Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾಗಿ...

ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ ಭಟ್ ನೇಮಕ

ನೂತನ ಸಿಇಒ, ಎಂ.ಡಿ ಆಗಿ ಮಹಾಬಲೇಶ್ವರ ಎಂ.ಎಸ್. ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ12 April 2017 8:25 PM IST
share
ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ ಭಟ್ ನೇಮಕ

ಮಂಗಳೂರು, ಎ.12: ಖಾಸಗಿ ರಂಗದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ನಿರ್ದೇಶಕರಾಗಿದ್ದ ಪಿ.ಜಯರಾಮ ಭಟ್ ಮುಂದಿನ ಮೂರು ವರ್ಷದ ಅವಧಿಗೆ ಅರೆ ಕಾಲಿಕ (ನಾನ್ ಎಕ್ಸ್‌ಕ್ಯೂಟಿವ್ )ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ನೂತನ ಎಂ.ಡಿ., ಸಿಇಒ ಆಗಿ ಮಹಾಬಲೇಶ್ವರ ಎಂ.ಎಸ್. ನೇಮಕಗೊಂಡಿರುವುದಾಗಿ ನೂತನ ಅಧ್ಯಕ್ಷರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. 

ಅ.26, 2016ರಲ್ಲಿ ಬ್ಯಾಂಕಿನ ಅಧ್ಯಕ್ಷರಾಗಿದ್ದ ಅನಂತಕೃಷ್ಣ ನಿವೃತ್ತರಾದ ಬಳಿಕ ತೆರವಾಗಿದ್ದ ಈ ಹುದ್ದೆಗೆ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ನೂತನ ಆಯ್ಕೆ ನಡೆದಿದೆ. ಜುಲೈ14, 2009ರಲ್ಲಿ ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎದುರಾದ ಸವಾಲುಗಳನ್ನು ಎದುರಿಸಿ ಬ್ಯಾಂಕನ್ನು ಸಮರ್ಥವಾಗಿ ನಡೆಸಿ, ಬಲಿಷ್ಠ ಬ್ಯಾಂಕ್ ಆಗಿ ಪರಿವರ್ತಿಸಲು ಪ್ರಯತ್ನಿಸಿದ್ದೇನೆ. ಮುಂದಿನ ಸಿಇಒ ಮತ್ತು ಎಂ.ಡಿ.ಯಾಗಿ ಮಹಾಬಲೇಶ್ವರ ರಾವ್ ಎಂ.ಎಸ್. ಅವರಿಗೆ ಅಧಿಕಾರವನ್ನು ಹಸ್ತಾಂತರಿಸಲು ಸಂತೋಷಪಡುತ್ತೇನೆ. ಅವರ ಅವಧಿಯಲ್ಲಿ ಬ್ಯಾಂಕ್ ಇನ್ನಷ್ಟು ಸಾಧನೆಯನ್ನು ಮಾಡಿ ಉನ್ನತ ಮಟ್ಟಕ್ಕೆ ತಲುಪುತ್ತದೆ ಎಂಬ ವಿಶ್ವಾಸ ಹೊಂದಿರುವುದಾಗಿ ಜಯರಾಮ ಭಟ್ ತಿಳಿಸಿದ್ದಾರೆ.

ಜಯರಾಮ ಭಟ್ ಬ್ಯಾಂಕಿನ ಸಿಇಒ ಮತ್ತು ಎಂ.ಡಿ.ಯಾಗಿ ಅಧಿಕಾರ ಸ್ವೀಕರಿಸಿದ ಬಳಿಕದ ಎಂಟು ವರ್ಷಗಳಲ್ಲಿ ಬ್ಯಾಂಕಿನ ಆರ್ಥಿಕ ವಹಿವಾಟು 32,034 ಕೋಟಿ ರೂಪಾಯಿಯಿಂದ 93,843 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಠೇವಣಿ ಸಂಗ್ರಹ 21,044 ಕೋಟಿ ರೂ. ನಿಂದ 56,737 ಕೋಟಿ ರೂ.ಗೆ ಏರಿಕೆಯಾಗಿದೆ. ಸಾಲ ನೀಡಿಕೆಯ ಪ್ರಮಾಣ 10,990 ಕೋಟಿ ರೂ.ನಿಂದ 37,106 ಕೋಟಿ ರೂ.ಗೆ ಏರಿಕೆಯಾಗಿದೆ..

ಚಾಲ್ತಿ ಖಾತೆ ಹಾಗೂ ಉಳಿತಾಯ ಖಾತೆಗಳ ಸಂಖ್ಯೆ ಶೇ.18.80 ರಿಂದ ಶೇ.29.03ಗೆ ಏರಿಕೆಯಾಗಿದ್ದು, 2015-16ರಲ್ಲಿ ಬ್ಯಾಂಕ್ 451 ಕೋಟಿ ರೂ. ಲಾಭ ಗಳಿಕೆಯೊಂದಿಗೆ ಗರಿಷ್ಠ ಮಟ್ಟವನ್ನು ಸಾಧಿಸಿದೆ. ಇವರ ಅವಧಿಯಲ್ಲಿ ಆರಂಭಗೊಂಡ 316 ಶಾಖೆಗಳು ಹೆಚ್ಚುವರಿಯಾಗಿ  ಮಾರ್ಚ್ ಅಂತ್ಯದ ವೇಳೆಗೆ 765ಕ್ಕೆ ತಲುಪಿವೆ. ಎಟಿಎಂ ಸಂಖ್ಯೆ 177ರಿಂದ 1,380ಕ್ಕೆ ಏರಿಕೆಯಾಗಿದೆ. 110 ಇ-ಲಾಭಿಗಳು ಸ್ಥಾಪನೆಯಾಗಿದೆ. ಬ್ಯಾಂಕಿನ ಒಟ್ಟು ಸೊತ್ತಿನ ಮೌಲ್ಯ 1,567 ಕೋಟಿ ರೂ. ಗಳಿಂದ 4,769 ಕೋಟಿ ರೂ. ಗೆ ಏರಿಕೆಯಾಗಿದೆ. ಬ್ಯಾಂಕ್ ಈ ಅವಧಿಯಲ್ಲಿ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಪಾತ್ರವಾಗಿದ್ದು, ಜಯರಾಮ್ ಭಟ್ ಎಂ.ಡಿ.ಯಾಗಿ ತಮ್ಮ ಅವಧಿ ಪೂರ್ಣಗೊಳ್ಳುವ 15 ತಿಂಗಳು ಮುಂಚಿತವಾಗಿ ಹುದ್ದೆಯಿಂದ ತೆರಳಿದ್ದಾರೆ.

ಅವರು ನಮಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಅವರ ಸಮರ್ಥ ನಾಯಕತ್ವದಲ್ಲಿ ಬ್ಯಾಂಕ್ 8 ಮಿಲಿಯಕ್ಕೂ ಅಧಿಕ ಗ್ರಾಹಕರನ್ನು ಹೊಂದು ವಂತಾಗಿದೆ. ಜೊತೆಗೆ ಬ್ಯಾಂಕಿನ ಪಾಲುದಾರರಿಗೆ ಸೇವೆ ಸಲ್ಲಿಸುವ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಿದೆ ಎಂದು ನೂತನ ಎಂ.ಡಿ ಹಾಗೂ ಸಿಇಒ ಮಹಾಬಲೇಶ್ವರ ತಿಳಿಸಿದ್ದಾರೆ.

ನೂತನ ಸಿಇಒ, ಎಂ.ಡಿ ಮಹಾಬಲೇಶ್ವರ ಎಂ.ಎಸ್.

32 ವರ್ಷಗಳಿಂದ ಕರ್ಣಾಟಕ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರುವ ಮಹಾಬಲೇಶ್ವರ ಎಂ.ಎಸ್. ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಯುಎಸ್‌ಎಯ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿದ್ದಾರೆ. ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪದವಿ ಗಳಿಸಿದ್ದಾರೆ

ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಾಬಲೇಶ್ವರ ಎಂ.ಎಸ್. 1984ರಲ್ಲಿ ಕರ್ಣಾಟಕ ಬ್ಯಾಂಕಿನ ಕೃಷಿ ಕ್ಷೇತ್ರ ಅಧಿಕಾರಿಯಾಗಿ ಕೆಲಸಕ್ಕೆ ನೇಮಕಗೊಂಡು ವಿವಿಧ ಕಡೆಗಳಲ್ಲಿ ಬ್ಯಾಂಕಿನ ವಿವಿಧ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುತ್ತಾ ಪ್ರಧಾನ ವ್ಯವಸ್ಥಾಪಕರಾಗಿ, ಸಹಾಯಕ ಮಹಾ ಪ್ರಬಂಧಕರಾಗಿ, ಮಹಾಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.

2013ರಲ್ಲಿ ಬ್ಯಾಂಕಿನ ಪ್ರಧಾನ ಮಹಾ ಪ್ರಬಂಧಕರಾಗಿ ನೇಮಕಗೊಂಡಿದ್ದು, ಬ್ಯಾಂಕಿನ ಎಂ.ಡಿ. ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಪ್ರಿಲ್ 15ರಂದು ಅಧಿಕಾರ ಸ್ವೀಕರಿಸುವುದಾಗಿ ಮಹಾಬಲೇಶ್ವರ ಎಂ.ಎಸ್. ತಿಳಿಸಿದರು.

ಈ ಸಂದರ್ಭ ಬ್ಯಾಂಕಿನ ಮಹಾಪ್ರಬಂಧಕ ರಘುರಾಮ್, ಮೀರಾ ಅರ್ಹಾನ್ನಾ, ರಾಘವೇಂದ್ರ ಭಟ್, ಬಾಲಚಂದ್ರ, ಸುಭಾಸ್ ಚಂದ್ರ ಪುರಾಣಿಕ್, ಮುರಳೀ ಕೃಷ್ಣ ರಾವ್ ಹಾಗೂ ಪ್ರಧಾನ ವ್ಯವಸ್ಥಾಪಕ ಶ್ರೀನಿವಾಸ ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X