Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಧವ ಪ್ರಕರಣದ ಆರೋಪ ಪಟ್ಟಿ, ತೀರ್ಪಿನ...

ಜಾಧವ ಪ್ರಕರಣದ ಆರೋಪ ಪಟ್ಟಿ, ತೀರ್ಪಿನ ಪ್ರತಿಗಾಗಿ ಭಾರತದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 April 2017 2:08 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಾಧವ ಪ್ರಕರಣದ ಆರೋಪ ಪಟ್ಟಿ, ತೀರ್ಪಿನ ಪ್ರತಿಗಾಗಿ ಭಾರತದ ಆಗ್ರಹ

 ಇಸ್ಲಾಮಾಬಾದ್,ಎ.14: ತನ್ನ ಪ್ರಜೆ ಕುಲಭೂಷಣ ಜಾಧವ್ ಅವರಿಗೆ ಮರಣ ದಂಡನೆಯನ್ನು ವಿಧಿಸಲಾಗಿರುವ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ಆರೋಪ ಪಟ್ಟಿ ಮತ್ತು ತೀರ್ಪಿನ ಪ್ರಮಾಣೀಕೃತ ಪ್ರತಿಗಳನ್ನು ತನಗೆ ನೀಡುವಂತೆ ಭಾರತವು ಶುಕ್ರವಾರ ಪಾಕಿಸ್ತಾನವನ್ನು ಆಗ್ರಹಿಸಿದೆ. ಅಲ್ಲದೆ,ಜಾಧವ್‌ಗೆ ನ್ಯಾಯವಾದಿಗಳ ನೆರವಿಗೆ ಅವಕಾಶ ಒದಗಿಸುವಂತೆಯೂ ಕೋರಿದೆ. ಪಾಕಿಸ್ತಾನದ ಸೇನಾ ನ್ಯಾಯಾಲಯವು ಗೂಢಚರ್ಯೆ ಆರೋಪದಲ್ಲಿ ಜಾಧವ್‌ಗೆ ಮರಣದಂಡನೆಯನ್ನು ವಿಧಿಸಿದೆ.

ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರಿ ಗೌತಮ್ ಬಂಬವಲೆ ಅವರು ಪಾಕ್ ವಿದೇಶಾಂಗ್ ಕಾರ್ಯದರ್ಶಿ ತೆಹ್ಮಿನಾ ಜಂಜುವಾ ಅವರನ್ನು ಭೇಟಿಯಾಗಿ ಈ ಆಗ್ರಹವನ್ನು ಮಂಡಿಸಿದರು.

 ಜಾಧವ್‌ಗೆ ನ್ಯಾಯವಾದಿಗಳ ನೆರವಿಗೆ ಅವಕಾಶ ಒದಗಿಸುವಂತೆ ನಮ್ಮ ಕೋರಿಕೆ ಯನ್ನು ಪಾಕ್ ಕಳೆದೊಂದು ವರ್ಷದಲ್ಲಿ 13 ಬಾರಿ ನಿರಾಕರಿಸಿದೆ. ನಾವು ಮೇಲ್ಮನವಿ ಸಲ್ಲಿಸಲು ಸಾಧ್ಯವಾಗುವಂತಾಗಲು ಪಾಕ್ ವಿದೇಶಾಂಗ ಕಾರ್ಯದರ್ಶಿಯಲ್ಲಿ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದೇನೆ ಎಂದು ಬಂಬವಲೆ ಸುದ್ದಿಸಂಸ್ಥೆಗೆ ತಿಳಿಸಿದರು.

ರಾಜತಾಂತ್ರಿಕ ಪರ್ಯಾಯಗಳ ಹೊರತಾಗಿ ತೀರ್ಪಿನ ವಿರುದ್ಧ ಜಾಧವ್ ಕುಟುಂಬದಿಂದ ಮೇಲ್ಮನವಿ ಸಲ್ಲಿಕೆ ಸೇರಿದಂತೆ ಪಾಕಿಸ್ತಾನದ ಕಾನೂನು ವ್ಯವಸ್ಥೆಯಡಿ ಲಭ್ಯವಿರುವ ಕಾನೂನು ಪರಿಹಾರಗಳ ಬಗ್ಗೆಯೂ ಭಾರತವು ಪರಿಶೀಲಿಸುತ್ತಿದೆ ಎಂದು ದಿಲ್ಲಿಯಲ್ಲಿನ ಮೂಲಗಳು ತಿಳಿಸಿವೆ.

ಗುರುವಾರ ರಾವಲ್ಪಿಂಡಿಯ ಸೇನೆಯ ಕೇಂದ್ರಕಚೇರಿಯಲ್ಲಿ ಸೇನಾ ಮುಖ್ಯಸ್ಥ ಜಕಮರ್ ಬಾಜ್ವಾ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಕಮಾಂಡರ್‌ಗಳ ಸಭೆಯು ಜಾಧವ್‌ಗೆ ವಿಧಿಸಲಾಗಿರುವ ಮರಣದಂಡನೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದಿರಲು ನಿರ್ಧರಿಸಿದೆ.

ವಕೀಲರಿಗೆ ಎಚ್ಚರಿಕೆ

ಮರಣದಂಡನೆಗೆ ಗುರಿಯಾಗಿರುವ ಜಾಧವ್‌ಗೆ ಕಾನೂನು ನೆರವು ಒದಗಿಸಲು ಮುಂದಾಗುವ ವಕೀಲರ ವಿರುದ್ಧ ತಾನು ಕ್ರಮವನ್ನು ಜರುಗಿಸುವುದಾಗಿ ಲಾಹೋರ್ ಉಚ್ಚ ನ್ಯಾಯಾಲಯದ ವಕೀಲರ ಸಂಘವು ಶುಕ್ರವಾರ ಎಚ್ಚರಿಕೆ ನೀಡಿದೆ.

ಭಾರತೀಯ ಗೂಢಚಾರಿ ಕುಲಭೂಷಣ ಜಾಧವ್‌ಗೆ ಸೇವೆಯನ್ನು ಒದಗಿಸುವ ವಕೀಲರ ಸದಸ್ಯತ್ವವನ್ನು ರದ್ದುಗೊಳಿಸಲು ಸಂಘವು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಸಂಘದ ಮಹಾ ಕಾರ್ಯದರ್ಶಿ ಆಮೆರ್ ಸಯೀದ್ ರಾಣ್ ಅವರು ತಿಳಿಸಿದರು.

ಜಾಧವ್ ಪ್ರಕರಣದಲ್ಲಿ ಯಾವುದೇ ವಿದೇಶಿ ಒತ್ತಡಕ್ಕೆ ಮಣಿಯದಂತೆ ಸಂಘವು ಸರಕಾರವನ್ನು ಕೇಳಿಕೊಂಡಿದೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X