Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶೂಟೌಟ್‌ನಲ್ಲಿ ಚಿಲಿ ಔಟ್;ಭಾರತ...

ಶೂಟೌಟ್‌ನಲ್ಲಿ ಚಿಲಿ ಔಟ್;ಭಾರತ ಸೆಮಿಫೈನಲ್‌ಗೆ

ಮಹಿಳೆಯರ ಹಾಕಿ ವರ್ಲ್ಡ್ ಲೀಗ್ ರೌಂಡ್ -2

ವಾರ್ತಾಭಾರತಿವಾರ್ತಾಭಾರತಿ11 April 2017 12:08 AM IST
share
ಶೂಟೌಟ್‌ನಲ್ಲಿ ಚಿಲಿ ಔಟ್;ಭಾರತ ಸೆಮಿಫೈನಲ್‌ಗೆ

ವೆಸ್ಟ್‌ವ್ಯಾಂಕೊವರ್(ಕೆನಡಾ), ಎ.10: ಭಾರತದ ವನಿತೆಯರ ಹಾಕಿ ತಂಡ ಇಲ್ಲಿ ನಡೆದ ಮಹಿಳೆಯರ ಹಾಕಿ ವರ್ಲ್ಡ್ ಲೀಗ್ ರೌಂಡ್ -2ಫೈನಲ್‌ನಲ್ಲಿ ಚಿಲಿ ತಂಡವನ್ನು ಪೆನಾಲ್ಟಿ ಶೂಟ್‌ನಲ್ಲಿ 3-1ಅಂತರದಲ್ಲಿ ಮಣಿಸಿ ವರ್ಲ್ಡ್ ಲೀಗ್ ಸೆಮಿಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿದೆ.

 ಆಟದ ನಿಗದಿತ ಸಮಯ ಕೊನೆಗೊಂಡಾಗ ಭಾರತ ಮತ್ತು ಚಿಲಿ ತಂಡಗಳು ತಲಾ 1-1 ಗೋಲುಗಳಿಂದ ಸಮಬಲ ಸಾಧಿಸಿತ್ತು. ಫಲಿತಾಂಶ ನಿರ್ಣಯಿಸಲು ಬಳಿಕ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿ ಚಿಲಿಗೆ ಸೋಲುಣಿಸಿತು.

 ಭಾರತದ ಗೋಲು ಕೀಪರ್ ಸವಿತಾ ಪೂನಿಯಾ ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಗೋಲು ಕೀಪರ್ ಆಫ್ ಟೂರ್ನಮೆಂಟ್ ಪ್ರಶಸ್ತಿಗೆ ಭಾಜನರಾದರು.

ಸವಿತಾ ಅವರು ಚಿಲಿ ತಂಡದ ಕಿಮ್ ಜಾಕೋಬ್ ಮತ್ತು ಜೊಸೆಫಾ ವಿಲ್ಲಾಲಾಬೆಟಿಯ ಅವರಿಗೆ ಗೋಲು ನಿರಾಕರಿಸಿ ಭಾರತದ ಗೆಲುವಿಗೆ ನೆರವಾದರು.

ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತದ ಪರ ನಾಯಕಿ ರಾಣಿ ರಾಂಪಾಲ್ ಮತ್ತು ಮೊನಿಕಾ ಚೆಂಡನ್ನು ಎದುರಾಳಿ ತಂಡದ ಗೋಲು ಪೆಟ್ಟಿಗೆಗೆ ಸೇರಿಸಿ ಭಾರತಕ್ಕೆ 2-0 ಮುನ್ನಡೆ ಸಾಧಿಸಲು ನೆರವಾದರು.

ಇದಕ್ಕೂ ಮೊದಲು ಚಿಲಿ ತಂಡದ ಕರೋಲಿನಾ ಗಾರ್ಸಿಯ ಮೂರನೆ ಯತ್ನದಲ್ಲಿ ಚೆಂಡನ್ನು ಗೋಲು ಪೆಟ್ಟಿಗೆಯೊಳಗೆ ಬಾರಿಸುವಲ್ಲಿ ಯಶಸ್ವಿಯಾದರು. ಆದರೆ ದೀಪಿಕಾ ಎದುರಾಳಿ ತಂಡದ ಗೋಲು ಪೆಟ್ಟಿಗೆಗೆ ಚೆಂಡನ್ನು ತಲುಪಿಸುವುದರೊಂದಿಗೆ ಭಾರತ ಹಾಕಿ ವರ್ಲ್ಡ್ ಲೀಗ್ ರೌಂಡ್ -2ಪ್ರಶಸ್ತಿಯನ್ನು ತನ್ನದಾಗಿಸಿತು.

ಫೈನಲ್ ಪಂದ್ಯದಲ್ಲಿ ಭಾರತದ ಆರಂಭ ಚೆನ್ನಾಗಿರಲಿಲ್ಲ. 5ನೆ ನಿಮಿಷದಲ್ಲಿ ಚಿಲಿಯ ಮಲ್ಡೊನಾಡೊ ಗೋಲು ಬಾರಿಸಿ ಚಿಲಿಗೆ 1-0 ಮುನ್ನಡೆಗೆ ನೆರವಾದರು. ಭಾರತ ಹಿನ್ನಡೆ ಅನುಭವಿಸಿದ್ದರೂ, ಒತ್ತಡಕ್ಕೆ ಸಿಲುಕಲಿಲ್ಲ. ಗೋಲು ಕೀಪರ್ ಸವಿತಾ ಎದುರಾಳಿ ತಂಡ ಗೋಲು ಖಾತೆ ತೆರೆಯುವುದನ್ನು ತಡೆಯಲು ವಿಫಲರಾಗಿದ್ದರೂ, ಬಳಿಕ ಗೋಲು ಗಳಿಸಲು ಅವಕಾಶ ನೀಡಲಿಲ್ಲ. ಭಾರತಕ್ಕೆ ಸಮಬಲ ಸಾಧಿಸಲು ಕೆಲವು ಅವಕಾಶಗಳು ಒದಗಿಬಂದರೂ 41ನಿಮಿಷಗಳ ತನಕ ಕಾಯಬೇಕಾಯಿತು.

22ನೆ ನಿಮಿಷದಲ್ಲಿ ಸಿಕ್ಕಿದ ಪೆನಾಲ್ಟಿ ಅವಕಾಶದಲ್ಲಿ ಭಾರತಕ್ಕೆ ಗೋಲು ಬರಲಿಲ್ಲ. ಚಿಲಿ ತಂಡದ ಗೋಲು ಕೀಪರ್ ಭಾರತಕ್ಕೆ ಗೋಲು ನಿರಾಕರಿಸಿದರು.

41ನೆ ನಿಮಿಷದಲ್ಲಿ ಅನುಪಾ ಬಾರ್ಲ ಪೆನಾಲ್ಟಿ ಕಾರ್ನರ್‌ನಲ್ಲಿ ಬಾರಿಸಿದ ಚೆಂಡು ಚಿಲಿ ತಂಡದ ಗೋಲು ಪೆಟ್ಟಿಗೆಗೆ ಸೇರಿತು. ಇದರೊಂದಿಗೆ ಭಾರತ 1-1 ಸಮಬಲ ಸಾಧಿಸಿತು. ಬಳಿಕ ಉಭಯ ತಂಡಗಳಿಂದಲೂ ಗೋಲು ಬರಲಿಲ್ಲ. ಭಾರತ ಪೆನಾಲ್ಟಿ ಶೂಟೌಟ್‌ನಲ್ಲಿ ಚಿಲಿಯನ್ನು ಹೊರದಬ್ಬಿತು.

,,,,,,,,,,

‘‘ ಚಿಲಿ ಬಲಿಷ್ಠ ತಂಡವಾಗಿದೆ. ಆಟ ಆರಂಭದಲ್ಲೇ ಗೋಲು ದಾಖಲಿಸಿ ಮುನ್ನಡೆ ಸಾಧಿಸಿತ್ತು. ಸಮಬಲ ಸಾಧಿಸಲು ಭಾರತ ಬಹಳ ಹೊತ್ತು ಕಾಯಬೇಕಾಯಿತು. ಕೆಲವು ದಿನಗಳ ಹಿಂದೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಆಟದ ವಾತಾವರಣ ಚೆನ್ನಾಗಿರಲಿಲ್ಲ. ನಮಗೆ ಟೂರ್ನಮೆಂಟ್‌ನಲ್ಲಿ ಆಡುವುದು ಸವಾಲಾಗಿ ಪರಿಣಮಿತ್ತು. ಆದರೆ ನಾವು ವರ್ಲ್ಡ್ ಲೀಗ್ ಸೆಮಿಫೈನಲ್ ತಲುಪುವ ಗುರಿಯೊಂದಿಗೆ ಆಡಿದ್ದೇವು. ನಮ್ಮ ಪ್ರಯತ್ನ ಫಲ ನೀಡಿದೆ’’

-ರಾಣಿ ರಾಂಪಾಲ್ , ಭಾರತದ ಮಹಿಳಾ ಹಾಕಿ ತಂಡದ ನಾಯಕಿ.

,,,,,,,,,,,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X