ನೆಲ್ಯಾಡಿಯಲ್ಲಿ ಎರಡು ಚರ್ಚ್ಗಳಿಂದ ಕಳವು
ಚಿನ್ನ ಲೇಪಿತ ಶಿಲುಬೆ ಸಹಿತ ನಗದು ದೋಚಿದ ಕಳ್ಳರು

ಉಪ್ಪಿನಂಗಡಿ, ಎ.11: ನೆಲ್ಯಾಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಎರಡು ಚರ್ಚ್ಗಳಿಗೆ ಕಳ್ಳರು ನುಗ್ಗಿ ನಗದು ಸಹಿತ ಸೊತ್ತುಗಳನ್ನು ಕಳವುಗೈದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲುವಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಆರ್ಲ ಎಂಬಲ್ಲಿರುವ ಚರ್ಚ್ನ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಾಣಿಕೆ ಡಬ್ಬಿಯಿಂದ ನಗದು ಕಳವುಗೈದಿದ್ದಾರೆ.
ನೆಲ್ಯಾಡಿ ಸೇತುವೆ ಬಳಿಯಿರುವ ಇನ್ನೊಂದು ಚರ್ಚ್ಗೆ ನುಗ್ಗಿರುವ ಕಳ್ಳರು ಚಿನ್ನ ಲೇಪಿತ ಶಿಲುಬೆಯೊಂದನ್ನು ಕಳವುಗೈದಿರುವುದಾಗಿ ತಿಳಿದುಬಂದಿದೆ.
ಕಳೆದ ರಾತ್ರಿ ಈ ಕೃತ್ಯ ಎಸಗಲಾಗಿದ್ದು, ಎರಡೂ ಪ್ರಕರಣಗಳಲ್ಲಿ ಚರ್ಚಿನ ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಲಾಗಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





