Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಅಂಬೇಡ್ಕರ್ ವಸತಿ ಶಾಲೆ’ ಮುಂದಿನ...

‘ಅಂಬೇಡ್ಕರ್ ವಸತಿ ಶಾಲೆ’ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭ: ಸಚಿವ ಆಂಜನೇಯ

6ರಿಂದ 10ನೆ ತರಗತಿವರೆಗೆ 125 ವಸತಿ ಶಾಲೆ

ವಾರ್ತಾಭಾರತಿವಾರ್ತಾಭಾರತಿ12 April 2017 6:39 PM IST
share
‘ಅಂಬೇಡ್ಕರ್ ವಸತಿ ಶಾಲೆ’ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭ: ಸಚಿವ ಆಂಜನೇಯ

ಬೆಂಗಳೂರು, ಎ.12: ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೆ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹೋಬಳಿಗೆ ಒಂದರಂತೆ 125 ಅಂಬೇಡ್ಕರ್ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವರ್ಗದ 6ರಿಂದ 10ನೆ ತರಗತಿಯ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಈ ವಸತಿ ಶಾಲೆಗಳನ್ನು ಪ್ರಾರಂಭಿಸುತ್ತಿದ್ದು, ಕನ್ನಡ ಮತ್ತು ಆಂಗ್ಲ ಮಾಧ್ಯಮ ಬೋಧನೆ ಮಾಡಲಾಗುತ್ತದೆ ಎಂದರು.

ಪರಿಶಿಷ್ಟರಿಗೆ ವಸತಿ: ವಸತಿ ರಹಿತ ಎಸ್ಸಿ- ಎಸ್ಟಿ ವರ್ಗದವರಿಗೆ ನಗರ-ಗ್ರಾಮೀಣ ಪ್ರದೇಶದಲ್ಲಿ ವಸತಿ ಸೌಲಭ್ಯ ಕಲ್ಪಿಸಲು ‘ಅಂಬೇಡ್ಕರ್ ನಿವಾಸ ಯೋಜನೆ’ಯನ್ನು ಎ.14ರಂದು ಆರಂಭಿಸಲಾಗುತ್ತಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 1.75ಲಕ್ಷ ರೂ., ನಗರ ಪ್ರದೇಶದಲ್ಲಿ 2ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ನಿವೇಶನ ಹೊಂದಿರುವ ಪರಿಶಿಷ್ಟರು ವಸತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದರೆ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಎಲ್ಲ ಅರ್ಜಿದಾರರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಒಂದು ವೇಳೆ ನಿವೇಶನ ರಹಿತರು ಇದ್ದರೂ, ಭೂಮಿ ಖರೀದಿಸಿ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಈ ಯೋಜನೆಗೆ 300 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.

ಉದ್ಯೋಗ: ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 1 ಲಕ್ಷ ಮಂದಿ ನಿರುದ್ಯೋಗಿ ಯುವಕರಿಗೆ ಅಗತ್ಯ ತರಬೇತಿ ನೀಡಿ ಸ್ವಯಂ ಉದ್ಯೋಗಕ್ಕೆ ತಲಾ 40 ಸಾವಿರ ರೂ. ಸಾಲ ಸೌಲಭ್ಯ ಕಲ್ಪಿಸಲಾಗುವುದು. ಸಾಲದ ಮೊತ್ತದ ಪೈಕಿ 25 ಸಾವಿರ ರೂ. ಸಬ್ಸಿಡಿ, ಉಳಿದ 15 ಸಾವಿರ ರೂ.ಗಳನ್ನು ಶೇ.6ರ ಬಡ್ಡಿ ದರದಲ್ಲಿ ಸಾಲದ ರೂಪದಲ್ಲಿ ನೀಡಲಾಗುವುದು ಎಂದು ತಿಳಿಸಿದರು.

100 ಕೋಟಿ ರೂ.: ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ 40 ಎಕರೆ ಪ್ರದೇಶದಲ್ಲಿ ಸ್ಥಾಪಿಸುತ್ತಿರುವ ಅಂಬೇಡ್ಕರ್ ಸ್ಕೂಲ್ ಆಫ್ ಎಕಾಮಿಕ್ಸ್‌ಗೆ ಎಸ್ಸಿಪಿ- ಟಿಎಸ್ಪಿ ಯೋಜನೆಯ 100 ಕೋಟಿ ರೂ.ಗಳನ್ನು ಉನ್ನತ ಶಿಕ್ಷಣ ಇಲಾಖೆಗೆ ಒದಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X