Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಜ್‌ಯಾತ್ರೆ-2017 : ಮಹಿಳೆಯರಿಗಾಗಿ 200...

ಹಜ್‌ಯಾತ್ರೆ-2017 : ಮಹಿಳೆಯರಿಗಾಗಿ 200 ಹೆಚ್ಚುವರಿ ಸೀಟು ಲಭ್ಯ

ವಾರ್ತಾಭಾರತಿವಾರ್ತಾಭಾರತಿ12 April 2017 7:32 PM IST
share
ಹಜ್‌ಯಾತ್ರೆ-2017 : ಮಹಿಳೆಯರಿಗಾಗಿ 200 ಹೆಚ್ಚುವರಿ ಸೀಟು ಲಭ್ಯ

ಬೆಂಗಳೂರು, ಎ.12: ಮೆಹ್ರಮ್(ಸಂಗಾತಿ) ಜೊತೆಯಲ್ಲಿ ಹಜ್‌ಯಾತ್ರೆಗೆ ತೆರಳಲು ಬಯಸಿರುವ ಮಹಿಳೆಯರಿಗಾಗಿ ಭಾರತೀಯ ಹಜ್ ಸಮಿತಿಯು ದೇಶದ ಎಲ್ಲ ರಾಜ್ಯಗಳಿಗೆ ಅನ್ವಯವಾಗುವಂತೆ 200 ಹೆಚ್ಚುವರಿ ಸೀಟುಗಳನ್ನು ಕಲ್ಪಿಸಿದೆ.

ಶರೀಯತ್ ಪ್ರಕಾರ ಮೆಹ್ರಮ್(ಸಂಗಾತಿ) ಇಲ್ಲದೆ ಮಹಿಳೆಯರು ಹಜ್ ಯಾತ್ರೆಯನ್ನು ಕೈಗೊಳ್ಳಲು ಸಾಧ್ಯವಿಲ್ಲ. ಪ್ರಸಕ್ತ ಸಾಲಿನ ಹಜ್‌ಯಾತ್ರೆಗೆ ಮೆಹ್ರಮ್ ಮಾತ್ರ ಆಯ್ಕೆಯಾಗಿದ್ದು, ಮಹಿಳೆಗೆ ಅವಕಾಶ ಸಿಗದೆ ಇದ್ದರೆ, ಅಂತಹವರು ತಮ್ಮ ಮೆಹ್ರಮ್ ಜೊತೆ ಹಜ್‌ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಈ ಕೋಟಾದಡಿ ಯಾತ್ರೆ ಕೈಗೊಳ್ಳಲು ಬಯಸುವಂತಹ ರಾಜ್ಯದ ಮಹಿಳೆಯರು, ಹಜ್ ಯಾತ್ರೆಯ ಅರ್ಜಿಯನ್ನು ಭರ್ತಿ ಮಾಡಿ ಮೇ 8ರೊಳಗೆ ನಗರದ ರಿಚ್ಮಂಡ್ ರಸ್ತೆಯಲ್ಲಿರುವ ರಾಜ್ಯ ಹಜ್ ಸಮಿತಿಯ ಕಚೇರಿಗೆ ತಲುಪಿಸಬೇಕಿದೆ.

ಕಾರಣಗಳು : ಪ್ರಸಕ್ತ ಸಾಲಿನ ಹಜ್‌ಯಾತ್ರೆಗೆ ಸಂಬಂಧಪಟ್ಟ ಮೆಹ್ರಮ್ ಜೊತೆ ಅರ್ಜಿ ಸಲ್ಲಿಸದಿರಲು ಕಾರಣವೇನು ಎಂಬುದನ್ನು ಈಗ ಅರ್ಜಿ ಸಲ್ಲಿಸುವ ಮಹಿಳೆಯರು ಸ್ಪಷ್ಟಪಡಿಸಬೇಕು. ಮೆಹ್ರಮ್ ಜೊತೆಗಿನ ತಮ್ಮ ಸಂಬಂಧವನ್ನು ದೃಢೀಕರಿಸುವಂತಹ ದಾಖಲೆಗಳನ್ನು ರಾಜ್ಯ ಹಜ್ ಸಮಿತಿಗೆ ಸಲ್ಲಿಸಬೇಕು.
ಒಂದು ವೇಳೆ ಸಂಬಂಧವನ್ನು ದೃಢೀಕರಿಸುವ ದಾಖಲೆಗಳನ್ನು ಸಲ್ಲಿಸುವಲ್ಲಿ ಮಹಿಳೆಯು ವಿಫಲವಾದರೆ ಯಾತ್ರೆಯ ಅರ್ಜಿಯು ತಿರಸ್ಕರಿಸಲ್ಪಡುತ್ತದೆ. ಈಗ ಆಯ್ಕೆ ಮಾಡಿಕೊಂಡಿರುವ ಮೆಹ್ರಮ್ ಜೊತೆಯೆ ಯಾತ್ರೆ ಕೈಗೊಳ್ಳಲು ಉದ್ದೇಶಿಸಿರುವುದಕ್ಕೆ ಕಾರಣವನ್ನು ತಿಳಿಸಬೇಕು.

ಅಲ್ಲದೆ, ಅರ್ಜಿ ಸಲ್ಲಿಸುತ್ತಿರುವ ಮಹಿಳೆಯು ಮುಂದಿನ ವರ್ಷಗಳಲ್ಲಿ ಹಜ್ ಯಾತ್ರೆ ಕೈಗೊಳ್ಳಲು ಯಾಕೆ ಸಾಧ್ಯವಾಗುವುದಿಲ್ಲ. ಚಾಲ್ತಿಯಲ್ಲಿರುವ ಅಂತಾರಾಷ್ಟ್ರೀಯ ಪಾಸ್ ಪೋರ್ಟ್‌ನ ಪ್ರಕಾರ ಮಹಿಳೆಯ ವಯಸ್ಸು, ಕುಟುಂಬದಲ್ಲಿ ಇರುವಂತಹ ಅಥವಾ ಇಲ್ಲದಿರುವ ಮೆಹ್ರಮ್‌ನ ವಿವರಗಳನ್ನು ರಾಜ್ಯ ಹಜ್ ಸಮಿತಿಗೆ ಸಲ್ಲಿಸಬೇಕಿದೆ.

ಭಾರತೀಯ ಹಜ್ ಸಮಿತಿಯು ಸೀಟುಗಳ ಲಭ್ಯತೆಯ ಆಧಾರದಲ್ಲಿ ಅರ್ಜಿಗಳನ್ನು ಪರಿಗಣಿಸಲಿದೆ. 200ಕ್ಕಿಂತ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದಲ್ಲಿ, ಲಾಟರಿ ಮೂಲಕ ಯಾತ್ರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X