Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2,240 ಕೋ.ರೂ.ವಂಚನೆ ಪ್ರಕರಣ : ನಾಲ್ವರ...

2,240 ಕೋ.ರೂ.ವಂಚನೆ ಪ್ರಕರಣ : ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ12 April 2017 11:43 PM IST
share

ಹೊಸದಿಲ್ಲಿ, ಎ.12: ಬೇನಾಮಿ ಸಂಸ್ಥೆಗಳ ಹೆಸರಿನಲ್ಲಿ ಬ್ಯಾಂಕ್‌ಗಳಿಗೆ ಒಟ್ಟು 2,240 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸೂರ್ಯ ವಿನಾಯಕ್ ಇಂಡಸ್ಟ್ರೀಸ್ ನ ನಾಲ್ವರು ನಿರ್ದೇಶಕರನ್ನು ಸಿಬಿಐ ಬಂಧಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಂಜಯ್ ಜೈನ್, ರಾಜೀವ್ ಜೈನ್, ರೋಹಿತ್ ಚೌಧರಿ ಮತ್ತು ಸಂಜೀವ್ ಅಗರ್‌ವಾಲ್ ಎಂಬವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಬ್ಯಾಂಕ್‌ನಿಂದ ಹಣ ಪಡೆಯುವ ಸಲುವಾಗಿ ಈ ನಾಲ್ವರು ಆರೋಪಿಗಳು ಸುಮಾರು 100ಕ್ಕೂ ಹೆಚ್ಚು ಬೇನಾಮಿ ಸಂಸ್ಥೆಗಳನ್ನು ಬಳಸಿಕೊಂಡಿದ್ದು, ಒಟ್ಟು 2,240 ಕೋಟಿ ರೂ. ಯನ್ನು ಬ್ಯಾಂಕಿನಿಂದ ಪಡೆದಿದ್ದರು ಎಂದು ಬ್ಯಾಂಕ್ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಇವರು ವಿದೇಶದಲ್ಲಿ ಸ್ಥಾಪಿಸಿರುವ ಆರು ಸಂಸ್ಥೆಗಳಿಗೆ ದುಡಿಯುವ ಬಂಡವಾಳ (ವರ್ಕಿಂಗ್ ಕ್ಯಾಪಿಟಲ್) ರೂಪದಲ್ಲಿ 300 ಕೋಟಿ ರೂ.ಗೂ ಹೆಚ್ಚು ಹಣವನ್ನು ವರ್ಗಾಯಿಸಿದ್ದರು ಎಂದು ದೂರಲಾಗಿದೆ. ಈ ಸಂಸ್ಥೆಗಳು ಯಾವುದೇ ವ್ಯವಹಾರ ನಡೆಸುತ್ತಿಲ್ಲ ಎಂದು ಸಿಬಿಐ ತಿಳಿಸಿದೆ. ...................................

ಆರೆಸ್ಸೆಸ್ ಮುಖಂಡನ ವಿರುದ್ಧ ತೆರಿಗೆ ಇಲಾಖೆ ತನಿಖೆ
 ಹೊಸದಿಲ್ಲಿ, ಎ.12: ಅಧಿಕ ವೌಲ್ಯದ ನೋಟುಗಳನ್ನು ನಿಷೇಧ ಮಾಡಿದ ಬಳಿಕ 17 ಕೋಟಿ ರೂಪಾಯಿ ವೌಲ್ಯದ ಹಳೆ ನೋಟುಗಳನ್ನು ಠೇವಣಿ ಮಾಡಿದ ಆರೆಸ್ಸೆಸ್ ಮುಖಂಡರಿಗೆ ಸೇರಿದ ಜವಳಿ ಕಂಪೆನಿಯೊಂದರ ಬಗ್ಗೆ ಇದೀಗ ಆದಾಯ ತೆರಿಗೆ ಇಲಾಖೆ ತನಿಖೆ ಆರಂಭಿಸಿದೆ.
ಅಹುಜಾಸನ್ಸ್ ಶಾಲ್‌ವಾಲೆ ಪ್ರೈವೆಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಕುಲಭೂಷಣ್ ಅಹುಜಾ ಅವರು ಆರೆಸ್ಸೆಸ್‌ನ ದಿಲ್ಲಿ ಪ್ರಾಂತ ಸಂಘ ಚಾಲಕ ಅಂದರೆ ದಿಲ್ಲಿ ರಾಜ್ಯದ ಮುಖ್ಯಸ್ಥ. ಕಂಪೆನಿ ದಾಖಲೆಗಳ ಪ್ರಕಾರ, ಕಂಪೆನಿಗೆ ಇತರ ಮೂವರು ನಿರ್ದೇಶಕರಿದ್ದಾರೆ. ಅಹುಜಾ ಅವರ ಮಕ್ಕಳಾದ ಭುವನ್ ಹಾಗೂ ಕರಣ್ ಮತ್ತು ಸೊಸೆ ನಿಧಿ.
ಈ ಕಂಪೆನಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ 6 ಕೋಟಿ ರೂಪಾಯಿಗಳನ್ನು ಠೇವಣಿ ಮಾಡಿತ್ತು ಎನ್ನಲಾಗಿದೆ. ಪಾಶ್ಮಿನಾ ಶಾಲು ಉತ್ಪಾದನಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಹುಜಾಸನ್ಸ್ ಶಾಲ್‌ವಾಲೆ, ಕರೋಲ್‌ಬಾಗ್ ಹಾಗೂ ಖಾನ್‌ಮಾರ್ಕೆಟ್‌ನಲ್ಲಿ ಷೋರೂಂ ಹೊಂದಿದೆ. ಬಾಲ್ಯದಿಂದಲೇ ಅಹುಜಾ ಆರೆಸ್ಸೆಸ್ ಕಾರ್ಯಕರ್ತ.
ಆದರೆ ಐಟಿ ದಾಳಿ ಅಥವಾ ತನಿಖೆ ಬಗ್ಗೆ ಪ್ರತಿಕ್ರಿಯಿಸಲು ಅಹುಜಾ ನಿರಾಕರಿಸಿದ್ದಾರೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 132 ಅನ್ವಯ ಅಹುಜಾ ಅವರ ಷೋರೂಂಗಳ ಮೇಲೆ ಫೆಬ್ರವರಿ 22ರಂದು ದಾಳಿ ನಡೆಸಿ ವ್ಯಾಪಕ ಶೋಧ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ. ಕಂಪೆನಿ ನಕಲಿ ಬಿಲ್ ಸೃಷ್ಟಿಸಿ ಹಳೆ ನೋಟುಗಳನ್ನು ಸಮರ್ಥಿಸಿಕೊಂಡಿರುವುದಕ್ಕೆ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ. ನೋಟು ನಿಷೇಧದ ಬಳಿಕ ಕಂಪೆನಿ ಸುಮಾರು 17 ಕೋಟಿ ರೂಪಾಯಿ ವೌಲ್ಯದ ಹಳೆ ನೋಟುಗಳನ್ನು ಠೇವಣಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X