Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಂತನಾಗ್ ಉಪಚುನಾವಣೆ ಮೇ 25ಕ್ಕೆ...

ಅನಂತನಾಗ್ ಉಪಚುನಾವಣೆ ಮೇ 25ಕ್ಕೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ10 April 2017 11:55 PM IST
share

ಶ್ರೀನಗರ, ಎ.10: ಇಲ್ಲಿ ರವಿವಾರ ನಡೆದ ಚುನಾವಣಾ ಹಿಂಸಾಚಾರದಲ್ಲಿ ಎಂಟು ನಾಗರಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಎಪ್ರಿಲ್ 12ರಂದು ನಿಗದಿಯಾಗಿದ್ದ ಅನಂತನಾಗ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ.

ರವಿವಾರ ಆರಂಭವಾದ ಗಲಭೆ ಸೋಮವಾರ ಕುಲ್‌ಗಾಂವ್, ಪುಲ್ವಾಮಾ, ಶೊಪಿಯಾನ್ ಮತ್ತು ಅನಂತ್‌ನಾಗ್ ಜಿಲ್ಲೆಗಳಿಗೂ ಹಬ್ಬಿದ ಕಾರಣ ಚುನಾವಣೆಯನ್ನು ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯ ಸೋದರ, ಅನಂತ್‌ನಾಗ್ ಕ್ಷೇತ್ರದಲ್ಲಿ ಪಿಡಿಪಿ ಅಭ್ಯರ್ಥಿಯಾಗಿರುವ ತಸಾದಕ್ ಮುಫ್ತಿ, ಉಪಚುನಾವಣೆಯನ್ನು ಮುಂದೂಡುವಂತೆ ಕೋರಿಕೆ ಸಲ್ಲಿಸಿದ್ದರು. ಎಪ್ರಿಲ್ 12ರಂದು ನಡೆಯಬೇಕಿದ್ದ ಚುನಾವಣೆ ಮುಂದೂಡುವ ಸಲುವಾಗಿ ಕಣದಿಂದ ಹಿಂದೆ ಸರಿಯಲೂ ಸಿದ್ಧ ಎಂದು ಅವರು ಘೋಷಿಸಿದ್ದರು.
ಜಿಲ್ಲೆಯಲ್ಲಿ ಚುನಾವಣೆ ನಡೆಸಲು ಯೋಗ್ಯವಾದ ವಾತಾವರಣ ಇಲ್ಲ. ಈ ಹಿನ್ನೆಲೆಯಲ್ಲಿ ಮತದಾನ ಮುಂದೂಡಬೇಕು ಎಂದು ಒತ್ತಾಯಿಸಿದ್ದರು. ಆದರೆ ಮುಫ್ತಿ ಮಾಡಿಕೊಂಡಿರುವ ಈ ಮನವಿಯಿಂದ ಅವರ ಸಹೋದರಿ ಮೆಹಬೂಬ ಮುಫ್ತಿ ಸರಕಾರ ಹಾಗೂ ಅದರ ವೈಫಲ್ಯವನ್ನು ಒಪ್ಪಿಕೊಂಡಂತಾಗಿದೆ ಎಂದು ವಿರೋಧ ಪಕ್ಷದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಲೇವಡಿ ಮಾಡಿದ್ದಾರೆ.
ಶ್ರೀನಗರ ಲೋಕಸಭೆ ಕ್ಷೇತ್ರದ ಮತಗಟ್ಟೆಯ ಮೇಲೆ ದಾಳಿ ಮಾಡಿ ಇಲೆಕ್ಟ್ರಾನಿಕ್ ಮತಯಂತ್ರವನ್ನು ಹಾನಿ ಮಾಡಲು ಮುಂದಾದ ಗುಂಪಿನ ಮೇಲೆ ಸೇನೆಯ ಯೋಧರು ಗುಂಡು ಹಾರಿಸಿದಾಗ ಎಂಟು ಮಂದಿ ನಾಗರಿಕರು ಮೃತಪಟ್ಟಿದ್ದರು. ಪ್ರತ್ಯೇಕತಾವಾದಿಗಳು ಈ ಚುನಾವಣೆಯ ಬಹಿಷ್ಕಾರಕ್ಕೆ ಕರೆ ನೀಡಿದ್ದು ಮಾತ್ರವಲ್ಲದೇ, 200ಕ್ಕೂ ಹೆಚ್ಚು ಹಿಂಸಾಚಾರ ಘಟನೆಗಳು ಮತದಾನದ ವೇಳೆ ವರದಿಯಾಗಿದ್ದವು. ಕೇವಲ ಶೇ.7ರಷ್ಟು ಮಂದಿ ಮಾತ್ರ ಮತ ಚಲಾಯಿಸಿದ್ದು, ಇದು 30 ವರ್ಷಗಳಲ್ಲೇ ಕನಿಷ್ಠ ಮತದಾನವಾಗಿತ್ತು.
ಶನಿವಾರ ನಾಗರಿಕರ ಹತ್ಯೆಯಾದ ಹಿನ್ನೆಲೆಯಲ್ಲಿ ಎರಡು ದಿನಗಳ ಸಂಪೂರ್ಣ ಬಂದ್ ಹಾಗೂ ಪ್ರತಿಭಟನೆಗೆ ಪ್ರತ್ಯೇಕತಾವಾದಿ ಸಂಘಟನೆಗಳು ಕರೆ ನೀಡಿವೆ. ಕಾಶ್ಮೀರ ಕಣಿವೆಯ ಎಲ್ಲ ಶಾಲಾ ಕಾಲೇಜುಗಳು ಮತ್ತು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.
ಅನಂತ್‌ನಾಗ್ ಕ್ಷೇತ್ರ ಮುಫ್ತಿ ಕುಟುಂಬದ ಪ್ರಬಲ ನೆಲೆಯಾಗಿದೆ. ಮುಫ್ತಿ ಮುಹಮ್ಮ್ಮದ್ ಸಯೀದ್ ಅವರ ನಿಧನದ ಬಳಿಕ ಮೆಹಬೂಬ ಮುಫ್ತಿಯವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಅವರು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರ ತೆರ ವಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿಕೂಟ ಆಡಳಿತದ ಚುಕ್ಕಾಣಿ ಹಿಡಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X