Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜ್ಪೆ: ನೂತನ ಮಾರುಕಟ್ಟೆ ಮಳಿಗೆ...

ಬಜ್ಪೆ: ನೂತನ ಮಾರುಕಟ್ಟೆ ಮಳಿಗೆ ನಿರ್ಮಾಣದಲ್ಲಿ ಗೊಂದಲ

ಬಜ್ಪೆ ಗ್ರಾಪಂ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ11 April 2017 11:52 PM IST
share

ಬಜ್ಪೆ, ಎ.11: ನೂತನ ಮಾರುಕಟ್ಟೆಯ ಮಳಿಗೆಗಳ ನಿರ್ಮಾಣದಲ್ಲಿರುವ ಗೊಂದಲ ಮತ್ತು ಪಂಚಾಯತ್‌ನ ಪರವಾನಿಗೆ ಪಡೆಯದೇ ಸೆಝ್ ಕಾರ್ಯ ಆರಂಭಿಸಿದೆ ಎಂಬ ಆರೋಪದ ಬಗ್ಗೆ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು.

ಬಜ್ಪೆ ಗ್ರಾಪಂ ಅಧ್ಯಕ್ಷೆ ರೋಝಿ ಮಥಾಯಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ನಡೆಯಲಿರುವ ಹಿನ್ನೆಲೆಯಲ್ಲಿ ಬಜ್ಪೆ ಪಟ್ಟಣದ ಮೀನು ಮಾರುಕಟ್ಟೆ ಮುಂಭಾಗದ ಕಟ್ಟಡ ನಿರ್ಮಾಣವನ್ನು ಪಂಚಾಯತ್ ಸದಸ್ಯರು ಹಾಗೂ ಅಂಗಡಿ ಮಾಲಕರ ಸದಸ್ಯತ್ವದಲ್ಲಿ ನೂತನ ಸಮಿತಿ ರಚಿಸಿಕೊಂಡು ಕಾಮಗಾರಿಗೆ ಟೆಂಡರ್ ನೀಡಲಾಗಿದೆ. ಆದರೆ, ಕಟ್ಟಡ ನಿರ್ಮಾಣಕ್ಕೆ ಅಂಗಡಿ ಮಾಲಕರಿಂದ ಹಣ ಸಂಗ್ರಹಿಸಿ ಅವರಿಗೆ ಬೇಕಾದಂತೆ ನಿರ್ಮಾಣ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸದಸ್ಯ ಶಾಹುಲ್ ಹಮೀದ್ ಆರೋಪಿಸಿದರು.

ಈ ವೇಳೆ ಧ್ವನಿಗೂಡಿಸಿದ ಮತ್ತೋರ್ವ ಸದಸ್ಯ ಲೋಕೇಶ್, ರಸ್ತೆಯಿಂದ 6 ಮೀ. ವರೆಗಿನ ಅಂಗಡಿಗಳಿರುವ ಪ್ರದೇಶವನ್ನು ಖಾಲಿ ಮಾಡುವಂತೆ ಪಿಡಬ್ಲೂಡಿ ಇಲಾಖೆ ಸೂಚನೆ ನೀಡಿದೆ. ಅದರಂತೆ 6 ಮೀ. ಸ್ಥಳ ರಸ್ತೆಗೆ ನೀಡಿದರೆ ಇತಿಹಾಸ ಪ್ರಸಿದ್ಧ ಬಜ್ಪೆ ಮಾರುಕಟ್ಟೆಗೆ ಸ್ಥಳಾವಕಾಶದ ಕೊರತೆ ಕಾಡಲಿದೆ ಎಂದರು.

 ಅಂಗಡಿ ಮಾಲಕರ ಬದಲು ಗುತ್ತಿಗೆಯನ್ನು ಗ್ರಾಪಂ ವಹಿಸಿಕೊಂಡು ನಡೆಸಬೇಕು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸದಸ್ಯ ಹಮೀದ್ ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಪಿಡಿಒ ಸಾಯೀಶ್ ಚೌಟ, ಅಂಗಡಿ ಮಾಲಕರಿಂದ ಡಿಪಾಸಿಟ್ ರೂಪದಲ್ಲಿ ಹಣ ಪಡೆದು ಅಂಗಡಿ ಕೋಣೆಗಳನ್ನು ನಿರ್ಮಾಣ ಮಾಡಲಾಗುವುದು. ಕಾಮಗಾರಿ ಬಗ್ಗೆ ಜಿಪಂನ ಗಮನಕ್ಕೆ ತರಲಾಗಿದೆ. ಅಲ್ಲದೆ, ಜಿಪಂ ಇಂಜಿನಿಯರ್‌ರ ನೇತೃತ್ವದಲ್ಲೇ ಸಂಪೂರ್ಣ ನೀಲನಕ್ಷೆ, ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದರು.

ಬಳಿಕ ಈ ಬಗ್ಗೆ ಸುದೀರ್ಘ ಚರ್ಚೆ ನಡೆದು, ಈ ಮೊದಲು ಕಾಮಗಾರಿ ಸಮಿತಿಯು ನೀಡಿರುವ ಟೆಂಡರ್ ಊರ್ಜಿತದಲ್ಲಿ ಇರುವಂತೆಯೇ ಸಂತೆ ಮಾರುಕಟ್ಟೆಗೆಅವಕಾಶವಾಗುವ ನೂತನ ನೀಲನಕ್ಷೆ ತಯಾರಿಸುವುದು. ಬಳಿಕ ಜಿಪಂ ಇಂಜಿನಿಯರ್ ಸಲಹೆ ಸೂಚನೆಯಂತೆ ಸುಸಜ್ಜಿತ ಮೂಲಭೂತ ಸೌಲಭ್ಯಗಳ ನ್ನೊಳಗೊಂಡ ಮಾರುಕಟ್ಟೆಯನ್ನು ಗ್ರಾಪಂ ಅಧೀನದಲ್ಲೇ ನಿರ್ಮಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಬಳಿಕ ಸಭೆಯಲ್ಲಿ ಮಾತನಾಡಿದ ಸದಸ್ಯ ನಝೀರ್, ಸೆಝ್ ಕಂಪೆನಿಯಿಂದ ಸಂಜೆಯ ವೇಳೆ ವಿಷಪೂರಿತ ಗಾಳಿಯನ್ನು ಹೊರಬಿಡಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಉಸಿರಾಟದ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು.

ಈ ವೇಳೆ ಸಭೆಗೆ ಮಾಹಿತಿ ನೀಡಿದ ಲೋಕೇಶ್, ಹಲವು ದಿನಗಳಿಂದ ಸೆಝ್ ಗ್ರಾಪಂನ ಪರವಾನಿಗೆ ಪಡೆಯದೆ ಕಾರ್ಯಚರಿಸುತ್ತಿದೆ. ಈ ಬಗ್ಗೆ ಸೆಝ್‌ನಿಂದ ತೊಂದರೆ ಅನುಭವಿಸುತ್ತಿರುವ ಎಲ್ಲ ನಾಲ್ಕು ಗ್ರಾಪಂಗಳು ಸೇರಿ ಸೆಝ್‌ನ ಮುಂದೆ ಪ್ರತಿಭಟನೆ ನಡೆಸುವ ಮೂಲಕ ತಮ್ಮ ವಿರೋಧವನ್ನು ಪ್ರಕಟಿಸಬೇಕಿದೆ. ಅದೂ ಸಾಧ್ಯವಾಗದೆ ಸೆಝ್ ಮುಂದುವರಿದರೆ, ಎಲ್ಲ ಸದಸ್ಯರು ರಾಜೀನಾಮೆ ನೀಡುವ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಹೆಚ್ಚಿನ ಸದಸ್ಯರು ಸಹಮತ ವ್ಯಕ್ತಡಿಸಿದರು.

ಈ ಸಂಬಂಧ ಸಭೆಯಲ್ಲಿ ಮಾತನಾಡಿದ ಸದಸ್ಯ ಸಿರಾಜ್, 10 ಪಂಚಾಯತ್‌ಗಳ ಸದಸ್ಯರು ಪ್ರತಿಭಟಿಸಿದರೂ ಸೆಝ್ ಯಾವುದೇ ಪ್ರತಿಭಟನೆಗಳಿಗೆ ಜಗ್ಗದೆ ತನ ಕಾರ್ಯಾಚರಿಸುತ್ತದೆ. ಇದಕ್ಕೆ ಸ್ಥಳೀಯರು ಪ್ರತಿಭಟನೆಗೆ ಇಳಿದರೆ ಸೂಕ್ತ ಎಂದರು.

ಸಭೆಯಲ್ಲಿ ಪಿಡಿಒ ಸಾಯೀಶ್ ಚೌಟ ಮಾತನಾಡಿ, 1 ವಾರದ ಇಳಗಾಗಿ ಎಲ್ಲ ಸದಸ್ಯರು 2017-18ನೆ ಸಾಲಿನ ಆಸ್ತಿ ಘೋಷಣೆ ಮಾಡಬೇಕು. ಇಲ್ಲದಿದ್ದಲ್ಲಿ 43ಬಿ, 47ರ ಅಡಿ ಕ್ರಮ ಜರಗಿಸಲಾಗುವುದು ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಮುಹಮ್ಮದ್ ಶರೀಫ್, ಸದಸ್ಯರಾದ ಲೋಕೇಶ್, ಸಿರಾಜ್ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X