Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಘಾಟನಾ ಫಲಕದಲ್ಲಿ ಹೆಸರಿನ ಬಗ್ಗೆ...

ಉದ್ಘಾಟನಾ ಫಲಕದಲ್ಲಿ ಹೆಸರಿನ ಬಗ್ಗೆ ಸಚಿವನಿಂದ ರಾದ್ಧಾಂತದ ಬಳಿಕ ಪಂಜಾಬ್ ಸಿಎಂ ಮಾಡಿದ್ದೇನು ಗೊತ್ತೇ...?

ವಾರ್ತಾಭಾರತಿವಾರ್ತಾಭಾರತಿ15 April 2017 5:32 PM IST
share
ಉದ್ಘಾಟನಾ ಫಲಕದಲ್ಲಿ ಹೆಸರಿನ ಬಗ್ಗೆ ಸಚಿವನಿಂದ ರಾದ್ಧಾಂತದ ಬಳಿಕ ಪಂಜಾಬ್ ಸಿಎಂ ಮಾಡಿದ್ದೇನು ಗೊತ್ತೇ...?

ಚಂಡಿಗಡ.ಎ.15: ಪಂಜಾಬಿನ ಸಚಿವ ಹಾಗೂ ನಭಾ ಕ್ಷೇತ್ರದ ಶಾಸಕ ಸಾಧು ಸಿಂಗ್ ಧರಮಸೋಟ್ ಅವರು ತನ್ನ ಸ್ವಕ್ಷೇತ್ರದಲ್ಲಿಯ ಶಾಲೆಯೊಂದರಲ್ಲಿ ಉದ್ಘಾಟನಾ ಫಲಕದಲ್ಲಿ ತನ್ನ ಹೆಸರನ್ನು ಮೂರನೇ ಸ್ಥಾನದಲ್ಲಿ ಉಲ್ಲೇಖಿಸಿರುವದಕ್ಕೆ ಕೆಂಡಾಮಂಡಲ ಗೊಂಡು ಶಾಲಾ ಮುಖ್ಯೋಪಾಧ್ಯಾಯಿನಿಯನ್ನು ತೀವ್ರ ತರಾಟೆಗೆತ್ತಿಕೊಂಡು ಕೆಲಸದಿಂದ ಅಮಾನತು ಮಾಡುವುದಾಗಿ ಬೆದರಿಕೆಯೊಡ್ಡುತ್ತಿರುವ ವೀಡಿಯೋ ಶುಕ್ರವಾರ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಶಿಲಾನ್ಯಾಸ ಮತ್ತು ಉದ್ಘಾಟನಾ ಫಲಕಗಳ ಮೇಲೆ ಸಚಿವರು ಮತ್ತು ಶಾಸಕರು ಸೇರಿದಂತೆ ಸರಕಾರಿ ಗಣ್ಯರ ಹೆಸರುಗಳ ಸೇರ್ಪಡೆಯನ್ನು ನಿಷೇಧಿಸಿದ್ದಾರೆ.

ನಭಾದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು,•ಅಲ್ಲಿಯ ಉದ್ಘಾಟನಾ ಸಮಾರಂಭದಲ್ಲಿ ಸಾಧು ಸಿಂಗ್ ಮುಖ್ಯಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಉದ್ಘಾಟನಾ ಫಲಕದಲ್ಲಿ•ಸಿಂಗ್ ಹೆಸರು ಮೂರನೇ ಸ್ಥಾನದಲ್ಲಿದ್ದನ್ನು ಕಂಡ ಯಾರೋ ಅವರ ಕಿವಿ ಕಚ್ಚಿದ್ದರು. ತನ್ನ ಹೆಸರು ಮೊದಲ ಸ್ಥಾನದಲ್ಲಿ ಇಲ್ಲದ್ದನ್ನು ಕಂಡು ಕೆಂಡಾಮಂಡಲಗೊಂಡ ಸಿಂಗ್ ಮುಖ್ಯೋಪಾಧ್ಯಾಯಿನಿಯನ್ನು ವಾಚಾಮಗೋಚರವಾಗಿ ಬೈದು,ಮುಖ್ಯ ಅತಿಥಿ ಎಂದರೆ ಅರ್ಥ ಗೊತ್ತಿದೆಯೇ ಎಂದು ಪ್ರಶ್ನಿಸಿ ಅಮಾನತು ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.

ಗಮನಿಸಬೇಕಾದ ವಿಷಯವೆಂದರೆ ಶಾಲೆಯಲ್ಲಿನ ಕಟ್ಟಡ ಯೋಜನೆಗೆ ಖಾಸಗಿ ಟ್ರಸ್ಟ್‌ವೊಂದು ಆರ್ಥಿಕ ನೆರವು ಒದಗಿಸಿತ್ತು. ಅಮರಿಂದರ್ ಸಿಂಗ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆದಿದ್ದ ಮೊದಲ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು,ಸಚಿವರು ಮತ್ತು ಶಾಸಕರು ಯಾವುದೇ ಶಿಲಾನ್ಯಾಸ ಅಥವಾ ಉದ್ಘಾಟನೆಯನ್ನು ನೆರವೇರಿಸುವಂತಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಲಾಗಿತ್ತು.

ನಭಾ ಪ್ರಹಸನ ಬೆಳಿಕಿಗೆ ಬಂದ ಬಳಿಕ ಅಮರಿಂದರ್ ಅವರು,ಸಾರ್ವಜನಿಕರೊಂದಿಗೆ ವ್ಯವಹರಿಸುವಾಗ ನಮ್ರತೆಯನ್ನು ಪ್ರದರ್ಶಿಸುವಂತೆ ತನ್ನ ಸಂಪುಟ ಸಹೋದ್ಯೋಗಿಗಳನ್ನು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಅಥವಾ ಸಚಿವರು,ಶಾಸಕರು ಅಥವಾ ಇತರ ಅಧಿಕಾರಿಗಳು ಉದ್ಘಾಟಿಸಿರುವ ಎಲ್ಲ ಯೋಜನೆಗಳು ಮತ್ತು ಕಾರ್ಯಕ್ರಮಗಳು ಈಗಿನಿಂದ ಪಂಜಾಬಿನ ಜನತೆಗೆ ಅರ್ಪಣೆಯಾಗುತ್ತವೆ ಎಂದು ಅವರು ಹೇಳಿದ್ದಾರೆ.

ಸಚಿವರು,ನಾಯಕರು ಅಥವಾ ಸರಕಾರಿ ಅಧಿಕಾರಿಗಳು ಶಿಲಾನ್ಯಾಸ ಅಥವಾ ಉದ್ಘಾಟನೆಗಳನ್ನು ನೆರವೇರಿಸಲು ನಿರ್ಬಂಧವಿಲ್ಲದಿದ್ದರೂ,ಮುಖ್ಯಮಂತ್ರಿಗಳ ಸ್ಪಷ್ಟ ಆದೇಶದಂತೆ ಸಂಬಂಧಿಸಿದ ಫಲಕಗಳಲ್ಲಿ•ಅವರ ಹೆಸರುಗಳನ್ನು ಕೆತ್ತುವುದನ್ನು•ತಕ್ಷಣದಿಂದ ನಿಷೇಧಿಸಲಾಗಿದೆ ಎಂದು ಸರಕಾರಿ ವಕ್ತಾರರೋರ್ವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X