Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ಎಲ್ಲಾ ಮೀನುಗಾರಿಕಾ ದೋಣಿಗಳ...

ಜಿಲ್ಲೆಯ ಎಲ್ಲಾ ಮೀನುಗಾರಿಕಾ ದೋಣಿಗಳ ಸಕ್ರಮಕ್ಕೆ ಕ್ರಮ: ಸಚಿವ ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ14 April 2017 8:19 PM IST
share
ಜಿಲ್ಲೆಯ ಎಲ್ಲಾ ಮೀನುಗಾರಿಕಾ ದೋಣಿಗಳ ಸಕ್ರಮಕ್ಕೆ ಕ್ರಮ: ಸಚಿವ ಪ್ರಮೋದ್

ಉಡುಪಿ, ಎ.14: ಜಿಲ್ಲೆಯಲ್ಲಿರುವ ಎಲ್ಲಾ ಮೀನುಗಾರಿಕಾ ದೋಣಿಗಳನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದು ಮುಗಿದ ತಕ್ಷಣ ಎಲ್ಲವನ್ನು ಕಟ್ಟುನಿಟ್ಟಾಗಿ ಕಾನೂನುಬದ್ಧಗೊಳಿಸಲಾಗುವುದು ಎಂದು ರಾಜ್ಯ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕೆ ಉಪನಿರ್ದೇಶಕರ ನೂತನ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮೀನುಗಾರಿಕಾ ದೋಣಿಗಾಗಿ ಅರ್ಜಿ ಹಾಕಿದ ಅರ್ಹರಿಗೆ ಸಾಧ್ಯತಾ ಪತ್ರಗಳನ್ನು ನೀಡಲಾಗುತ್ತಿದೆ. ಮೀನುಗಾರರ ಪಾಸ್ ಪುಸ್ತಕ, ಪರವಾನಿಗೆ ಪತ್ರ ಸೇರಿದಂತೆ ಮೀನುಗಾರಿಕಾ ದೋಣಿಯ ಎಲ್ಲಾ ದಾಖಲೆಗಳನ್ನು ಸಕ್ರಮ ಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದೆ. ದೇಶದಲ್ಲಿ ಗುಜರಾತ್‌ನ ವೆರಾವಲ್ ಬಿಟ್ಟರೆ ಅತೀ ಹೆಚ್ಚಿನ ಮೀನುಗಾರಿಕಾ ದೋಣಿಗಳಿರುವುದು ಮಲ್ಪೆ ಬಂದರಿನಲ್ಲಿ. ಇಲ್ಲಿನ ಎಲ್ಲಾ ಮೀನುಗಾರಿಕಾ ದೋಣಿಗಳನ್ನು ಸಕ್ರಮಗೊಳಿಸಲಾಗುತ್ತಿದ್ದು, ಇದರಿಂದ ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ಕ್ರಮಬದ್ಧವಾಗಿ ದೊರಕಲಿದೆ. ಅಲ್ಲದೇ ಮುಂದೆ ಮೀನುಗಾರಿಕೆ ವೇಳೆ ಸಮುದ್ರದಲ್ಲಿ ಕೋಸ್ಟ್ ಗಾರ್ಡ್‌ನ ತಪಾಸಣೆಯ ವೇಳೆ ಎದುರಿಸಬಹುದಾದ ಕಾನೂನು ತೊಡಕುಗಳು ನಿವಾರಣೆಯಾಗಲಿದೆ ಎಂದರು.

ಮೀನುಗಾರರಿಗೆ ಈ ವರ್ಷದ ಜನವರಿಯಿಂದ ಮಾರ್ಚ್ ತಿಂಗಳವರೆಗಿನ ಬಾಕಿ ಇರುವ 38 ಕೋಟಿ ರೂ. ಡೀಸೆಲ್ ಸಬ್ಸಿಡಿಯನ್ನು ಇದೇ ತಿಂಗಳು ಎಲ್ಲರ ಖಾತೆಗಳಿಗೆ ಜಮೆ ಮಾಡಲಾಗುವುದು. ಎಪ್ರಿಲ್ ತಿಂಗಳಿನಿಂದ ಹೊಸ ವರ್ಷದ ಡೀಸೆಲ್ ಸಬ್ಸಿಡಿ ಕಾಲಕಾಲಕ್ಕೆ ಸರಿಯಾಗಿ ಆಯಾ ಮೀನುಗಾರರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲಿದೆ. ಈ ಬಗ್ಗೆ ಮೀನುಗಾರರಿಗೆ ಯಾವುದೇ ಆತಂಕ ಬೇಡ. ಏಕೆಂದರೆ ಈ ಬಾರಿಯ ಬಜೆಟ್‌ನಲ್ಲಿ ಡೀಸೆಲ್ ಸಬ್ಸಿಡಿಗಾಗಿ 157 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.

ಮಲ್ಪೆ ಸಮೀಪದ ಪಡುಕೆರೆಗೆ ಇತ್ತೀಚೆಗೆ ಸೇತುವೆ ನಿರ್ಮಿಸಲಾಗಿದ್ದು, ಇದೀಗ ಅಲ್ಲಿ ನಬಾರ್ಡ್ ನೆರವಿನಿಂದ 20 ಕೋಟಿ ರೂ. ವೆಚ್ಚದಲ್ಲಿ ಜಟ್ಟಿ ಹಾಗೂ ತಡೆಗೋಡೆ ನಿರ್ಮಾಣಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ಪ್ರಮೋದ್ ನುಡಿದರು.

ಇದೇ ಸಂದರ್ದಲ್ಲಿ ವಿವಿಧ ಫಲಾನುಭವಿಗಳಿಗೆ ಸಂಕಷ್ಟ ಪರಿಹಾರ ನಿಧಿಯ ಚೆಕ್ ಮತ್ತು ಸಾಧ್ಯತಾ ಪತ್ರಗಳನ್ನು ಸಚಿವರು ವಿತರಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಲ್ಪೆಮೀನುಗಾರರ ಸಂಘದ ಅಧ್ಯಕ್ಷ ಹಿರಿಯಣ್ಣ ಟಿ. ಕಿದಿಯೂರು, ಸತೀಶ್ ಅಮಿನ್ ಪಡುಕೆರೆ, ಮಂಗಳೂರು ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಹೇಶ್ ಕುಮಾರ್, ಉಡುಪಿ ಮೀನುಗಾರಿಕ ಇಲಾಖೆಯ ಜಂಟಿ ನಿರ್ದೇಶಕ ಗಣಪತಿ ಭಟ್ ಉಪಸ್ಥಿತರಿದ್ದರು.

ಉಡುಪಿ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಪಿ.ಪಾರ್ಶ್ವನಾಥ್ ಸ್ವಾಗತಿಸಿ, ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X