Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಶ್ಚಿಮಘಟ್ಟದಲ್ಲಿ ಮರಏಡಿ ಪತ್ತೆ!

ಪಶ್ಚಿಮಘಟ್ಟದಲ್ಲಿ ಮರಏಡಿ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ10 April 2017 11:58 PM IST
share

ಹೊಸದಿಲ್ಲಿ, ಎ.10: ಜೀವನಪರ್ಯಂತ ಮರದಲ್ಲೇ ವಾಸಿಸುವ ವಿಶಿಷ್ಟ ತಳಿಯ ಏಡಿಯೊಂದನ್ನು ವಿಜ್ಞಾನಿಗಳ ತಂಡವೊಂದು ಭಾರತದಲ್ಲೇ ಪ್ರಪ್ರಥಮ ಬಾರಿಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪತ್ತೆಹಚ್ಚಿದ್ದಾರೆ. ಸಿಹಿನೀರ ಏಡಿಗಳ ಸಂಕುಲದ ಬಗ್ಗೆ ಕೇರಳದಲ್ಲಿ ಎರಡು ವರ್ಷಗಳ ಕಾಲ ನಡೆಸಲಾದ ಸಮೀಕ್ಷೆಯ ಸಂದರ್ಭದಲ್ಲಿ ಮರಏಡಿ ಪತ್ತೆಯಾಗಿದೆ. ಕೇರಳದ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ವಾಸಿಸುವ ಕಣಿ ಬುಡಕಟ್ಟು ಜನರು, ತಾವು ಉದ್ದನೆಯ ಕಾಲುಗಳ ಮರಏಡಿಗಳನ್ನು ಕಂಡಿರುವ ಬಗ್ಗೆ ಅಧ್ಯಯನ ತಂಡಕ್ಕೆ ತಿಳಿಸಿದ್ದರು.

 ಈ ಏಡಿಗಳನ್ನು ಹಿಡಿಯಲು ಆರಂಭದಲ್ಲಿ ನಡೆಸಲಾದ ಪ್ರಯತ್ನಗಳು ವಿಫಲವಾದರೂ 2016ರ ಸೆಪ್ಟಂಬರ್ 5ರಂದು ಭಾರತ-ಸಿಂಗಾಪುರ ಸಂಶೋಧಕರ ತಂಡವೊಂದು ಈ ಹೆಣ್ಣು ಮರಏಡಿಯನ್ನು ಹಿಡಿಯಲು ಸಫಲವಾಯಿತು. ಆನಂತರ ತಂಡವು ದೊಡ್ಜ ಗಾತ್ರದ ಗಂಡು ಮರಏಡಿಯನ್ನು ಕೂಡಾ ಹಿಡಿದಿದ್ದರು.ಈ ವಿಶಿಷ್ಟ ಮರಏಡಿಯನ್ನು ಗುರುತಿಸಲು ಕಣಿ ಬುಡಕಟ್ಟು ಜನರು ನೆರವಾದ ಕಾರಣಕ್ಕೆ ಅದಕ್ಕೆ ಕಣಿ ಮರಂಜಾಡು ಎಂದು ಹೆಸರಿಡಲಾಗಿದೆ.
 ಎರಡೂ ಏಡಿಗಳನ್ನು ಕೇರಳ ವಿವಿಯ ಜಲ ಜೀವಶಾಸ್ತ್ರ ಹಾಗೂ ಮೀನುಗಾರಿಕೆ ವಿಭಾಗದ ಮ್ಯೂಸಿಯಂನಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ. ಪಶ್ಚಿಮ ಘಟ್ಟ ಶ್ರೇಣಿಯ ಜೀವವೈವಿಧ್ಯತಾಣಗಳ ಸಂರಕ್ಷಣೆಯ ದೃಷ್ಟಿಯಿಂದ ಈ ಅಪರೂಪದ ಮರಏಡಿಗಳ ಶೋಧವು ಮಹತ್ವದ್ದಾಗಿದೆಯೆಂದು ಅಧ್ಯಯನ ತಂಡ ತಿಳಿಸಿದೆ.
ಜಗತ್ತಿನಲ್ಲಿ ಈವರೆಗೆ ಮರ ಏರುವ ಏಡಿಗಳ ಕೇವಲ ಮೂರು ತಳಿಗಳು ಅಸ್ತಿತ್ವದಲ್ಲಿವೆಯೆಂದು ನಂಬಲಾಗಿತ್ತು. ಶ್ರೀಲಂಕಾ, ಮಡಗಾಸ್ಕರ್ ಹಾಗೂ ಬೊರ್ನಿಯೊಗಳಲ್ಲಿ ಅವು ಈ ಹಿಂದೆ ಪತ್ತೆಯಾಗಿದ್ದವು. ಭಾರತದಲ್ಲಿ ಪತ್ತೆಯಾಗಿರುವ ಮರ ಏರುವ ಏಡಿಯು ನಾಲ್ಕನೆ ತಳಿಯದ್ದಾಗಿದೆಯೆಂದು ಕೇರಳದ ವಿವಿಯ ವಿಜ್ಞಾನಿ ಅಪ್ಪುಕಟ್ಟನಾಯರ್ ಬಿಜು ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X