Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​"ಸ್ಮಾರ್ಟ್‌ಸಿಟಿ"ಗೆ ಅಪವಾದದ...

​"ಸ್ಮಾರ್ಟ್‌ಸಿಟಿ"ಗೆ ಅಪವಾದದ ಮಹಾಲಕ್ಷ್ಮಿ ಬಡಾವಣೆ 2ನೇ ಹಂತ

ಮೂಲಭೂತ ಸೌಕರ್ಯವಿಲ್ಲದ ನರಳುತ್ತಿರುವ ನಾಗರಿಕರು

ವಾರ್ತಾಭಾರತಿವಾರ್ತಾಭಾರತಿ16 April 2017 4:34 PM IST
share
​ಸ್ಮಾರ್ಟ್‌ಸಿಟಿಗೆ ಅಪವಾದದ ಮಹಾಲಕ್ಷ್ಮಿ ಬಡಾವಣೆ 2ನೇ ಹಂತ

ತುಮಕೂರು, ಎ.16: ನಗರದ ಬಿ.ಎಚ್.ರಸ್ತೆಗೆ ಕೂಗಳತೆಯ ದೂರದಲ್ಲಿರುವ ಮಹಾಲಕ್ಷ್ಮಿ ಬಡಾವಣೆಯ ಎರಡನೇ ಬ್ಲಾಕ್ ಸಮರ್ಪಕ ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೆ ಬಳಲುತ್ತಿದ್ದು, ನಗರಪಾಲಿಕೆ ಸೂಕ್ತ ಪರಿಹಾರ ಒದಗಿಸುವಂತೆ ಬಡಾವಣೆಯ ನಾಗರಿಕರು ಒತ್ತಾಯಿಸಿದ್ದಾರೆ.

ಬಟವಾಡಿಯ ಪೆಟ್ರೋಲ್ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮಹಾಲಕ್ಷ್ಮಿ ಬಡಾವಣೆ 2ನೇ ಹಂತ ಪ್ರಸ್ತುತ 35ನೇ ವಾರ್ಡಿಗೆ ಸೇರುತ್ತದೆ. ರಾಷ್ಟ್ರೀಯ ಹೆದ್ದಾರಿಯಿಂದ ಕೂಗಳತೆ ದೂರದಲ್ಲಿರುವ ಈ ಬಡಾವಣೆಯಲ್ಲಿ ಸರಿಯಾದ ರಸ್ತೆಗಳಿಲ್ಲ. ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, 2ನೇ ಹಂತದಲ್ಲಿ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳ ವಾಸವಾಗಿದ್ದು, ಇಡೀ ಬಡಾವಣೆಯಲ್ಲಿ ಚರಂಡಿ ಎಂಬುದೇ ಇಲ್ಲ. ಇದರಿಂದಾಗಿ ಮನೆಯ ನೀರು ರಸ್ತೆಯಲ್ಲಿಯೇ ನಿಂತು ಹಂದಿಗಳ ಆವಾಸ ಸ್ಥಾನವಾಗಿದೆ. ಕೊಳಚೆ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್, ಚಿಕನ್ ಗುನ್ಯಾ, ಮಲೇರಿಯಾ ಮತ್ತಿತರರ ಸಾಂಕ್ರಾಮಿಕ ರೋಗಗಳು ಹರಡಿ ಹಲವರು ರೋಗ, ರುಜಿನಗಳಿಗೆ ತುತ್ತಾಗುತ್ತಿದ್ದಾರೆ.

ನೂರೈವತ್ತಕ್ಕೂ ಹೆಚ್ಚು ಮನೆಗಳಿರುವ ಈ ಬಡಾವಣೆಗೆ ಕುಡಿಯಲು ಹೇಮಾವತಿ ನೀರಿನ ವ್ಯವಸ್ಥೆಯಿಲ್ಲ. ಬಡಾವಣೆಯಲ್ಲಿ ಈ ಹಿಂದೆ ಕೊರೆದಿದ್ದ ಕೊಳವೆಬಾವಿ ಬತ್ತಿ ಹೋಗಿದ್ದು,  ಸಂಸದರ ಒತ್ತಾಯದ ಮೇರೆಗೆ ನಗರಪಾಲಿಕೆ ಬರ ಪರಿಹಾರ ನಿರ್ವಹಣೆ ಅಡಿಯಲ್ಲಿ ಕೊಳವೆ ಬಾವಿ ಕೊರೆದಿದ್ದು,15 ದಿನ ಕಳೆದರೂ ಪಂಪು ಮೋಟಾರು ಅಳವಡಿಸಿಲ್ಲ. ಇದರಿಂದ ಬಡಾವಣೆಯ ಜನತೆ ಕುಡಿಯುವ ನೀರಿಗೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಗೆ ಖಾಸಗಿ ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ.

ಬಡಾವಣೆಯ ಸಮಸ್ಯೆಯ ಬಗ್ಗೆ ನಾಗರಿಕರು ಸ್ಥಳೀಯ ಕೌನ್ಸಿಲರ್ ಲೋಕೇಶ್, ಶಾಸಕರಾದ ಡಾ.ರಫೀಕ್ ಅಹಮದ್, ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ, ನಗರಪಾಲಿಕೆಯ ಅಧಿಕಾರಿಗಳಿಗೆ ಖುದ್ದು ಭೇಟಿಯಾಗಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಸದರು ನಗರಪಾಲಿಕೆಯ ಮೇಲೆ ಒತ್ತಡ ಹಾಕಿ ಕೊಳವೆ ಬಾವಿ ಕೊರೆಸಿದ್ದರೂ ಪಂಪು ಮೋಟಾರು ಅಳವಡಿಸಿದ ಕಾರಣ ಯಾವುದೇ ಪ್ರಯೋಜನವಾಗಿಲ್ಲ. ವಾರ್ಡುಗಳ ವಿಂಗಡಣೆ ವೇಳೆ  ಬಡಾವಣೆ 26ನೇ ವಾರ್ಡಿಗೆ ಸೇರಿರುವ ಹಿನ್ನೆಲೆಯಲ್ಲಿ ಹಾಲಿ ಬಡಾವಣೆ ಸೇರಿರುವ 35ನೇ ವಾರ್ಡಿನ ಕೌನ್ಸಿಲ್ ಲೋಕೇಶ್ ಈ ಭಾಗದ ಅಭಿವೃದ್ದಿಗೆ ಗಮನಹರಿಸಿಲ್ಲ ಎಂಬುದು ಬಡಾವಣೆಯ ನಾಗರಿಕರ ಆರೋಪವಾಗಿದೆ.

ಬಡಾವಣೆಯ ನಾಗರಿಕರಾದ ಬಸವರಾಜು ಮಾತನಾಡಿ, ಚರಂಡಿಯಿಲ್ಲದೆ ದೊಡ್ಡ ಗುಂಡಿಗಳು ಬಿದ್ದು, ಕೊಳಚೆ ನೀರು ನಿಂತಿದೆ. ರಾತ್ರಿ ವೇಳೆ ಕಿಟಕಿ ತೆಗೆದು ಮಲಗಿದರೆ ಸೊಳ್ಳೆಗಳ ಕಾಟ. ಜೊತೆಗೆ ಕೊಳೆತ ನೀರಿನ ಕೆಟ್ಟವಾಸನೆ. ತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಆಯ್ಕೆಯಾಗಿದ್ದು, ಮಹಾಲಕ್ಷ್ಮಿ ಬಡಾವಣೆ ಇದಕ್ಕೆ ಅಪವಾದದಂತಿದೆ. ನಗರಪಾಲಿಕೆ ಶೀಘ್ರ ಬಡಾವಣೆಗೆ ಅಗತ್ಯವಿರುವ ನಾಗರಿಕ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಬಡಾವಣೆಯ ನಾಗರಿಕರಾದ ಪೂರ್ಣಿಮಾ ಮಾತನಾಡಿ, "ನಾವು ಈ ಬಡಾವಣೆಯಲ್ಲಿ 25 ವರ್ಷಗಳಿಂದ ವಾಸಿಸುತ್ತಿದ್ದು, ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ. ಸೊಳ್ಳೆಗಳಿಂದ ಡೆಂಗ್, ಚಿಕನ್ ಗುನ್ಯಾ, ಮಲೇರಿಯಾ ರೋಗಗಳಿಗೆ ನಾವು ತುತ್ತಾಗುತ್ತಿದ್ದು, ನಗರಪಾಲಿಕೆಯವರು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಕೌನ್ಸಿಲರ್ ಲೋಕೇಶ್, ಅನುದಾನದ ಕೊರತೆಯಿಂದ ಬಡಾವಣೆಗೆ ನಾಗರಿಕ ಸೌಲಭ್ಯ ಕಲ್ಪಿಸಲು ಸಾಧ್ಯವಾಗಿಲ್ಲ. ಹಂತ ಹಂತವಾಗಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಸಾಲಿನಲ್ಲಿ ಅನುದಾನದಲ್ಲಿ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ದಿಯಲ್ಲಿ ತಾರತಮ್ಯ ಮಾಡಿಲ್ಲ. ಹೊಸದಾಗಿ ಕೊಳವೆ ಬಾವಿ ಕೊರೆಸಿದ್ದು, ಶೀಘ್ರವೇ ಪಂಪ್ ಮೋಟಾರ್ ಅಳವಡಿಸಿ ನೀರಿನ ಸಮಸ್ಯೆ ನೀಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X