Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. "ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್...

"ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನಿಂದ ಜನೋಪಯೋಗಿ ಪ್ರಾಜೆಕ್ಟ್"

ವಾರ್ತಾಭಾರತಿವಾರ್ತಾಭಾರತಿ13 April 2017 4:10 PM IST
share
ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನಿಂದ ಜನೋಪಯೋಗಿ ಪ್ರಾಜೆಕ್ಟ್

ಬೆಳ್ತಂಗಡಿ, ಎ.13: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯದ ಮೂಲಕ ಜನೋಪಯೋಗಿ ಯಂತ್ರಗಳನ್ನು ಆವಿಷ್ಕರಿಸಿದ್ದಾರೆ. ಅವು ದಕ್ಷಿಣ ಕನ್ನಡ ಭಾಗದ ಅಡಿಕೆ, ತೆಂಗು ಹಾಗೂ ರಬ್ಬರ್ ಕೃಷಿಗೆ ಪೂರಕವಾಗಿದ್ದು, ಕೃಷಿ ಕಾರ್ಮಿಕರ ಕೊರತೆಯಿಂದ ಬಳಲುತ್ತಿರುವ ಈ ಭಾಗದ ಕೃಷಿಕರಿಗೆ ವರದಾನವಾಗುವ ಭರವಸೆ ಮೂಡಿಸಿವೆ ಎಂದು ಕಾಲೇಜಿನ ಪ್ರಾಂಶುಪಾಲ ಕೆ. ವಿ. ಪ್ರಸಾದ್ ಹೇಳಿದ್ದಾರೆ.

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿದ್ಯಾರ್ಥಿಗಳ ಸಾಧನೆಯನ್ನು ವಿವರಿಸಿದ ಅವರು, 2016-17 ರ ಸಾಲಿನಲ್ಲಿ ಡ್ರೋನ್ ಮೂಲಕ ಅಡಿಕೆ ಗೊನೆಯನ್ನು ಕತ್ತರಿಸಿ ಕೊಯ್ಲು ಮಾಡುವ ಹಾಗೂ ಮರಗಳಿಗೆ ಮದ್ದು ಸಿಂಪಡಿಸುವ ಯಂತ್ರ, ಅಡಿಕೆ ಗೊನೆಯಿಂದ ಕಾಯಿಗಳನ್ನು ಬೇರ್ಪಡಿಸುವ ಯಂತ್ರ, ಅಟೋಮ್ಯಾಟಿಕ್ ತೆಂಗಿನಕಾಯಿ ಸಿಪ್ಪೆ ಸುಲಿಯುವ ಹಾಗೂ ಕಾಯಿ ಒಡೆಯುವ ಯಂತ್ರ, ಎಳನೀರು ಕೊಚ್ಚುವ ಯಂತ್ರ, ತೋಟದ ಬದಿಗೆ ನೆಟ್ಟ ಗಿಡಗಳನ್ನು ಸುಂದರವಾಗಿ ಕತ್ತರಿಸುವ ಎಡ್ಜ್ ಕಟ್ಟರ್, ರಬ್ಬರ್ ಲ್ಯಾಟೆಕ್ಸ್ ಮಿಶ್ರಣ ಯಂತ್ರ ಹೀಗೆ ಕೃಷಿ ಉಪಯೋಗಿ ಯಂತ್ರಗಳನ್ನು ತಯಾರಿಸಿ ಕಾರ್ಮಿಕರ ಕೊರತೆ ನೀಗಿಸುವ ಪ್ರಯತ್ನ ಮಾಡಿದ್ದಾರೆ.

ಇದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯರ ಅಗತ್ಯತೆ ಹಾಗೂ ತಾಂತ್ರಿಕವಾಗಿ ಅವುಗಳನ್ನು ಸರಿಗಟ್ಟುವ ಸಾಧ್ಯತೆಗಳನ್ನು ಅಧ್ಯಯನ ಮಾಡಿ ಮತ್ತೊಂದಿಷ್ಟು ಯಂತ್ರಗಳನ್ನು ತಯಾರಿಸಿ ಸೈ ಎನಿಸಿಕೊಂಡಿದ್ದಾರೆ. ಇಲ್ಲಿನ ದೇವಳದ ಅನ್ನ ಛತ್ರಗಳಲ್ಲಿ, ಸಭೆ-ಸಮಾರಂಭಗಳಲ್ಲಿ ಅನ್ನಸಂತರ್ಪಣೆ ಸಮಯದಲ್ಲಿ ಬಾಳೆ ಎಲೆಯನ್ನು ಬಳಸುವುದು ಸಾಮಾನ್ಯ. ಆದರೆ ಈ ಎಲೆಗಳನ್ನು ತೆಗೆದು ಮತ್ತೊಂದಿಷ್ಟು ಜನರಿಗೆ ಊಟಕ್ಕೆ ಅಣಿಮಾಡುವ ಕೆಲಸ ಬಹಳ ಶ್ರಮವನ್ನು ಬೇಡುತ್ತದೆ. ಅದರಲ್ಲೂ ಜನಜಂಗುಳಿ ಜಾಸ್ತಿ ಇದ್ದ ವೇಳೆ ಸ್ವಚ್ಛತೆಗೆ ಸಾಕಷ್ಟು ಶ್ರಮ ಪಡಬೇಕಾಗುತ್ತದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಇಲ್ಲಿನ ವಿದ್ಯಾರ್ಥಿಗಳು ಬಾಳೆಎಲೆ ಎತ್ತುವ ಹಾಗೂ ಆ ಆವರಣವನ್ನು ಶುಚಿಗೊಳಿಸುವ ಯಂತ್ರವನ್ನು ನಿರ್ಮಿಸಿದ್ದಾರೆ. ಈ ಯಂತ್ರ ಸಾವಿರಾರು ಜನ ಉಂಡರೂ ಕ್ಷಣಮಾತ್ರದಲ್ಲಿ ಎಲೆ ಎತ್ತಿ, ಊಟದ ಪಂಕ್ತಿಯನ್ನು ಶುಚಿಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದರು.

ಇದರೊಂದಿಗೆ ಗಾರೆ ಕೆಲಸಕ್ಕೆ ಸಹಾಯವಾಗುವಂತೆ ಗಾರೆ ಮಾಡುವ ಯಂತ್ರವನ್ನೂ ಆವಿಷ್ಕರಿಸಿದ್ದಾರೆ. ಜೊತೆಗೆ ಪವರ್ ವ್ಯಾಕ್ಯುಂ ಕ್ಲೀನರ್ ತಯಾರಿಸಿ ರಸ್ತೆ ಬದಿಯಲ್ಲಿ ಶೇಖರಗೊಳ್ಳುವ ಕಸವನ್ನೂ ಸ್ವಚ್ಛಗೊಳಿಸಿ ಸ್ವಚ್ಛ ಭಾರತ್‌ಗೆ ಸಾಥ್ ನೀಡಿದ್ದಾರೆ. ಇದರೊಂದಿಗೆ ಮೊಬೈಲ್ ಮೂಲಕ ನಿಯಂತ್ರಿಸಲು ಸಾಧ್ಯವಾಗುವ ಜಲ ಶುದ್ಧೀಕರಣ ಘಟಕದ ಮಾದರಿಯನ್ನೂ ತಯಾರಿಸಿದ್ದಾರೆ. ಮನೆ ಬಾಗಿಲಿಗೆ ಹೊಟೇಲ್‌ನಿಂದ ಪಾರ್ಸೆಲ್ ತಲುಪಿಸುವ ಆನ್‌ಲೈನ್ ರೆಸ್ಟ್ರೋ ವ್ಯವಸ್ಥೆ, ದೊಡ್ಡ ಪ್ರಮಾಣದಲ್ಲಿ ಚಪಾತಿ ತಯಾರಿಸುವ ಯಂತ್ರ ಮೊದಲಾದ ಆವಿಷ್ಕಾರಗಳೂ ನಡೆದಿವೆ. ಈ ತಾಂತ್ರಿಕ ಆವಿಷ್ಕಾರಗಳು ಸಮಾಜಮುಖಿಯಾಗಿದ್ದು ಜನರ ಅಗತ್ಯಗಳನ್ನು ಪೂರೈಸುವಂತೆ ನಿರ್ಮಾಣವಾಗಿವೆ. ಅತ್ಯಂತ ಕಡಿಮೆ ಖರ್ಚಿನಲ್ಲಿ ನಿರ್ಮಾಣಗೊಳ್ಳುವ ಈ ಯಂತ್ರಗಳು ಕೆಲಸಗಾರರ ಅಲಭ್ಯವಿರುವ ಈ ದಿನಗಳಲ್ಲಿ ವರದಾನವಾಗುವ ಭರವಸೆ ಮೂಡಿಸಿರುವುದು ಮಾತ್ರವಲ್ಲದೆ ಹಲವು ರಾಜ್ಯಮಟ್ಟದ ಪ್ರದರ್ಶನಗಳಲ್ಲಿ ಪಾಲ್ಗೊಂಡು ಬಹುಮಾನಗಳನ್ನೂ ಪಡೆದುಕೊಂಡಿವೆ ಎಂದರು.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್, ಡಾ.ಬಿ.ಯಶೋವರ್ಮ, ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್‌ರವರ ಸಂಪೂರ್ಣ ಸಹಕಾರವೇ ಕಾರಣ ಎಂದರು.

ಸುದ್ದಿಗೋಷ್ಠಿಯಲ್ಲಿ ವಿವಿಧ ವಿಭಾಗದ ಮುಖ್ಯಸ್ಥರಾದ ದಿನೇಶ್, ಶ್ರೇಯಾಂಕ್ ಜೈನ್, ಅಪರ್ಣ ರಾಣ್ಯ, ಅಮರೇಶ್ ಹೆಬ್ಬಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X