Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆನಡದಲ್ಲಿ ಪ್ರಯಾಣಿಕರನ್ನು...

ಕೆನಡದಲ್ಲಿ ಪ್ರಯಾಣಿಕರನ್ನು ಹೊರದಬ್ಬುವುದಕ್ಕೆ ನಿಷೇಧ

ವಾರ್ತಾಭಾರತಿವಾರ್ತಾಭಾರತಿ14 April 2017 8:41 PM IST
share
ಕೆನಡದಲ್ಲಿ ಪ್ರಯಾಣಿಕರನ್ನು ಹೊರದಬ್ಬುವುದಕ್ಕೆ ನಿಷೇಧ

ಒಟ್ಟಾವ (ಕೆನಡ), ಎ. 14: ನಿಗದಿಗಿಂತ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದ ಪ್ರಕರಣಗಳಲ್ಲಿ, ಯಾವುದೇ ವಿಮಾನಯಾನ ಸಂಸ್ಥೆಗಳು ಯಾವುದೇ ಪ್ರಯಾಣಿಕರನ್ನು ಹೊರಹಾಕುವುದನ್ನು ಕೆನಡ ಸರಕಾರ ನಿಷೇಧಿಸಿದೆ.

ದೇಶದೊಳಕ್ಕೆ ಬರುವ ಮತ್ತು ಹೋಗುವ ವಿಮಾನಯಾನ ಸಂಸ್ಥೆಗಳ ಮುಖ್ಯಸ್ಥರಿಗೆ ಗುರುವಾರ ಪತ್ರವೊಂದನ್ನು ಬರೆದಿರುವ ಕೆನಡ ಸಾರಿಗೆ ಸಚಿವ ಮಾರ್ಕ್ ಗಾರ್ನೊ, ಅಮೆರಿಕದಲ್ಲಿ ಯುನೈಟೆಡ್ ಏರ್‌ಲೈನ್ಸ್ ವಿಮಾನವೊಂದರಲ್ಲಿ ನಡೆದಿರುವ ಘಟನೆ ಕೆನಡದಲ್ಲಿ ನಡೆಯಬಾರದು ಎಂದು ಹೇಳಿದ್ದಾರೆ ಎಂದು ಕ್ಸಿನುವಾ ವಾರ್ತಾ ಸಂಸ್ಥೆ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ ಅಮೆರಿಕದ ಶಿಕಾಗೊ ನಗರದ ವಿಮಾನ ನಿಲ್ದಾಣವೊಂದರಲ್ಲಿ ಪ್ರಯಾಣಿಕರೊಬ್ಬರನ್ನು ವಿಮಾನದಿಂದ ಭದ್ರತಾ ಸಿಬ್ಬಂದಿ ನೆಲದಲ್ಲೇ ದರದರನೆ ಎಳೆದುಕೊಂಡು ಹೋಗಿ ಹೊರಹಾಕಿದ್ದರು. ಈ ಘಟನೆಯಲ್ಲಿ ಪ್ರಯಾಣಿಕನಿಗೆ ಗಾಯಗಳಾಗಿದ್ದವು ಹಾಗೂ ವಿಶ್ವಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನಿಗದಿಗಿಂತ ಹೆಚ್ಚು ಪ್ರಯಾಣಿಕರಿಗೆ ಟಿಕೆಟ್‌ಗಳನ್ನು ನೀಡಲಾಗಿದ್ದು, ಸಿಬ್ಬಂದಿಗೆ ಸ್ಥಳಾವಕಾಶ ಮಾಡಿಕೊಡುವುದಕ್ಕಾಗಿ ಓರ್ವ ಪ್ರಯಾಣಿಕನನ್ನು ಹೊರಹಾಕುವುದು ಅನಿವಾರ್ಯವಾಗಿತ್ತು ಎಂದು ಯುನೈಟೆಡ್ ಏರ್‌ಲೈನ್ಸ್ ಹೇಳಿಕೊಂಡಿದೆ.

‘‘ಅಮೆರಿಕದಲ್ಲಿ ನಡೆದ ಘಟನೆಯಿಂದ ನಾನು ಮತ್ತು ಎಲ್ಲ ಕೆನಡಿಯನ್ನರು ಆಘಾತಗೊಂಡಿರುವಷ್ಟೇ ನೀವೂ ಆಘಾತಗೊಂಡಿರುತ್ತೀರಿ ಎನ್ನುವುದು ನನಗೆ ಗೊತ್ತಿದೆ. ಕೆನಡದಲ್ಲಿ ಇಂಥ ಘಟನೆಗಳು ಅಸ್ವೀಕಾರಾರ್ಹ ಎನ್ನುವುದನ್ನು ತಿಳಿಸಲು ನಾನು ನಿಮಗೆ ಈ ಪತ್ರ ಬರೆಯುತ್ತಿದ್ದೇನೆ’’ ಎಂದು ಪತ್ರದಲ್ಲಿ ಸಚಿವರು ಹೇಳಿದ್ದಾರೆ.

ಮೂಗು ಮುರಿತಕ್ಕೆ ಒಳಗಾದ ಸಂತ್ರಸ್ತ

ಶಿಕಾಗೊ ವಿಮಾನ ನಿಲ್ದಾಣದಲ್ಲಿ ಯುನೈಟೆಡ್ ಏರ್‌ಲೈನ್ಸ್ ವಿಮಾನವೊಂದರಿಂದ ಅಮಾನುಷವಾಗಿ ಹೊರದಬ್ಬಲ್ಪಟ್ಟ ವೈದ್ಯ ಡೇವಿಡ್ ಡಾವೊ ಮೂಗು ಮುರಿತ ಹಾಗೂ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ ಎಂದು ಅವರ ವಕೀಲ ಗುರುವಾರ ಹೇಳಿದ್ದಾರೆ.

‘‘ತುಂಬಾ ಸಮಯದಿಂದ ವಿಮಾನಯಾನ ಕಂಪೆನಿಗಳು, ಅದರಲ್ಲೂ ಮುಖ್ಯವಾಗಿ ಯುನೈಟೆಡ್ ಏರ್‌ಲೈನ್ಸ್ ನಮ್ಮನ್ನು ಕೆಟ್ಟದಾಗಿ ನಡೆಸಿಕೊಂಡು ಬಂದಿದೆ’’ ಎಂದು ಶಿಕಾಗೊದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಥಾಮಸ್ ಡೆಮೆಟ್ರಿಯೊ ಹೇಳಿದರು.

ಯುನೈಟೆಡ್ ಏರ್‌ಲೈನ್ಸ್ ಮತ್ತು ಶಿಕಾಗೊ ನಗರದ ವಿರುದ್ಧ ತಾವು ಮೊಕದ್ದಮೆ ಹೂಡುವ ಸಾಧ್ಯತೆಯಿಂದೆ ಎಂದರು.

69 ವರ್ಷದ ವಿಯೆಟ್ನಾಮಿ-ಅಮೆರಿಕನ್ ವೈದ್ಯ ಈಗ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ. ಅವರನ್ನು ಕೆಂಟಕಿಯ ಲೂಯಿಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುನೈಟೆಡ್ ಏರ್‌ಲೈನ್ಸ್ ವಿಮಾನದಿಂದ ಬರ್ಬರವಾಗಿ ನೆಲದಲ್ಲೇ ಎಳೆದೊಯ್ದು ಹೊರಹಾಕಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X