Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಡ-ಬಲ ಒಗ್ಗೂಡಿಸಲು ನರಸಿಂಹನ್‌ರಂತಹ...

ಎಡ-ಬಲ ಒಗ್ಗೂಡಿಸಲು ನರಸಿಂಹನ್‌ರಂತಹ ವ್ಯಕ್ತಿಗಳು ಅಗತ್ಯ: ನ್ಯಾ.ಎ.ಜೆ.ಸದಾಶಿವ

‘ಶ್ರಮಿಕ ಸಂಗಾತಿ ಎಂ.ಸಿ.ನರಸಿಂಹನ್’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 April 2017 10:48 PM IST
share

ಬೆಂಗಳೂರು, ಎ.16: ಪರಿಶಿಷ್ಟ ಜಾತಿಯಲ್ಲಿ ಎಡ-ಬಲ ಇರುವಂತೆ ಕಮ್ಯುನಿಸ್ಟ್‌ರಲ್ಲೂ ಎಡ-ಬಲ ಪಂಥಗಳಿದ್ದು, ಈ ಪಂಥಗಳನ್ನು ಒಂದೆಡೆ ತಂದು ಮಧ್ಯದ ದಾರಿಯಲ್ಲಿ ಕರೆದೊಯ್ಯಲು ಎಂ.ಸಿ.ನರಸಿಂಹನ್ ಅವರಂತಹ ಪರಿಪೂರ್ಣ ವ್ಯಕ್ತಿಗಳ ಅಗತ್ಯವಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಅಭಿಪ್ರಾಯಿಸಿದರು.

ನಗರದ ಗಾಂಧಿ ಭವನದಲ್ಲಿ ಎಂ.ಎಸ್.ಕೃಷ್ಣನ್ ಸ್ಮರಣ ಸಂಸ್ಥೆ ಮತ್ತು ನವಕರ್ನಾಟಕ ಪಬ್ಲಿಕೇಷನ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಂ.ಸಿ.ನರಸಿಂಹನ್‌ಗೆ ಅಭಿವಂದನೆ ಹಾಗೂ ‘ಶ್ರಮಿಕ ಸಂಗಾತಿ ಎಂ.ಸಿ.ನರಸಿಂಹನ್’ ಕೃತಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಮ್ಯುನಿಸ್ಟ್ ನಾಯಕನಾಗಿ, ಮಾಜಿ ಶಾಸಕನಾಗಿ ಎಂ.ಸಿ. ನರಸಿಂಹನ್ ಅನುಕರಣೀಯ ವ್ಯಕ್ತಿಯಾಗಿದ್ದಾರೆ. ಅವರು ತಮಗೆ ತೋಚಿದ ದಾರಿ ಆಯ್ದುಕೊಂಡು ಮಾದರಿ ಬದುಕು ರೂಪಿಸಿಕೊಂಡಿದ್ದಾರೆ. ಸ್ವಯಂ ಗುರುವಾಗಿರುವ ಅವರು ತಮ್ಮ ಇಡೀ ಬದುಕನ್ನು ಪರರ ಹಿತಕ್ಕಾಗಿ ಮೀಸಲಿರಿಸಿದ್ದಾರೆ ಎಂದು ಹೇಳಿದರು.

ನಾಡೋಜ ಡಾ. ಕೋ.ಚೆನ್ನಬಸಪ್ಪ ಮಾತನಾಡಿ, ಕನಸಿನ ಭಾರತ ಕಾಣಲು ನಮ್ಮ ಕೈಲಾದಷ್ಟು ಶ್ರಮ ವಹಿಸಿದ್ದೇವೆ. ಇಂದಿನ ಯುವ ಸಮುದಾಯ ಮುಂದಕ್ಕೆ ಕನಸಿನ ರಾಷ್ಟ್ರವನ್ನು ಅಭಿವೃದ್ಧಿಪಡಿಸಿಕೊಂಡು ಹೋಗಬೇಕು. ನರಸಿಂಹನ್ ಆರಂಭದಿಂದಲೂ ಛಲಗಾರ. ಅವರು ಅಂದುಕೊಂಡಿದ್ದನ್ನು ಈಡೇರಿಸುವ ಮನೋಬಲ ಹೊಂದಿದ್ದ ವ್ಯಕ್ತಿ. ಅವರ ಜೀವನ ಆಧರಿಸಿ ಮಾಡಿರುವ ಈ ಕೃತಿ ಎಲ್ಲ ಪೀಳಿಗೆಗೆ ನಿರಂತರವಾಗಿ ಲಭ್ಯವಾಗುವಂತೆ ಮಾಡುವುದು ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.

ಮಹಿಳಾ ಒಕ್ಕೂಟದ ಮುಖಂಡರಾದ ಎ.ಜ್ಯೋತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ ಪಿ.ವಿ.ಲೋಕೇಶ್, ನವ ಕರ್ನಾಟಕ ಪಬ್ಲಿಕೇಷನ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ.ಸಿದ್ದನಗೌಡ ಪಾಟೀಲ, ಹಿರಿಯ ನ್ಯಾಯವಾದಿ ಕೆ.ಸುಬ್ಬರಾವ್, ಇಂದಿರಾ ನರಸಿಂಹನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X