Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್-ಜಕ್ರಿಬೆಟ್ಟು ಚತುಷ್ಪಥ...

ಬಿ.ಸಿ.ರೋಡ್-ಜಕ್ರಿಬೆಟ್ಟು ಚತುಷ್ಪಥ ರಸ್ತೆ ನಿರ್ಮಾಣದ ಬಗ್ಗೆ ಸರಕಾರಕ್ಕೆ ಮನವಿ : ರಮಾನಥ ರೈ

ವಾರ್ತಾಭಾರತಿವಾರ್ತಾಭಾರತಿ10 April 2017 10:13 PM IST
share
ಬಿ.ಸಿ.ರೋಡ್-ಜಕ್ರಿಬೆಟ್ಟು ಚತುಷ್ಪಥ ರಸ್ತೆ ನಿರ್ಮಾಣದ ಬಗ್ಗೆ ಸರಕಾರಕ್ಕೆ ಮನವಿ : ರಮಾನಥ ರೈ


ಬಂಟ್ವಾಳ, ಎ. 10: ತಾಲೂಕಿನ ಕೇಂದ್ರ ಸ್ಥಾನದಲ್ಲಿ ಮಿನಿ ವಿಧಾನಸೌಧ ಸಹಿತ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗುತ್ತಿದ್ದು ಬಿ.ಸಿ.ರೋಡಿನಿಂದ ಜಕ್ರಿಬೆಟ್ಟುವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಜೊತೆಗೆ ಮಣಿಹಳ್ಳ ಸೇತುವೆ ಅಗಲೀಕರಣಗೊಳಿಸಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು.
ನೂತನವಾಗಿ ಅಸ್ತಿತ್ವಗೊಂಡ ಬಂಟ್ವಾಳ ತಾಲೂಕಿನ ಅರಳ ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ 2015-16ನೆ ಸಾಲಿನ ಯೋಜನೆಯಲ್ಲಿ 19 ಲಕ್ಷ ರೂ. ವೆಚ್ಚದಲ್ಲಿ ಎರ್ಮಾಳದಲ್ಲಿ ನಿರ್ಮಿಸಲಾ ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ನೂತನ ಗ್ರಾಮ ಪಂಚಾಯತ್‌ಗಳ ರಚನೆಯಾಗಿದ್ದು ಹೆಚ್ಚಿನ ಗ್ರಾಮ ಪಂಚಾಯತ್‌ಗಳಿಗೆ ನೂತನ ಕಟ್ಟಡ ನಿರ್ಮಾಣವಾಗಿದೆ. ಉಳಿದ ಗ್ರಾಪಂಗಳಿಗೆ ನೂತನ ಕಟ್ಟಡ ನಿರ್ಮಾಣ ಹಂತದಲ್ಲಿದೆ ಎಂದರು.

ಸಂಗಬೆಟ್ಟುನಲ್ಲಿ ಒಟ್ಟು 16 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು 36 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಲೋಕಾರ್ಪಣೆಗೊಳ್ಳಲಿದೆ. ಕರೋಪಾಡಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಅಲ್ಲದೆ ನರಿಕೊಂಬು-ಶಂೂರುನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಇದೇ 15ರಂದು ಶಿಲಾನ್ಯಾಸ ನೆರವೇರಲಿದೆ. ಇದರಿಂದ ತಾಲೂಕಿನ ಹಲವು ಗ್ರಾಮಗಳಿಗೆ ಕುಡಿಯುವ ನೀರಿನ ಸೌಲ್ಯ ಸಿಗಲಿದೆ ಎಂದರು. ಮೂಲರಪಟ್ನದಲ್ಲಿ ಪಲ್ಗುಣಿ ಹೊಳೆಗೆ ಸುಮಾರು 5 ಕೋಟಿ ರೂ. ವೆಚ್ಚದ ಹೊಸ ಕಿಂಡಿ ಅಣೆಕಟ್ಟು ನಿರ್ಮಿಸಲಾಗುತ್ತಿದ್ದು ಈ ಪ್ರದೇಶದಲ್ಲಿ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗುವುದರ ಜೊತೆ ಅಂತರ್ಜಲ ವೃದ್ಧಿಯಾಗುವುದು. ಅಣ್ಣಳಿಕೆ-ಕರ್ಪೆ-ಸಿದ್ಧಕಟ್ಟೆ ಸಂಪರ್ಕ ರಸ್ತೆ ವಿಸ್ತರಣೆ ಮತ್ತು ಡಾಮರೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಅಣ್ಣಳಿಕೆ-ಕರಿಮಲೆ-ವಾಮದಪದವು ರಸ್ತೆ ವಿಸ್ತರಣೆ ಮತ್ತು ಡಾಮರೀಕರಣಗೊಳಿಸಲು ಅನುದಾನ ಮಂಜೂರಾಗಿದೆ ಎಂದರು.
ಅರಳ ಗ್ರಾಮದ ಕಲ್ಪನೆ, ಅರಳ ಶುಂಠಿಹಿತ್ಲು ರಸ್ತೆ ಅಭಿವೃದ್ಧಿಗೆ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ಸುಮಾರು 3 ಕೋಟಿ ರೂ. ಅನುದಾನ,ಮೂಲರಪಟ್ನ-ಬಡಗಬೆಳ್ಳೂರು ಸಂಪರ್ಕ ಸೇತುವೆಗೆ 1 ಕೋ.ರೂ. ಅನುದಾನ, ಅರಳಎಸ್ಸಿ,ಎಸ್ಟಿ ಕಾಲನಿ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಮಂಜೂರುಗೊಳಿಸಲಾಗಿದೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಸದಸ್ಯ ಎಂ.ತುಂಗಪ್ಪ ಬಂಗೇರ ಮಾತನಾಡಿದರು. ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಸದಸ್ಯೆ ಮಂಜುಳಾ ಸದಾನಂದ, ತಾಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಗ್ರಾಪಂ ಅಧ್ಯಕ್ಷೆ ತುಂಗಮ್ಮ, ಸದಸ್ಯರಾದ ಎಂ.ಬಿ. ಅಶ್ರಪ್, ರಂಜಿನಿ ನಾಯ್ಕ, ಜೈನಾಬ್, ಲಕ್ಷ್ಮೀಧರ ಪೂಜಾರಿ, ಕಲ್ಯಾಣಿ, ಅಭಿಯಂತರ ಜಗದೀಶ್ ನಿಂಬಾಳ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಪಿಡಿಒ ವೈಲೆಟ್ ಮಿನೇಜಸ್ ಹಾಗೂ ಕಟ್ಟಡ ಕಾಮಗಾರಿಗೆ ಸಾಮಾಗ್ರಿ ಪೂರೈಸಿದ ರಂಜನ್ ಅರನ್ನು ಸಮ್ಮಾನಿಸಲಾಯಿತು. ಗ್ರಾಪಂ ಉಪಾಧ್ಯಕ್ಷ ಜಗದೀಶ್ ಆಳ್ವ ಸ್ವಾಗತಿಸಿದರು. ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ವೈಲೆಟ್ ಮಿನೇಜಸ್ ವರದಿ ವಾಚಿಸಿದರು. ಸದಸ್ಯರಾದ ಲಕ್ಷ್ಮೀಧರ ಶೆಟ್ಟಿ ಮಧ್ಯಾಳ ವಂದಿಸಿದರು. ಸದಸ್ಯ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X