Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ ಜನಮತ ಸಂಗ್ರಹ : ವಿಜಯ ತಮ್ಮದು...

ಟರ್ಕಿ ಜನಮತ ಸಂಗ್ರಹ : ವಿಜಯ ತಮ್ಮದು ಎಂದು ಘೋಷಿಸಿಕೊಂಡ ಅಧ್ಯಕ್ಷ ಎರ್ದೊಗನ್

ವಾರ್ತಾಭಾರತಿವಾರ್ತಾಭಾರತಿ17 April 2017 12:20 PM IST
share
ಟರ್ಕಿ ಜನಮತ ಸಂಗ್ರಹ : ವಿಜಯ ತಮ್ಮದು ಎಂದು ಘೋಷಿಸಿಕೊಂಡ ಅಧ್ಯಕ್ಷ ಎರ್ದೊಗನ್

ಅಂಕಾರ, ಎ.17: ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗನ್ ಅವರಿಗೆ ಸಂಪೂರ್ಣ ಅಧಿಕಾರವನ್ನು ನೀಡುವ ಸಲುವಾಗಿ ರವಿವಾರ ನಡೆಸಲಾದ ಜನಮತ ಸಂಗ್ರಹದಲ್ಲಿ ತಮಗೆ ಸಂಪೂರ್ಣ ಜಯ ದೊರೆತಿದೆ ಎಂದು ಎರ್ದೊಗನ್ ಹಾಗೂ ದೇಶದ ಪ್ರಧಾನಿ ಬಿನಾಲಿ ಯಿಲ್ಡಿರಿಂ ಹೇಳಿಕೊಂಡಿದ್ದಾರೆ.

ಆದರೆ ಟರ್ಕಿಯ ಚುನಾವಣಾ ಆಯೋಗ ಅಧಿಕೃತ ಫಲಿತಾಂಶವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ದೇಶದ ಅಧಿಕೃತ ಸುದ್ದಿ ಸಂಸ್ಥೆ ಅನದೊಲು ಏಜನ್ಸಿಯ ಪ್ರಕಾರ ಶೇ.99.8 ಮತಪತ್ರಗಳ ಎಣಿಕೆ ಮುಗಿದಿದ್ದು, ಶೇ.51.4 ಮತದಾರರು ಎರ್ದೊಗನ್ ಪರ ಮತ ಚಲಾಯಿಸಿದ್ದಾರೆಂದು ಹೇಳಿಕೊಂಡಿದೆ.

ಜನಮತ ಸಂಗ್ರಹದಲ್ಲಿ ಒಟ್ಟು 47.5 ಮಿಲಿಯನ್ ಮತದಾರರು ಮತ ಚಲಾಯಿಸಿದ್ದರು. ಸುಪ್ರೀಂ ಇಲೆಕ್ಟೋರಲ್ ಕೌನ್ಸಿಲ್ ಅಧ್ಯಕ್ಷ ಸದಿ ಗುವೆನ್ ಕೂಡ ಅನಧಿಕೃತ ಫಲಿತಾಂಶಗಳ ಪ್ರಕಾರ ‘ಪರ’ ಮತಗಳು ಹೆಚ್ಚಾಗಿವೆ ಎಂದು ದೃಢಪಡಿಸಿದ್ದಾರೆ. ಆಕ್ಷೇಪಗಳೇನಾದರೂ ಇದ್ದರೆ ಅವುಗಳನ್ನು ಪರಿಗಣಿಸಿ ಅಧಿಕೃತ ಫಲಿತಾಂಶಗಳು 10 ದಿನಗಳಲ್ಲಿ ಹೊರಬೀಳಬಹುದು ಎಂದು ಅವರು ಹೇಳಿದ್ದಾರೆ.

ಈಗಿನ ಸಂಸದೀಯ ಪ್ರಜಾಪ್ರಭುತ್ವದ ಬದಲು ಪ್ರಬಲ ಅಧ್ಯಕ್ಷೀಯ ಆಡಳಿತಕ್ಕೆ ಅನುವು ಮಾಡಿ ಕೊಡುವ ಸಲುವಾಗಿ ಆಡಳಿತ ಜಸ್ಟಿಸ್ ಆ್ಯಂಡ್ ಡೆವಲಪ್ಮೆಂಟ್ ಪಾರ್ಟಿ ಮುಂದಿರಿಸಿದ 18 ಪರಿಚ್ಛೇದಗಳಿರುವ ಸುಧಾರಣಾ ಪ್ಯಾಕೇಜನ್ನು ಬೆಂಬಲಿಸುವಂತೆ ಈ ಜನಮತ ಸಂಗ್ರಹ ನಡೆದಿತ್ತು.

ಎರ್ದೊಗಾನ್ ಅವರಿಗೆ ಜನಮತ ಸಂಗ್ರಹದಲ್ಲಿ ಜಯ ದೊರೆತಿದೆ ಎಂದು ಪ್ರಧಾನಿ ಬಿನಾಲಿ ಯಿಲ್ಡಿರಿಂ ಘೋಷಿಸುವ ಮೊದಲೇ ಅಂಕಾರದಲ್ಲಿ ಸಾವಿರಾರು ಜನರು ಸೇರಿ ನೃತ್ಯ ಮಾಡಿ ಘೋಷಣೆಗಳನ್ನು ಕೂಗಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹೊಸ ಯೋಜನೆ ಜಾರಿಗೊಂಡಲ್ಲಿ ವಿದೇಶಿ ಶಕ್ತಿಗಳನ್ನು ದೂರವಿರಿಸುವ ನಿಟ್ಟಿನಲ್ಲಿ ದೇಶಕ್ಕೆ ಹೆಚ್ಚಿನ ಬಲ ಬಂದಂತಾಗುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆಯಲ್ಲಿ ಸ್ಟಾಂಪ್ ಇಲ್ಲದ ಮತಪತ್ರಗಳನ್ನೂ ಸ್ವೀಕರಿಸಲು ಕೊನೆಯ ಕ್ಷಣದಲ್ಲಿ ನಿರ್ಧರಿಸಿದ್ದ ಚುನಾವಣಾ ಆಯೋಗದ ಕ್ರಮಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಕನಿಷ್ಠ ಶೇ.37ರಷ್ಟು ಮತಗಳನ್ನು ಮತ್ತೆ ಎಣಿಕೆ ಮಾಡಬೇಕೆಂದು ಆಗ್ರಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X