Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿ ಬಗ್ಗೆ ಕೆಟ್ಟದಾಗಿ ಟ್ವೀಟ್ ಮಾಡಿದ...

ಧೋನಿ ಬಗ್ಗೆ ಕೆಟ್ಟದಾಗಿ ಟ್ವೀಟ್ ಮಾಡಿದ ಹರ್ಷ್ ಗೋಯೆಂಕಾ

ವಾರ್ತಾಭಾರತಿವಾರ್ತಾಭಾರತಿ9 April 2017 8:04 PM IST
share
ಧೋನಿ ಬಗ್ಗೆ ಕೆಟ್ಟದಾಗಿ ಟ್ವೀಟ್ ಮಾಡಿದ ಹರ್ಷ್ ಗೋಯೆಂಕಾ

 ಪುಣೆ, ಎ.9: ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಪುಣೆ ತಂಡದ ಮಾಲಕರ ನಡುವೆ ಸಂಬಂಧ ಸುಮಧುರವಾಗಿಲ್ಲ.

ಆರ್‌ಪಿಎಸ್ ತಂಡದ ಮಾಲಕ ಸಂಜಯ್ ಗೋಯೆಂಕಾ ಸಹೋದರ ಹರ್ಷ್ ಗೋಯೆಂಕಾ ಅವರು ಧೋನಿ ಆಟದ ಬಗ್ಗೆ ಟ್ವಿಟರ್‌ನಲ್ಲಿ ಕೆಟ್ಟದಾಗಿ ಟೀಕಿಸಿ ಧೋನಿ ಅಭಿಮಾನಿಗಳಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.

 ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡ ಎ.6ರಂದು ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತ್ತು. ತಂಡದ ನೂತನ ನಾಯಕ ಸ್ಟೀವ್ ಸ್ಮಿತ್ ಔಟಾಗದೆ 84 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಮಾಜಿ ನಾಯಕ ಧೋನಿ ಔಟಾಗದೆ 12 ರನ್ ಗಳಿಸಿದ್ದರು.

 ಕಳೆದ ವರ್ಷ ಪುಣೆ ತಂಡಕ್ಕೆ ಧೋನಿ ನಾಯಕರಾಗಿದ್ದರು. ಈ ವರ್ಷ ಅವರ ಕೈಯಿಂದ ನಾಯಕತ್ವವನ್ನು ಕಿತ್ತುಕೊಂಡು ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕ ಸ್ಮಿತ್‌ಗೆ ನಾಯಕತ್ವ ನೀಡಲಾಗಿದೆ. ನಾಯಕತ್ವ ವಹಿಸಿಕೊಂಡ ಮೊದಲ ಪಂದ್ಯದಲ್ಲಿ ಸ್ಮಿತ್ ಆಟ ನೋಡಿದ ಹರ್ಷ್ ಗೋಯೆಂಕಾ ಅವರಿಗೆ ಧೋನಿ ಮೇಲಿನ ಸಿಟ್ಟನ್ನು ಹೊರಗೆಡವಲು ಅವಕಾಶ ಒದಗಿಸಿತ್ತು.

 ಆರ್‌ಪಿಜಿ ಎಂಟರ್‌ಪ್ರೈಸಸ್‌ನ ಚೇರ್ಮನ್ ಆಗಿರುವ ಹರ್ಷ್ ಗೋಯೆಂಕಾ ಅವರು ಸ್ಮಿತ್ ಬ್ಯಾಟಿಂಗ್ ಬಗ್ಗೆ ಟ್ವಿಟ್ಟರ್ ನಲ್ಲಿ  ಮೆಚ್ಚುಗೆ ವ್ಯಕ್ತಪಡಿಸಿದರು. ‘‘ಸ್ಮಿತ್ ತಾನು ಕಾಡಿನ ರಾಜ ಎನ್ನುವುದನ್ನು ತೋರಿಸಿಕೊಟ್ಟರು. ನಾಯಕ ಸ್ಮಿತ್ ಆಟದ ಮುಂದೆ ಧೋನಿ ಆಟ ಮಸುಕಾಗಿತ್ತು. ಆರ್‌ಪಿಸಿ ಸ್ಮಿತ್‌ರನ್ನು ನಾಯಕತ್ವದ ಜವಾಬ್ದಾರಿಯನ್ನು ನೀಡಿದ್ದು ಸರಿಯಾದ ನಿರ್ಧಾರ ’’ ಎಂದು ಹೇಳಿದ್ದರು.

ಗೋಯೆಂಕಾ ಟ್ವೀಟ್ ನೋಡಿದ ಧೋನಿ ಅಭಿಮಾನಿಗಳು ಗೋಯೆಂಕಾಗೆ ಸರಿಯಾಗಿಯೇ ಉಗಿದಿದ್ದಾರೆ.

 ‘‘ ನಿಮಗೆ ನಾಚಿಯಾಗಬೇಕು ಎಚ್ ಗೋಯೆಂಕಾ. ಧೋನಿಗೆ ಗೌರವ ನೀಡಿ. ವಿದೇಶಿ ಆಟಗಾರರನ್ನು ಮುಂದಿಟ್ಟು ಭಾರತದ ಆಟಗಾರರನ್ನು ಅವಮಾನಿಸಬೇಡಿ’’ ಎಂದು ಪ್ರದೀಪ್ ಪಾರಿಹಾರ್ ಟ್ವೀಟ್ ಮಾಡಿದ್ದಾರೆ.

‘‘ ಧೋನಿಯನ್ನು ನಾಯಕತ್ವದಿಂದ ಕೆಳಗಿಸಿದ ಹಿನ್ನೆಲೆಯಲ್ಲಿ ಪುಣೆ ತಂಡದ ಶೇ 80ರಷ್ಟು ಅಭಿಮಾನಿಗಳು ದೂರವಾಗಿದ್ಧಾರೆ. ಇದೀಗ ಉಳಿದ ಶೇ 20ರಷ್ಟು ಅಭಿಮಾನಿಗಳು ನಿಮ್ಮ ಟ್ವೀಟ್ ನೋಡಿ. ಪುಣೆ ತಂಡವನ್ನು ಕೈ ಬಿಟ್ಟಿದ್ದಾರೆ’’ ಎಂದು ಡ್ರಂಕ್ ಬ್ಯಾಟ್‌ಮ್ಯಾನ್ ಹೇಳಿದ್ದಾರೆ.

 ‘‘ ಇವತ್ತು ಸ್ಮಿತ್ ದಿನವಾಗಿರಬಹುದು. ಆದರೆ ಲೆಜೆಂಡ್‌ಗೆ ಗೌರವ ಕೊಡುವ ಬಗ್ಗೆ ಕಲಿಯಿರಿ. ನೀವು ಇನ್ನೊಬ್ಬರ ಜೊತೆ ಹೋಲಿಸುವ ಮೊದಲು ತನ್ನ ದೇಶಕ್ಕಾಗಿ ಎಲ್ಲ ಟ್ರೋಫಿಗಳನ್ನು ಗೆದ್ದು ತಂದವರು ಯಾರು ಎನ್ನುವುದನ್ನು ಅರಿತುಕೊಳ್ಳಿ’’ ಎಂದು ಧೋನಿ ಅಭಿಮಾನಿಯೊಬ್ಬರು ಹೇಳಿದ್ದಾರೆ.

 ಧೋನಿ ವಿಚಾರದಲ್ಲಿ ಅನಗತ್ಯವಾಗಿ ವಿವಾದವನ್ನುಂಟು ಮಾಡಿದ ಹರ್ಷ್‌ಗೆ ಗೋಯೆಂಕಾ ಅವರು ಧೋನಿ ಅಭಿಮಾನಿಗಳಿಂದ ಚೆನ್ನಾಗಿ ಉಗಿಸಿಕೊಂಡರೂ, ತನ್ನ ಟ್ವೀಟ್ನ್ನು ನಿಲ್ಲಿಸಿಲ್ಲ. ಎರಡನೆ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಪಿಎಸ್ ಸೋಲು ಅನುಭವಿಸಿತ್ತು. ಹೀಗಿದ್ದರೂ ಗೋಯೆಂಕಾ ಪುಣೆ ತಂಡದ ಆಟಗಾರರಾದ ಮನೋಜ್ ತಿವಾರಿ, ರಹಾನೆ, ಕ್ರಿಶ್ಟಿಯನ್ ಅವರ ಬ್ಯಾಟಿಂಗ್‌ನ ಅಂಕಿ ಅಂಶ ನೀಡಿ. ಇವೆರಲ್ಲ ಅತ್ಯುತ್ತಮ ಸ್ಟ್ರೈಕ್‌ರೇಟ್ ಹೊಂದಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ.

ಧೋನಿ 73.91 ಸ್ಟ್ರೈಕ್ ರೇಟ್‌ನೊಂದಿಗೆ ಐದನೆ ಸ್ಥಾನದಲ್ಲಿದ್ದಾರೆ. ಕ್ರಿಶ್ಟಿಯನ್ ಐಪಿಎಲ್‌ನಲ್ಲಿ ಶನಿವಾರ ಮೊದಲ ಪಂದ್ಯವನ್ನಾಡಿದ್ದಾರೆ. ಕೇವಲ 17ರನ್ ದಾಖಲಿಸಿದ್ದರು. ಧೋನಿ ಕೇವಲ ಎರಡು ಪಂದ್ಯಗಳಲ್ಲಿ ನೀಡಿರುವ ಪ್ರದರ್ಶನವನ್ನು ನೋಡಿದ ಗೋಯೆಂಕಾ ಅವರು ಧೋನಿ ವಿರುದ್ಧ ತಮಗಿರುವ ಅಸಮಾಧಾನವನ್ನು ತೋರಿಸಿಕೊಡಲು ಅವಕಾಶವನ್ನು ಬಳಸಿಕೊಂಡಿದ್ದಾರೆ.

#RPS batting statistics until now - Manoj Tiwari, Rahane , Christian have the best strike rates. pic.twitter.com/JKya3lxHKC

— Harsh Goenka (@hvgoenka) April 8, 2017

@hvgoenka Fool look at this stat of @msdhoni pic.twitter.com/BMsGbXh3Pd

— Dhoni My Hero (@MSDIAN7) April 8, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X