Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿಡ್ಡಳ್ಳಿ ಜಾಗ ಪರಿಶೀಲನೆ : ಕಂದಾಯ...

ದಿಡ್ಡಳ್ಳಿ ಜಾಗ ಪರಿಶೀಲನೆ : ಕಂದಾಯ ಭೂಮಿಯಾಗಿದ್ದರೆ ಹಕ್ಕುಪತ್ರ ; ಸಚಿವ ಕಾಗೋಡು ಭರವಸೆ

ವಾರ್ತಾಭಾರತಿವಾರ್ತಾಭಾರತಿ15 April 2017 8:44 PM IST
share
ದಿಡ್ಡಳ್ಳಿ ಜಾಗ ಪರಿಶೀಲನೆ : ಕಂದಾಯ ಭೂಮಿಯಾಗಿದ್ದರೆ ಹಕ್ಕುಪತ್ರ ; ಸಚಿವ ಕಾಗೋಡು ಭರವಸೆ

ಮಡಿಕೇರಿ ಏ.15:ದಿಡ್ಡಳ್ಳಿಯ ಮೂಲ ನಿವಾಸಿ ಗಿರಿಜನರಿಗೆ ನಿವೇಶನ ಹಾಗೂ ಭೂಮಿ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ದಿಡ್ಡಳ್ಳಿಯ ಜಾಗ ಅರಣ್ಯ ಇಲಾಖೆಗೆ ಸೇರಿದೆಯೇ ಅಥವಾ ಕಂದಾಯ ಇಲಾಖೆಗೆ ಸೇರಿದೆಯೇ ಎಂಬ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಮೂಲ ನಿವಾಸಿ ಗಿರಿಜನರಿಗೆ ಶಾಶ್ವತ ನೆಲೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು.
 

ಜಿಲ್ಲೆಯ ದಿಡ್ಡಳ್ಳಿಗೆ ಶನಿವಾರ ಭೇಟಿ ನೀಡಿ ನಿರಾಶ್ರಿತರ ಅಹವಾಲು ಆಲಿಸಿ ನಂತರ ಸಚಿವರು ಮಾತನಾಡಿ,ದಿಡ್ಡಳ್ಳಿಯ ಭೂಮಿ ಕಂದಾಯ ಇಲಾಖೆಗೆ ಸೇರಿದ್ದರೆ ಮೂರೇ ದಿನದಲ್ಲಿ ಹಕ್ಕು ಪತ್ರ ವಿತರಿಸಲಾಗುವುದು. ಅರಣ್ಯ ಇಲಾಖೆಗೆ ಜಾಗ ಸೇರಿದ್ದರೆ ಪರ್ಯಾಯ ಭೂಮಿ ಗುರುತಿಸಬೇಕಾಗುತ್ತದೆ ಎಂದು ತಿಳಿಸಿದರು.

 ಮೂಲ ನಿವಾಸಿ ಗಿರಿಜನರು ಯಾವ ಯಾವ ಹಾಡಿಯಲ್ಲಿ ವಾಸ ಮಾಡುತ್ತಿದ್ದೀರ, ಅಲ್ಲಿಯೇ ಜಾಗವನ್ನು ಗುರ್ತಿಸಿ, ನಿವೇಶನ ಹಾಗೂ ಭೂಮಿ ಹಂಚಿಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಕಂದಾಯ ಸಚಿವರು ಹೇಳಿದರು.

 ಗಿರಿಜನರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಆಶ್ರಮ ಶಾಲೆ, ವಸತಿ ಶಾಲೆ, ವಿದ್ಯಾರ್ಥಿ ನಿಲಯ ಹೀಗೆ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಬಳಸಿಕೊಳ್ಳಲು ಮುಂದಾಗಬೇಕು ಎಂದು ಕಾಗೋಡು ತಿಮ್ಮಪ್ಪ ಅವರು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡವರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ನೀಡುತ್ತಿದೆ. ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನವೂ ಹಾಲು ವಿತರಿಸಲಾಗುತ್ತದೆ. ನರೇಗಾ ಯೋಜನೆಯಡಿ ಉದ್ಯೋಗ ಪಡೆಯಿರಿ ಎಂದು ಅವರು ಹೇಳಿದರು.

ಸರಕಾರ ಭೂ ಸುಧಾರಣಾ ಕಾನೂನು ಜಾರಿಗೊಳಿಸಿದೆ. ಬೇರೆಯವರ ಭೂಮಿಯಲ್ಲಿ ವಾಸ ಮಾಡುತ್ತಿದ್ದರೆ ಅಕ್ರಮ-ಸಕ್ರಮ ಯೋಜನೆಯಡಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಗಿರಿಜನರಿಗೆ ಸಲಹೆ ಮಾಡಿದರು. ಪ್ರತಿಯೊಂದು ಕುಟುಂಬಕ್ಕೂ ಭೂಮಿ ಸಿಗುವ ಅವಕಾಶವಿದ್ದು, ಅದನ್ನು ಸಮರ್ಪಕವಾಗಿ ಬಳಿಸಿಕೊಳ್ಳುವಂತೆ ಕಾೋಡು ಅವರು ಸಲಹೆ ಮಾಡಿದರು.

 ಈ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ಒದಗಿಸಲು ಪ್ರಮುಖರು ಬೆಂಗಳೂರಿಗೆ ಆಗಮಿಸುವಂತೆ ಸಚಿವರು ಸಲಹೆ ನೀ
ಡಿದರು.

ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯವೀಣಾ ಅಚ್ಚಯ್ಯ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಪದ್ಮಿನಿ ಪೊನ್ನಪ್ಪ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ವಿಜು ಸುಬ್ರಮಣಿ, ಪ್ರಭಾರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ತಹಶೀಲ್ದಾರ ಮಹದೇವಯ್ಯ, ಐಟಿಡಿಪಿ ಅಧಿಕಾರಿ ಪ್ರಕಾಶ್, ಆದಿವಾಸಿ ಮುಖಂಡರಾದ ಅಪ್ಪಾಜಿ, ಮುತ್ತಮ್ಮ ಇತರರು ಹಾಜರಿದ್ದರು.

    ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು ದಿಡ್ಡಳ್ಳಿ ಗಿರಿಜನರಿಗೆ ಶಾಶ್ವತ ನೆಲೆ ಕಲ್ಪಿಸಲಾಗುವುದು. ಇಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ದಿಡ್ಡಳ್ಳಿಯಲ್ಲಿ ಅವಕಾಶವಿದ್ದರೆ, ನಿವೇಶನ ಹಾಗೂ ಭೂಮಿ ಹಂಚಿಕೆ ಮಾಡಲಾಗುವುದು, ಇಲ್ಲದಿದ್ದಲ್ಲಿ ಬೇರೆ ಕಡೆ ಭೂಮಿ ಗುರುತಿಸಲಾಗುವುದು ಎಂದು ಅವರು ತಿಳಿಸಿದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X