Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 3 ವರ್ಷದ ಬಾಲಕನ ಹತ್ಯೆ ಪ್ರಕರಣ: ಮಠದ...

3 ವರ್ಷದ ಬಾಲಕನ ಹತ್ಯೆ ಪ್ರಕರಣ: ಮಠದ ಪರಿಚಾರಕನೇ ಹಂತಕ

ವಾರ್ತಾಭಾರತಿವಾರ್ತಾಭಾರತಿ12 April 2017 5:06 PM IST
share
3 ವರ್ಷದ ಬಾಲಕನ ಹತ್ಯೆ ಪ್ರಕರಣ: ಮಠದ ಪರಿಚಾರಕನೇ ಹಂತಕ

ಶಿವಮೊಗ್ಗ, ಎ. 12: ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ತಂಗಿದ್ದ 3 ವರ್ಷದ ಬಾಲಕನ ಅಪಹರಣ ನಡೆಸಿ ಹತ್ಯೆ ಮಾಡಿದ್ದ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಬಾಲಕನ ಹತ್ಯೆ ನಡೆಸಿದ ಆರೋಪದ ಮೇರೆಗೆ ಆಶ್ರಮದ ಪರಿಚಾರಕನನ್ನು ಬಂಧಿಸಿದ್ದಾರೆ.

ರುದ್ರೇಶ್ (22) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆಶ್ರಮದ ಸಮೀಪವೇ ಆರೋಪಿಯನ್ನು ಹೊಸನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಂಜುನಾಥಗೌಡ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯ ಗಂಧರ್ವನಗರದ ನಿವಾಸಿ ಖಾಸಗಿ ಕಂಪೆನಿಯೊಂದರಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕುಮಾರಸ್ವಾಮಿ ಹಾಗೂ ಶಿರಸಿ ಸಮೀಪದ ಸಿದ್ದಾಪುರದ ನಿವಾಸಿ ಚೈತ್ರಾ ಎಂಬ ದಂಪತಿಯ ಪುತ್ರ ಸುಜ್ (3) ಕೊಲೆಗೀಡಾದ ಬಾಲಕನಾಗಿದ್ದಾನೆ.

ಆರೋಪಿ ರುದ್ರೇಶ್ ಮೂಲತಃ ಮಹಾರಾಷ್ಟ್ರದ ಸಾಂಗ್ಲಿಯವನಾಗಿದ್ದು, ಕೆಲ ವರ್ಷಗಳಿಂದ ಸದಾನಂದ ಶಿವಯೋಗಾಶ್ರಮದಲ್ಲಿ ಪರಿಚಾರಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಬಾಲಕನ ಕುಟುಂಬದ ಸದಸ್ಯರೊಂದಿಗಿದ್ದ ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಬಾಲಕನ ಹತ್ಯೆ ನಡೆಸಿದ್ದಾಗಿ ಆರೋಪಿಯು ಪೊಲೀಸರ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. 

ಘಟನೆ ಹಿನ್ನೆಲೆ: ಸದಾನಂದ ಶಿವಯೋಗಾಶ್ರಮದಲ್ಲಿ ಕಿರಿಯ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ಏರ್ಪಡಿಸಲಾಗಿತ್ತು. ಮಠದ ಈ ಹಿಂದಿನ ಗುರುಗಳಾಗಿದ್ದ, ಕೆಲ ವರ್ಷಗಳ ಹಿಂದೆ ವಿಧಿವಶರಾಗಿದ್ದ ಚನ್ನಬಸವ ಸ್ವಾಮೀಜಿ ಹಾಗೂ ಈಗಿನ ಸಿದ್ದಲಿಂಗ ಸ್ವಾಮೀಜಿ ಚೈತ್ರಾರವರಿಗೆ ಸಂಬಂಧಿಗಳಾಗಿದ್ದರು. ಪಟ್ಟಾಧಿಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಚೈತ್ರಾ  ತಮ್ಮ ಪುತ್ರನೊಂದಿಗೆ ಕಳೆದ ವಾರ ಮಠಕ್ಕೆ ಆಗಮಿಸಿ ತಂಗಿದ್ದರು. ಕಳೆದ ಸೋಮವಾರ ರಾತ್ರಿ ಚೈತ್ರಾ ಪಕ್ಕದಲ್ಲಿ ಮಲಗಿದ್ದ ಬಾಲಕ ನಿಗೂಢವಾಗಿ ಕಣ್ಮರೆಯಾಗಿದ್ದ. ಬೆಳಗ್ಗೆ ಬಾಲಕ ನಾಪತ್ತೆಯಾಗಿರುವ ಸುದ್ದಿ ತಿಳಿದು ಎಲ್ಲೆಡೆ ಶೋಧ ನಡೆಸಿದ್ದು, ಈ ವೇಳೆ ಮಠಕ್ಕೆ ಸಮೀಪದ ನದಿಯಲ್ಲಿ ಬಾಲಕನ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಬಾಲಕನ ಕೊಲೆಯಾಗಿದ್ದು ಕಂಡುಬಂದಿತ್ತು.

ಈ ನಡುವೆ ಸೋಮವಾರ ರಾತ್ರಿ ಮಠದಲ್ಲಿ ಊಟ ಮಾಡಿದ್ದ ಚೈತ್ರಾ ಮತ್ತಿತರರ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿದ್ದು ಪೊಲೀಸರ ತನಿಖೆಯ ವೇಳೆ ಪತ್ತೆಯಾಗಿತ್ತು. ಊಟ ಮಾಡಿದ್ದವರು ಗಾಢ ನಿದ್ರೆಗೆ ಶರಣಾಗಿದ್ದರು. ಬೆಳಗ್ಗೆ ಮಂಪರಿನಿಂದ ಮಲಗಿದ್ದವರು ಸ್ಥಳದಿಂದ ಏದ್ದೇಳಲಾಗದೆ ಒದ್ದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಚೈತ್ರಾ ಸೇರಿದಂತೆ ಉತ್ತರ ಕರ್ನಾಟಕ ಬಾಗದ ನಾಲ್ಕೈದು ಭಕ್ತಾಧಿಗಳನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಸಿಕ್ಕಿಬಿದ್ದ ಆರೋಪಿ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮಠದಲ್ಲಿ ಪರಿಚಾರಕರಾಗಿ ಕೆಲಸ ಮಾಡುತ್ತಿದ್ದ ರುದ್ರೇಶ್ ಸೇರಿದಂತೆ ಇತರೆ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ಈ ವೇಳೆ ರುದ್ರೇಶನು ತಾನೊಬ್ಬನೆ ಬಾಲಕನ ಹತ್ಯೆ ನಡೆಸಿದ್ದಾಗಿ ಬಾಯ್ಬಿಟ್ಟಿದ್ದ. ಚೈತ್ರಾ ಕುಟುಂಬದವರೊಂದಿಗಿದ್ದ ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆಸಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ.

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿದ್ದ: ಬಾಲಕನ ಹತ್ಯೆಗೆ ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದ ಮಠದ ಪರಿಚಾರಕ ರುದ್ರೇಶ್‌ ಬಾಲಕನ ತಾಯಿ ಹಾಗೂ ಇತರರ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿದ್ದ. ಈ ಊಟ ಸೇವಿಸಿದ್ದ ಚೈತ್ರಾ ಮತ್ತಿತರರು ಗಾಢ ನಿದ್ರೆಗೆ ಶರಣಾಗಿದ್ದರು. ಮಧ್ಯರಾತ್ರಿಯ ವೇಳೆ ಆರೋಪಿ ತಾಯಿಯ ಪಕ್ಕದಲ್ಲಿ ನಿದ್ರಿಸುತ್ತಿದ್ದ ಮಗುವನ್ನು ಹೊತ್ತೊಯ್ದು ಉಸಿರುಗಟ್ಟಿಸಿ ಸಾಯಿಸಿದ್ದ. ನಂತರ ಮಗುವನ್ನು ಮಠದ ಸಮೀಪವಿದ್ದ ನದಿಗೆ ಎಸೆದಿದ್ದ. ಏನೂ ಗೊತ್ತಿಲ್ಲದಂತೆ ಮಠದಲ್ಲಿಯೇ ಬೀಡುಬಿಟ್ಟಿದ್ದ. ಬೆಳಗ್ಗೆ ಮಗುವಿನ ಹುಡುಕಾಟದ ನಾಟಕ ಕೂಡ ನಡೆಸಿದ್ದ ವಿಷಯ ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X