Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ...

ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ10 April 2017 7:18 PM IST
share

ಬೆಂಗಳೂರು,ಎ.10: ಬಿಬಿಎಂಪಿ ಕಾಮಗಾರಿಗಳ ಬಾಕಿ ಬಿಲ್ ಪಾವತಿಗಾಗಿ ಆಗ್ರಹಿಸಿ ಮಹದೇವಪುರ ಗುತ್ತಿಗೆದಾರರ ಸಂಘದ ಸದಸ್ಯರು ಇಂದು ಬೃಹತ್ ಮಹದೇವಪುರ ವಲಯ ಕಚೇರಿ ಮುಂಭಾಗ ಶಾಂತಿಯುತ ಧರಣಿ ನಡೆಸಿದರು.

ಧರಣಿಯ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ರಂಗನಾಥ್ ಮಾತನಾಡಿ, ಮಹದೇವಪುರ ವಲಯದ 110 ಹಳ್ಳಿಗಳಲ್ಲಿ 2015-16ನೆ ಸಾಲಿನ ಪಿ 3089 ಹಾಗೂ ಪಿ 2654ನ ವಿಶೇಷ ಅಭಿವೃದ್ಧಿಯಡಿಯಲ್ಲಿ ಮಾಡಿರುವ ಕಾಮಗಾರಿಗಳಿಗೆ ಬಾಕಿ ಬಿಲ್ ಒಂದು ವರ್ಷದಿಂದ ಪಾಲಿಕೆ ಬಿಡುಗಡೆ ಮಾಡಿಲ್ಲ ಎಂದು ದೂರಿದರು. 2015-16ನೆ ಸಾಲಿನ ಹಿಂಬಾಕಿ ಹಣ ನೀಡದೆ, ಆಗಲೇ 2016- 17ನೆ ಸಾಲಿನ ಬಿಲ್ ನೀಡಲು ಪಾಲಿಕೆ ಮುಂದಾಗಿದೆ. ಬಿಬಿಎಂಪಿ ಆಯುಕ್ತರು ಮತ್ತು ವಿಶೇಷ ಆಯುಕ್ತರು(ಹಣಕಾಸು) ಅಧಿಕಾರಿಗಳು ಗುತ್ತಿಗೆದಾರರ ಹಣ ಬಿಡುಗಡೆ ಮಾಡಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಸಾಲ ಮಾಡಿ ತಂದ ಹಣದಿಂದ ಮಹದೇವಪುರ ವಲಯದಲ್ಲಿ ಕಾಮಗಾರಿ ಮಾಡಲಾಗಿದೆ. ಆದರೆ, ಸಾಲ ತೀರಿಸುವುದಕ್ಕೆ ಸರಿಯಾದ ಸಮಯಕ್ಕೆ ಸರಕಾರ ಬಿಲ್ ಪಾವತಿ ಮಾಡದೆ ಬಡ್ಡಿಯನ್ನೂ ಸಹ ತೀರಿಸಲಾಗದೆ ಅತಂತ್ರದಲ್ಲಿ ಸಿಲುಕಿದ್ದೇವೆ ಎಂದು ಅಳಲನ್ನು ತೋಡಿಕೊಂಡರು. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್‌ಗಳಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಬಿಲ್‌ಗಾಗಿ ಕೇಳಲು ಹೋದರೆ ತಾಂತ್ರಿಕ ಕಾರಣ ನೀಡಿ ವಂಚಿಸುತ್ತಿದ್ದಾರೆ ಎಂದು ದೂರಿದರು.

ಇಂದಿನಿಂದ ಶಾಂತಿಯುತ ಧರಣಿ ಆರಂಭಿಸಿದ್ದು, ಕೂಡಲೇ ಬಾಕಿ ಬಿಲ್ ಪಾವತಿ ಮಾಡದಿದ್ದರೆ ಮೂರ್ನಾಲ್ಕು ದಿನಗಳ ಬಳಿಕ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಪಾಲಿಕೆಗೆ ಎಚ್ಚರಿಕೆ ನೀಡಿದರು.

ಧರಣಿಯಲ್ಲಿ ಗುತ್ತಿಗೆದಾರರಾದ ಪ್ರಭಾಕರ್‌ರೆಡ್ಡಿ, ರಾಮಯ್ಯ, ವೆಂಕಟರಾಮಯ್ಯ, ಮುನಿರಾಜು, ರವಿಶಂಕರ್, ಎಸ್.ಆರ್. ವೇಣುಗೋಪಾಲ್, ಬಿ.ಎನ್.ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X