Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳ ನಿಸರ್ಗಧಾಮದಲ್ಲಿಲ್ಲ ನೀರಿನ...

ಪಿಲಿಕುಳ ನಿಸರ್ಗಧಾಮದಲ್ಲಿಲ್ಲ ನೀರಿನ ಸಮಸ್ಯೆ: 1000ಕ್ಕೂ ಅಧಿಕ ಪ್ರಾಣಿ-ಪಕ್ಷಿಗಳಿಗೂ ಸಾಕಾಗುವಷ್ಟು ನೀರಿದೆ

ವಾರ್ತಾಭಾರತಿವಾರ್ತಾಭಾರತಿ12 April 2017 3:45 PM IST
share
ಪಿಲಿಕುಳ ನಿಸರ್ಗಧಾಮದಲ್ಲಿಲ್ಲ ನೀರಿನ ಸಮಸ್ಯೆ: 1000ಕ್ಕೂ ಅಧಿಕ ಪ್ರಾಣಿ-ಪಕ್ಷಿಗಳಿಗೂ ಸಾಕಾಗುವಷ್ಟು ನೀರಿದೆ

ಮಂಗಳೂರು, ಎ.12: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳು ಬರಪೀಡಿತವೆಂದು ಘೋಷಿಸಲ್ಪಟ್ಟಿದ್ದರೂ, ಮಂಗಳೂರು ನಗರದ ಹೊರವಲಯದ ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದಲ್ಲಿ ನೀರಿಗೆ ಬರವಿಲ್ಲ. ಇಲ್ಲಿರುವ 1,000ಕ್ಕೂ ಅಧಿಕ ಜೀವಸಂಕುಲಗಳಿಗೆ ಅಗತ್ಯವಾದಷ್ಟು ನೀರು ಲಭ್ಯವಿದೆ. ''ಪಿಲಿಕುಳ ನಿಸರ್ಗಧಾಮದ ಪ್ರಾಣಿ ಪಕ್ಷಿಗಳಿಗೆ ಅಗತ್ಯವಾದ ನೀರು ಗುರುಪುರ ನದಿಯಿಂದ ಸರಬರಾಜಾಗುತ್ತದೆ. ಮೃಗಾಲಯದಲ್ಲಿ ಅಲ್ಲಲ್ಲಿ ಕೊಳಗಳ ವ್ಯವಸ್ಥೆ ಇದ್ದು, ಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಇದೆ. ಬಿಸಿಲ ತಾಪವನ್ನು ತಣಿಸಲು ಪ್ರಾಣಿಗಳಿಗೆ ನೀರನ್ನು ಚಿಮುಕಿಸುವ ವ್ಯವಸ್ಥೆಯೂ ಇದೆ'' ಎಂದು ಡಾ. ಶಿವರಾಮ ಕಾರಂತ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ವಿ. ಪ್ರಸನ್ನ 'ವಾರ್ತಾಭಾರತಿ'ಗೆ ತಿಳಿಸಿದ್ದಾರೆ.

ಬಿಸಿಲ ತಾಪಮಾನದಿಂದ ಪ್ರಾಣಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆಯೂ ಜಾಗರೂಕತೆ ವಹಿಸಲಾಗುತ್ತದೆ. ಪ್ರತಿದಿನ ಪಶು ವೈದ್ಯರು ಭೇಟಿ ನೀಡಿ ಪ್ರಾಣಿಗಳ ತಪಾಸಣೆ ನಡೆಸುತ್ತಾರೆ. ಆಹಾರದ ಬಗ್ಗೆಯೂ ಸೂಕ್ತ ಕಾಳಜಿ ವಹಿಸಲಾಗುತ್ತದೆ ಎಂದು ಅವರು ಹೇಳುತ್ತಾರೆ.

ಮನಪಾ ತ್ಯಾಜ್ಯ ನೀರು ಸಂಸ್ಕರಿಸಿ ಮರ-ಗಿಡಗಳಿಗೆ ಬಳಕೆ

ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನೀರು ನಿಸರ್ಗಧಾಮಕ್ಕೆ ಸರಬರಾಜಾಗುತ್ತದೆ. ಅದನ್ನು ಸಂಸ್ಕರಿಸುವ ವ್ಯವಸ್ಥೆಯೂ ಇದೆ. ಸಂಸ್ಕರಿಸಲ್ಪಟ್ಟ ಸುಮಾರು 1.5 ಲಕ್ಷ ಲೀಟರ್ ನೀರನ್ನು ಇಲ್ಲಿನ ಮರ ಗಿಡಗಳು, ಉದ್ಯಾನವನ, ಟ್ರೀ ಪಾರ್ಕ್, ಹುಲ್ಲು ಹಾಸು, ಪ್ರಾದೇಶಿಕ ವಿಜ್ಞಾನ ಕೇಂದ್ರದ ಸುತ್ತ ಮುತ್ತಲಿನ ಗಿಡಮರಗಳಿಗೆ ಒದಗಿಸಲಾಗುತ್ತದೆ. ಹಾಗಾಗಿ ನಿಸರ್ಗಧಾಮದಲ್ಲಿ ನೀರಿನ ಸಮಸ್ಯೆ ಎದುರಾಗಿಲ್ಲ ಎಂದು ಪ್ರಸನ್ನ ವಿವರ ನೀಡುತ್ತಾರೆ.

ಗುರುಪುರ ನದಿ ದಂಡೆಯಲ್ಲಿರುವ 400 ಎಕರೆ ಪ್ರದೇಶವಾದ ಪಿಲಿಕುಳದಲ್ಲಿ ಸುಮಾರು 150 ಎಕರೆ ಪ್ರದೇಶವು ಉದ್ಯಾನವದಿಂದ ಕೂಡಿದೆ. ಉದ್ಯಾನವನದ ಮೃಗಾಲಯದಲ್ಲಿ 120 ವಿವಿಧ ಪ್ರಬೇಧಗಳ 1000ಕ್ಕೂ ಅಧಿಕ ಪ್ರಾಣಿಪಕ್ಷಿಗಳಿವೆ. ಇದೀಗ ವಿಶೇಷ ಆಕರ್ಷಣೆಯಾಗಿ ಎರಡು ನೀರಾನೆಗಳಿದ್ದು, ಮತ್ತಷ್ಟು ಹೊಸ ಪ್ರಾಣಿಗಳ ಸೇರ್ಪಡೆಯಾಗಲಿದೆ. ನಿಸರ್ಗಧಾಮಗಳ ನಡುವಿನ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಪಿಲಿಕುಳ ಮೃಗಾಲಯದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಚಿರತೆ, ಕಾಳಿಂಗ ಸರ್ಪಗಳಲ್ಲಿ ಕೆಲವನ್ನು ರಾಜ್ಯದ ಬೇರೆ ಮೃಗಾಲಯಗಳಿಗೆ ರವಾನಿಸಿ, ಬೇರೆ ಮೃಗಾಲಯಗಳಿಂದ ಹೊಸ ಪ್ರಾಣಿಗಳನ್ನು ಪಿಲಿಕುಳಕ್ಕೆ ತರುವ ಕಾರ್ಯಕ್ರಮವೂ ಪ್ರಸ್ತುತ ಜಾರಿಯಲ್ಲಿದೆ ಎಂದವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X