Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇರಳದಲ್ಲಿ ಮಲಯಾಳಂ ಭಾಷೆ ಕಡ್ಡಾಯ:...

ಕೇರಳದಲ್ಲಿ ಮಲಯಾಳಂ ಭಾಷೆ ಕಡ್ಡಾಯ: ಗಡಿನಾಡ ಕನ್ನಡಿಗರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ10 April 2017 10:06 PM IST
share
ಕೇರಳದಲ್ಲಿ ಮಲಯಾಳಂ ಭಾಷೆ ಕಡ್ಡಾಯ: ಗಡಿನಾಡ ಕನ್ನಡಿಗರಲ್ಲಿ ಆತಂಕ

ಕಾಸರಗೋಡು, ಎ.10: ಸಚಿವಾಲಯ ಸೇರಿದಂತೆ ಕೇರಳದ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮಲಯಾಳಂ ಭಾಷೆಯನ್ನು ಮೇ 1ರಿಂದ ಕಡ್ಡಾಯಗೊಳಿಸಲು ಕೇರಳ ಸರಕಾರ ತೀರ್ಮಾನಿಸಿದೆ. ಇದರಿಂದ ಗಡಿನಾಡ ಕಾಸರಗೋಡಿನ ಕನ್ನಡ ಭಾಷಾ ಅಲ್ಪಸಂಖ್ಯಾoತರ ಹಕ್ಕುಗಳಿಗೆ ಪೆಟ್ಟು ನೀಡಿದಂತಾಗಿದೆ.

ಎಲ್ಲಾ ಸರಕಾರಿ, ಸಾರ್ವಜನಿಕ ವಲಯ, ಸ್ಥಳೀಯಾಡಳಿತ  ಸಂಸ್ಥೆ, ಸಹಕಾರಿ ಸಂಸ್ಥೆಗಳು ಹೊರಡಿಸುವ ಆದೇಶ, ಸುತ್ತೋಲೆ ಹಾಗೂ ಇತರ ಪತ್ರ  ವ್ಯವಹಾರ ಮಲಯಾಳಂ ಭಾಷೆಯಲ್ಲಿಯೇ ಇರಬೇಕು ಎಂದು ಎಲ್ಲಾ ಇಲಾಖೆಗಳಿಗೆ ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ. ಮಲಯಾಳಂ ಕಡ್ಡಾಯಗೊಳಿಸುವ ಅಧ್ಯಾದೇಶ ಜಾರಿಗೆ ರಾಜ್ಯ ಸಚಿವ ಸಂಪುಟ ಅಂಗೀಕಾರ ನೀಡಿದ್ದರೂ, ಇದಕ್ಕಾಗಿ ಮಾತ್ರ ಸೋಮವಾರ ಪ್ರತ್ಯೇಕ ಸಚಿವ ಸಂಪುಟ ಕರಡು ಅಧ್ಯಾದೇಶಕ್ಕೆ ಅಂಗೀಕಾರ ನೀಡಿದೆ. ಸಿಬಿಎಸ್‌ಇ-ಐಸಿಎಸ್‌ಇ ಪಠ್ಯಪದ್ಧತಿ ಸಹಿತ ಎಲ್ಲಾ ಶಾಲೆಗಳಲ್ಲಿ ಮಲಯಾಳಂ ಭಾಷಾಧ್ಯಯನ ವಿಷಯ ಕಡ್ಡಾಯವಾಗಿ ಅನ್ವಯವಾಗುತ್ತದೆ. ರಾಜ್ಯಪಾಲರು ಸಹಿ ಹಾಕುವುದರೊಂದಿಗೆ ಅಧ್ಯಾದೇಶಕ್ಕೆ ಅಂತಿಮ ಅಂಗೀಕಾರ ಲಭಿಸಲಿದೆ.

2017-18ನ ಸಾಲಿನ ಶೈಕ್ಷಣಿಕ ಅಧ್ಯಯನ ವರ್ಷದಿಂದ ಅಧ್ಯಾದೇಶ ಜಾರಿಗೊಳಿಸಲು ಸರಕಾರ ತೀರ್ಮಾನಿಸಿದ್ದು, ಮಲಯಾಳಂ ಭಾಷೆ ಕಲಿಸದ ಶಾಲೆಗಳ ಮಾನ್ಯತೆ ರದ್ದುಗೊಳಿಸುವಂತಹ ಕಠಿಣ ಕ್ರಮಗಳು ಈ ಅಧ್ಯಾದೇಶದಲ್ಲಿದೆ. ಈ ಹೊಸ ನೀತಿಯಿಂದ ಕನ್ನಡ ಶಾಲೆಗಳಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಲಿದೆ. ಪ್ರತೀ ವರ್ಷ ಅಧ್ಯಾಪಕರ ಹುದ್ದೆ ಕಡಿತವಾಗಲಿದೆ. ಕನ್ನಡ ವಿದ್ಯಾರ್ಥಿಗಳ ಕೊರತೆಯಿಂದ ಅಧ್ಯಾಪಕರ ಹುದ್ದೆ ಇಲ್ಲದಾಗುವುದು ಮಾತ್ರವಲ್ಲದೇ ಜಿಲ್ಲೆಯಲ್ಲಿ ಕನ್ನಡ ಭಾಷಿಕರಿಗಿರುವ ವಿವಿಧ ಇಲಾಖೆಗಳ ಹುದ್ದೆಗಳು, ಸವಲತ್ತುಗಳು ಕ್ರಮೇಣ ಇಲ್ಲದಾಗುತ್ತವೆ. ಬಳಿಕ ಅಂತಿಮವಾಗಿ ಎಲ್ಲವೂ ಮಲಯಾಳಮಯಗೊಳಿಸುವ ಹುನ್ನಾರ ನಡೆಯುತ್ತಿದೆ ಎನ್ನಲಾಗುತ್ತಿದೆ.

ಗಡಿನಾಡ ಕಾಸರಗೋಡಿನ ಕನ್ನಡಿಗರ ಹಕ್ಕುಗಳನ್ನುಕೇರಳ ಸರಕಾರ ಕಸಿಯಲು ಹೊರಟಿದ್ದು, ಭಿನ್ನಮತ ಮರೆತು ಕಾಸರಗೋಡಿನ ಕನ್ನಡ  ಸಂಘಟನೆಗಳು ಹೋರಾಟ ನಡೆಸಬೇಕಾಗಿದೆ. ಕನ್ನಡ ಹೋರಾಟಗಾರರಲ್ಲಿ ಕಂಡುಬರುತ್ತಿರುವ ನಿರ್ಲಕ್ಷ ಧೋರಣೆ ಮತ್ತು ರಾಜಕೀಯದಿಂದ ಕಾಸರಗೋಡಿನಲ್ಲಿ ಕನ್ನಡ ಭಾಷೆಗೆ ಧಕ್ಕೆ ಬರತೊಡಗಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X