ್ಯಕರ್ತರ ಮೇಲೆ ಪೊಲೀಸರು ಪೂರ್ವಾಗ್ರಹ ಪೀಡಿತರಾಗಿ ಲಾಠಿಚಾರ್ಜ್ ಮಾಡಿ ಹೋರಾಟ ದಮನ ಮಾಡುವ ಪ್ರಯತ್ನ ನಡೆಸಿರುವುದು ಖಂಡನೀಯ ಎಂದು ಭಾಸ್ಕರ್ ಹೇಳಿದರು.

ಸಂಘಟನೆಯ ಬೇಡಿಕೆಯನ್ನು 15 ದಿನಗಳೊಳಗೆ ಈಡೇರಿಸದಿದ್ದರೆ ಹೋರಾಟದಿಂದ ನಡೆಯುವ ಪರಿಣಾಮಗಳಿಗೆ ಪೊಲೀಸ್ ಇಲಾಖೆ ಮತ್ತು ಸರಕಾರ ಹೊಣೆಯಾಗುತ್ತದೆ. ನಮ್ಮ ಸಮಿತಿಯು ಹೇಳಿಕೆ ಕೊಟ್ಟು ಸುಮ್ಮನಿರುವುದಿಲ್ಲ. ಹೋರಾಟದ ರೂಪುರೇಷದ ಬಗ್ಗೆ ಎ.14ರ ಬೆಂಗಳೂರು ಚಲೋದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭಾಸ್ಕರ್ ನುಡಿದರು.

ಖುರೇಷಿ ಕೇಸಿನಲ್ಲಿ ಪೊಲೀಸರು ಲೋಪ ಎಸಗಿದ್ದಾರೆ. ಆತನನ್ನು ಬಂಧಿಸಿ 24 ಗಂಟೆಯೊಳಗೆ ಕೋರ್ಟ್‌ಗೆ ಹಾಜರುಪಡಿಸಬೇಕಿತ್ತು. ವಾರಗಟ್ಟಲೆ ಠಾಣೆಯಲ್ಲಿ ಬಚ್ಚಿಟ್ಟು ಹಿಂಸೆ ನೀಡಿದ್ದಾರೆ. ಆತ ಆರೋಪಿ ಮಾತ್ರ. ಒಂದು ವೇಳೆ ಅಪರಾಧಿಯಾಗಿದ್ದರೂ ಹೊಡೆಯುವಂತಿಲ್ಲ. ಆರೋಪ ಸಾಬೀತಾಗಿ ಗಲ್ಲು ಶಿಕ್ಷೆ ಕೊಟ್ಟರೂ ಸಮಿತಿಯು ಪ್ರಶ್ನಿಸುವುದಿಲ್ಲ. ಜಿಲ್ಲೆಯ ದುಷ್ಟ ಪೊಲೀಸರನ್ನು ಹೊರಗೆ ಹಾಕಬೇಕು. ಈ ನಿಟ್ಟಿನಲ್ಲಿ ಸಿಎಂ, ಗೃಹ ಸಚಿವರು ಮತ್ತು ಡಿಜಿಪಿ ಜತೆ ಮಾತನಾಡುತ್ತೇವೆ ಎಂದರು.

ಮಂಗಳೂರಿನಲ್ಲಿ ನಾಗರಿಕ ಪೊಲೀಸ್ ವ್ಯವಸ್ಥೆ ಇದೆಯೋ ಎಂಬ ಸಂಶಯ ಕಾಡುತ್ತಿದೆ. 2 ದಿನದ ಹಿಂದೆ ಮುಡಿಪುನಲ್ಲಿ ದಲಿತ ವ್ಯಕ್ತಿಯ ಮೇಲೆ ಮಹಿಳಾ ಎಸ್ಸೈ ಹಲ್ಲೆ ನಡೆಸಿ, ಗಾಂಜಾ ಕೇಸಿನಲ್ಲಿ ಫಿಕ್ಸ್ ಮಾಡುವ ಬೆದರಿಕೆಯೊಡ್ಡಿದ್ದಾರೆ. ಈ ಘಟನೆ ಸೇರಿದಂತೆ ಪಿಎ್ಐ ಕಾರ್ಯಕರ್ತರ ಮೇಲೆ ನಡೆದಿರುವ ಲಾಠಿಚಾರ್ಜ್ ಹಾಗೂ ಎಎಸ್ಸೈ ಐತಪ್ಪರ ಮೇಲೆ ನಡೆದಿರುವ ಹಲ್ಲೆಯ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ದಿನೇಶ್ ಕುಮಾರ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ದಮನಿತರ ಸ್ವಾಭಿಮಾನಿ ವೇದಿಕೆ ಮುಖಂಡರಾದ ರಘುವೀರ್ ಸೂಟರ್‌ಪೇಟೆ, ಅಶೋಕ್ ಕೊಂಚಾಡಿ ಹಾಗೂ ಸಿಕಂದರ್ ಪಾಷಾ ಉಪಸ್ಥಿತರಿದ್ದರು.



*ಬೆಂಗಳೂರು ಚಲೋ:

ರಾಜ್ಯದ ಭೂಮಿ ಹೋರಾಟ ಸಮಿತಿ, ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಮತ್ತು ಜನಾಂದೋಲಕ್ಕಾಗಿ ಮಹಾಮೈತ್ರಿ ಎಂಬ ಮೂರು ಸಂಘಟನೆಗಳ ನೇತೃತ್ವದಲ್ಲಿ 160ಕ್ಕೂ ಅಧಿಕ ಸಂಘಟನೆಗಳು ಎ.14ರ ಅಂಬೇಡ್ಕರ್ ಜಯಂತಿಯಂದು ‘ಬೆಂಗಳೂರು ಚಲೋ’ ಆಯೋಜಿಸಿದೆ. ಆ.15ರ ನಂತರ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ 10 ಬೇಡಿಕೆಗಳ ಈಡೇರಿಕೆಗಾಗಿ ಆಮರಣಾಂತ ಉಪವಾಸ ಕೈಗೊಳ್ಳಲಾಗುವುದು ಎಂದು ಭಾಸ್ಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X