Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಹೋರಾಟಗಾರನೊಬ್ಬನ...

ಹೋರಾಟಗಾರನೊಬ್ಬನ ಜೋಳಿಗೆಯಿಂದ-‘ನನ್ನನುಭವದ ಸೂಫಿ’

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ14 April 2017 11:59 PM IST
share
ಹೋರಾಟಗಾರನೊಬ್ಬನ ಜೋಳಿಗೆಯಿಂದ-‘ನನ್ನನುಭವದ ಸೂಫಿ’

ಸಮಕಾಲೀನ ನವ ಮಾರ್ಕ್ಸ್‌ವಾದಿ ಚಿಂತಕರೂ, ಹೋರಾಟಗಾರರೂ ಆಗಿರುವ ನೂರ್ ಜುಲ್ಫಿಕರ್ ಬರೆದಿರುವ ಅಪರೂಪದ ಕೃತಿ ‘ನನ್ನನುಭವದ ಸೂಫಿ- ಮತ್ತು ಇತರ ಲೇಖನಗಳು’. ಈ ಕೃತಿಯಲ್ಲಿ ಒಟ್ಟು ಸುಮಾರು 20ಕ್ಕೂ ಅಧಿಕ ಲೇಖನಗಳಿವೆ. ಈ ಬರಹಗಳಿಗೆ ಒಂದು ರೀತಿಯಲ್ಲಿ ಆತ್ಮ ಕಥನದ ಗುಣವಿದೆ. ತನ್ನ ಬದುಕು, ಹೋರಾಟಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಅವರು ಸಮಾಜದ ಸದ್ಯದ ರಾಜಕೀಯ ಸಾಮಾಜಿಕ ವಿಷಯಗಳ ಕುರಿತಂತೆ ಚರ್ಚಿಸುತ್ತಾರೆ. ತನ್ನ ಹೋರಾಟಕ್ಕಾಗಿ ನೂರ್ ಅವರು ಮಾಡಿರುವ ತ್ಯಾಗ, ಬಲಿದಾನಗಳು ಸಣ್ಣದೇನೂ ಅಲ್ಲ. ನಕ್ಸಲ್ಪರಿ ಚಳವಳಿ ಹಾಗೂ ಚಿಂತನೆಯಿಂದ ಪ್ರಭಾವಿತಗೊಂಡು ಮಾಡುತ್ತಿರುವ ಉದ್ಯೋಗ, ವ್ಯಾಸಂಗ ತೊರೆದು ಸುಮಾರು 25 ವರ್ಷಗಳಿಂದ ಪೂರ್ಣಾವಧಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಾ, ಕುಟುಂಬ ಗೆಳೆಯ ರಿಂದ ದೂರವಿದ್ದೂ ಹತ್ತಿರವಾಗಿದ್ದವರು. ಬಳಿಕ ಸಂಘಟನೆಯ ಜೊತೆಗೆ ಭಿನ್ನಾಭಿಪ್ರಾಯ ಮೂಡಿ, ತಮ್ಮ ಹೋರಾಟದ ದಾರಿಯನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಂಡು, ನಾಡಿಗೆ ಕಾಲಿಟ್ಟವರು. ಈ ಸಂದರ್ಭದಲ್ಲಿ ಅವರು ಎದುರಿಸಿದ ಬೇರೆ ಬೇರೆ ಸವಾಲುಗಳನ್ನು ಈ ಕೃತಿಯಲ್ಲಿ ತೆರೆದಿಡುತ್ತಾರೆ. ‘ನನ್ನನುಭವದ ಸೂಫಿ’ ಈ ಕೃತಿಯಲ್ಲಿ ಪ್ರತ್ಯೇಕ ಲೇಖನವೇ ಆಗಿದ್ದರೂ, ಅವರ ಬದುಕು ಸೂಫಿ ಬದುಕಿನಂತೆಯೇ ಜಂಗಮವಾದುದು. ಪುರೋಹಿತ ಶಾಹಿ ವ್ಯವಸ್ಥೆ ಮತ್ತು ಪ್ರಭುತ್ವದ ವಿರುದ್ಧ ದಬ್ಬಾಳಿಕೆಯನ್ನು ಪ್ರಶ್ನಿಸುವುದು ಸೂಫಿಸಂನ ಮೂಲ ಗುಣವೇ ಹೌದು. ಆದುದರಿಂದ, ‘ನನ್ನನುಭವದ ಸೂಫಿ’ ತಲೆಬರಹ ಇಲ್ಲಿರುವ ಎಲ್ಲ ಲೇಖನಗಳ ಸಾರಸರ್ವಸ್ವವನ್ನು ತನ್ನೊಳಗೆ ಬಚ್ಚಿಟ್ಟುಕೊಂಡಿದೆ.

ಈ ಕೃತಿ ನಾವು ಕಂಡರಿಯದ ಹೊಸ ಜಗತ್ತೊಂದನ್ನು ತೆರೆದಿಡುತ್ತದೆ. ಪೊಲೀಸರ ಕ್ರೌರ್ಯ, ಪಾಪಿಗಳ ಸ್ನೇಹ, ಕಾಡಿನ ಸಂಗಾತಿಗಳ ನೆನಪು ಮತ್ತು ನೋವು, ಪರ್ಯಾಯ ಹೋರಾಟದ ಹುಡುಕಾಟ, ನಕ್ಸಲ್ ಮಹಿಳಾ ಕಿಡಿಗಳ ಸಂಘರ್ಷಗಾಥೆ ಇವೆಲ್ಲವುಗಳನ್ನು ಒಳಗೊಂಡ ಈ ಕೃತಿ, ಸದ್ಯದ ಸಾಮಾಜಿಕ ಮತ್ತು ರಾಜಕೀಯ ಸನ್ನಿವೇಶಗಳನ್ನು ಅರ್ಥ ಮಾಡಿಕೊಳ್ಳಲು ಬಹಳಷ್ಟು ಸಹಾಯ ಮಾಡುತ್ತದೆ.

ಲಂಕೇಶ್ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 280. ಮುಖಬೆಲೆ 200 ರೂಪಾಯಿ. ಆಸಕ್ತರು 080-26676427 ದೂರವಾಣಿಯನ್ನು ಸಂಪಕಿರ್ಸ ಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X