Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭದ್ರಕ್ ಹಿಂಸಾಚಾರ: ಎರಡು ದಿನ...

ಭದ್ರಕ್ ಹಿಂಸಾಚಾರ: ಎರಡು ದಿನ ಒಡಿಶಾದಲ್ಲಿ ಸಾಮಾಜಿಕ ಜಾಲತಾಣ ಬಂದ್

ವಾರ್ತಾಭಾರತಿವಾರ್ತಾಭಾರತಿ10 April 2017 8:51 PM IST
share
ಭದ್ರಕ್ ಹಿಂಸಾಚಾರ: ಎರಡು ದಿನ ಒಡಿಶಾದಲ್ಲಿ ಸಾಮಾಜಿಕ ಜಾಲತಾಣ ಬಂದ್

ಭದ್ರಕ್ (ಒಡಿಶಾ): ಹಿಂದೂ ದೇವತೆಗಳ ವಿರುದ್ದ ಅವಮಾನಕಾರಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ ಎಂಬ ಕಾರಣಕ್ಕೆ ಕಳೆದ ವಾರ ವ್ಯಾಪಕ ಹಿಂಸಾಚಾರ ನಡೆದಿದ್ದ ಈ ಪಟ್ಟಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದ್ದರೂ, ಎರಡು ದಿನಗಳ ಕಾಲ ರಾಜ್ಯದಲ್ಲಿ ಎಲ್ಲ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಲಾಗಿದೆ. ಹಿಂಸಾಚಾರ ಮೆರುಕಳಿಸದಂತೆ ತಡೆಯುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಈ ನಿಷೇಧ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

"ಸಾಕಷ್ಟು ವದಂತಿಗಳು, ನಕಲಿ ಫೋಟೊಗಳು ಚಲಾವಣೆಯಲ್ಲಿವೆ. ಈ ಕಾರಣದಿಂದ ಈ ನಿಷೇಧ ಹೇರಲಾಗಿದೆ" ಎಂದು ಒಡಿಶಾ ಡಿಜಿಪಿ ಕೆ.ಬಿ.ಸಿಂಗ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಕರ್ಫ್ಯೂ ಸಡಿಲಿಸಲಾಗಿದೆ. ಪರಿಸ್ಥಿತಿಯ ಪರಾಮರ್ಶೆ ನಡೆಸಿದಾಗ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶನಿವಾರದಿಂದೀಚೆಗೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ ನಿಷೇಧಾಜ್ಞೆಯನ್ನು ಭಾನುವಾರ ಬೆಳಿಗ್ಗೆ 8ರಿಂದ 11 ಗಂಟೆವರೆಗೆ ಸಡಿಲಿಸಲಾಗಿತ್ತು. ಅಗತ್ಯ ವಸ್ತುಗಳನ್ನು ಖರೀದಿಸುವ ಸಲುವಾಗಿ ಈ ವ್ಯವಸ್ಥೆಯನ್ನು ಮಧ್ಯಾಹ್ನದ ವರೆಗೆ ವಿಸ್ತರಿಸಲಾಗಿತ್ತು. ಬಳಿಕ ಕರ್ಫ್ಯೂ ಮುಂದುವರಿಸಲಾಗಿತ್ತು.

ಒಡಿಶಾ ಅಪರಾಧ ವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಎಲ್ಲ ವಾಟ್ಸ್ ಅಪ್ ಮಾಹಿತಿಗಳನ್ನು ಅಪರಾಧ ವಿಭಾಗದ ಸೈಬರ್ ಘಟಕ ಪರಿಶೀಲನೆ ಮಾಡುತ್ತಿದೆ. ಎಲ್ಲ ಅಗತ್ಯ ಮಾಹಿತಿ ನೀಡುವಂತೆ ಗ್ರೂಪ್ ಅಡ್ಮಿನ್‌ಗೆ ಸೂಚನೆ ನೀಡಲಾಗಿದೆ ಎಂದು ಅಪರಾಧ ವಿಭಾಗದ ವಿಶೇಷ ಮಹಾನಿರ್ದೇಶಕ ಬಿ.ಕೆ.ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಸಂಬಂಧ 80 ಮಂದಿಯನ್ನು ಬಂಧಿಸಲಾಗಿದ್ದು, ಎಂಟು ಎಫ್‌ಐಆರ್ ದಾಖಲಿಸಲಾಗಿದೆ. ಹಿಂದೂ ದೇವತೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದ್ದವು. ಇದಕ್ಕೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದವು.

ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಪಡೆಯ 35 ತುಕಡಿಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಘಟನೆಯ ಬಗ್ಗೆ ಕೇಂದ್ರ ಗೃಹಸಚಿವ ರಾಜ್‌ನಾಥ್ ಸಿಂಗ್ ಅವರಿಗೂ ಮನವರಿಕೆ ಮಾಡಲಾಗಿದೆ ಎಂದು ಅಂತರರಾಜ್ಯ ಮಂಡಳಿ ಸ್ಥಾಯಿಸಮಿತಿ ಸಭೆಯಲ್ಲಿ ಭಾಗವಹಿಸಲು ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.

ಹಿರಿಯ ಅಧಿಕಾರಿಗಳಾದ ಗೃಹ ಕಾರ್ಯದರ್ಶಿ ಅಸಿತ್ ತ್ರಿಪಾಠಿ ಹಾಗೂ ಡಿಜಿಪಿ ಕೆ.ಬಿ.ಸಿಂಗ್ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಶಾಂತಿ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಹಿರಿಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಯಾವುದೇ ಗುಂಪುಘರ್ಷಣೆ ನಡೆದಿಲ್ಲ ಅಥವಾ ಹಿಂಸಾಚಾರ ನಡೆದಿಲ್ಲ. ಕೆಲವರು ಕೋಮು ಸಾಮರಸ್ಯ ಹಾಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಒಡಿಶಾ ಬಿಜೆಪಿ ಅಧ್ಯಕ್ಷ ಬಸಂತ್ ಪಾಂಡ ಹಾಗೂ ಮಾಜಿ ಶಾಸಕ ಪ್ರತಾಪ್ ಸಾರಂಗಿ ಅವರು ಆಡಳಿತಾರೂಢ ಬಿಜೆಡಿ ವೈಫಲ್ಯವನ್ನು ಖಂಡಿಸಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಸಿಎಂ ದೆಹಲಿಯಲ್ಲಿ ಠಿಕಾಣಿ ಹೂಡಿರುವುದು ವಿಚಿತ್ರದ ಸಂಗತಿ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X