Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಣೆಯಲ್ಲಿ ಗೂಂಡಾರಾಜ್: ಕಾರ್ಪೊರೇಟರ್ ಗಳ...

ಪುಣೆಯಲ್ಲಿ ಗೂಂಡಾರಾಜ್: ಕಾರ್ಪೊರೇಟರ್ ಗಳ ಅದಕ್ಷತೆ ಪ್ರಶ್ನಿಸಿದ ಆರ್ ಟಿಐ ಕಾರ್ಯಕರ್ತನ ಬರ್ಬರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ12 April 2017 12:52 PM IST
share
ಪುಣೆಯಲ್ಲಿ ಗೂಂಡಾರಾಜ್: ಕಾರ್ಪೊರೇಟರ್ ಗಳ ಅದಕ್ಷತೆ ಪ್ರಶ್ನಿಸಿದ ಆರ್ ಟಿಐ ಕಾರ್ಯಕರ್ತನ ಬರ್ಬರ ಹತ್ಯೆ

ಪುಣೆ, ಎ.12: ಪಿಂಪ್ರಿ-ಚಿಂಚ್ವಾಡ್ ಇಲ್ಲಿನ ಖರಲ್ವಾಡಿ ಪ್ರದೇಶದ ಇಬ್ಬರು ಕಾಂಗ್ರೆಸ್ ಕಾರ್ಪೊರೇಟರ್ ಗಳ ಅದಕ್ಷತೆ ಪ್ರಶ್ನಿಸಿದ್ದ ಆರ್ ಟಿ ಐ ಕಾರ್ಯಕರ್ತ ಸುಹಾಸ್ ಹಲ್ದಂಖರ್ ಅವರನ್ನು 11 ಮಂದಿಯ ತಂಡ ಬರ್ಬರವಾಗಿ ಕೊಲೆ ಮಾಡಿದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ. ದಾಳಿಕೋರರಲ್ಲಿ ಮಾಜಿ ಕಾಂಗ್ರೆಸ್ ಕಾರ್ಪೊರೇಟರ್ ಒಬ್ಬರೂ ಸೇರಿದ್ದಾರೆಂದು ಆರೋಪಿಸಲಾಗಿದೆ. ಆರೋಪಿಗಳೆಲ್ಲರನ್ನೂ ಬಂಧಿಸಲಾಗಿದ್ದು ಸ್ಥಳೀಯ ನ್ಯಾಯಾಲಯ ಅವರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಿದೆ.

ಕೊಲೆಯನ್ನು ಖಂಡಿಸಿ ಸ್ಥಳೀಯರು ಮೌನ ಮೆರವಣಿಗೆಯೊಂದನ್ನು ನಡೆಸಿದ್ದು, ಪ್ರದೇಶದಲ್ಲಿ ಗೂಂಡಾ ರಾಜ್ ಅಂತ್ಯಗೊಳಿಸುವಂತೆ ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನತೆ ನಿರ್ಮಾಣವಾಗಿದೆ.

ಪೊಲೀಸರ ಪ್ರಕಾರ ರವಿವಾರ ರಾತ್ರಿ ಸುಹಾಸ್ ಅವರು ತಮ್ಮ ಬೈಕಿನಲ್ಲಿ ಮನೆಯತ್ತ ಸಾಗುತ್ತಿದ್ದಾಗ ಅವರನ್ನು ಖಾರಲ್ವಾಡಿಯ ಚೌಕ್ ಎಂಬಲ್ಲಿ ಇಬ್ಬರು ತಡೆದು ಮೂಲಸೌಲಭ್ಯಗಳ ಕೊರತೆ ಬಗ್ಗೆ ಅವರು ಅಳವಡಿಸಿದ ಬೋರ್ಡ್ ಒಂದರ ವಿಚಾರದಲ್ಲಿ ಅವರನ್ನು ವ್ಯಂಗ್ಯವಾಡಿದ್ದರು. ಇದರಿಂದ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಸುಹಾಸ್ ರತ್ತ ಕಾಂಕ್ರೀಟ್ ಬ್ಲಾಕ್ ಗಳನ್ನು ಎಸೆದಿದ್ದರು. ತಲೆಗೆ ಗಂಭೀರವಾಗಿ ಗಾಯಗೊಂಡ ಸುಹಾಸ್ ರಕ್ತದ ಮಡುವಿನಲ್ಲಿ ಬಿದ್ದು ಕೊನೆಯುಸಿರೆಳೆದಿದ್ದರು.

ಬಂಧಿತ ಮಾಜಿ ಕಾರ್ಪೊರೇಟರ್ ನನ್ನು ಸದ್ಗುರು ಮಹದೇವ್ ಕದಂ ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲೊಬ್ಬ ಕಲ್ಯ ಅಲಿಯಾಸ್ ಸಂದೀಪ್ ಕಲಪುರೆ ಸ್ಥಳೀಯ ಮುನಿಸಿಪಾಲಿಟಿ ನಡೆಸುತ್ತಿದ್ದ ಮಕ್ಕಳ ಕೇಂದ್ರವೊಂದರ ವಾಚ್ ಮ್ಯಾನ್ ಆಗಿದ್ದು ಯಾವತ್ತೂ ಕರ್ತವ್ಯಕ್ಕೆ ಹಾಜರಾಗದ ಆತನ ವಿರುದ್ಧ ಸುಹಾಸ್ ದೂರು ನೀಡಿದ್ದರಿಂದ ಆತ ಕೆಲಸ ಕಳದುಕೊಂಡಿದ್ದ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X