Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳದಲ್ಲಿ ದೇಶದ ಪ್ರಥಮ 3ಡಿ ಡಿಜಿಟಲ್...

ಪಿಲಿಕುಳದಲ್ಲಿ ದೇಶದ ಪ್ರಥಮ 3ಡಿ ಡಿಜಿಟಲ್ ತಾರಾಲಯ ಅಕ್ಟೋಬರ್‌ನಲ್ಲಿ ಅನಾವರಣ: ಶಾಸಕ ಲೋಬೊ

ವಾರ್ತಾಭಾರತಿವಾರ್ತಾಭಾರತಿ17 April 2017 1:47 PM IST
share
ಪಿಲಿಕುಳದಲ್ಲಿ ದೇಶದ ಪ್ರಥಮ 3ಡಿ ಡಿಜಿಟಲ್ ತಾರಾಲಯ ಅಕ್ಟೋಬರ್‌ನಲ್ಲಿ ಅನಾವರಣ: ಶಾಸಕ ಲೋಬೊ

ಮಂಗಳೂರು, ಎ.17: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದಲ್ಲಿ ನಿರ್ಮಾಣವಾಗಿರುವ 3ಡಿ ಡಿಜಿಟಲ್ ಹೈಬ್ರೀಡ್ ಸ್ವಾಮಿ ವಿವೇಕಾನಂದ ತಾರಾಲಯ ಅಕ್ಟೋಬರ್ ಕೊನೆಯಲ್ಲಿ ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ ಎಂದು ಶಾಸಕ ಜೆ.ಆರ್. ಲೋಬೋ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 3ಡಿ 8ಕೆ ಡಿಜಿಟಲ್ ತಾರಾಲಯವನ್ನು ಹೊಂದಲಿರುವ ಭಾರತದ ಪ್ರಥಮ ನಗರ ಮಂಗಳೂರು ಆಗಲಿದೆ. ಈ ತೆರನಾದ ತಾರಾಲಯ ಪ್ರಸ್ತುತ ಸಿಂಗಾಪುರ, ಚೀನಾದ ಶಾಂೈ, ಯುಎಸ್‌ಎಯ ರಿಚ್‌ಮಂಡ್, ಕೊರಿಯಾದ ಆ್ಯನ್ಸ್‌ಯೊಂಗ್, ಕೆನಡಾದ ಕಾಲ್‌ಗೇರಿ, ಯುಕೆಯ ಬ್ರಿಸ್ಪಾಲ್, ಜರ್ಮನಿಯ ಹ್ಯಾಮ್‌ಬರ್ಗ್, ಜಪಾನ್‌ನ ಟೋಕಿಯೋ, ಪೋಲೆಂಡ್‌ನ ಲೋಡ್ಜ್ ನಗರಗಳಲ್ಲಿದೆ. ಇದೀಗ ಮಂಗಳೂರಿನಲ್ಲಿ ಈ ತಾರಾಲಯ ಉದ್ಘಾಟನೆಗೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಉನ್ನತ ತಾರಾಲಯವನ್ನು ಹೊಂದಿರುವ ದೇಶದ ಪ್ರಥಮ ನಗರವಾಗಿ ಮಂಗಳೂರು ಅಂತಾರಾಷ್ಟ್ರೀಯವಾಗಿ ಗುರುತಿಸಿಕೊಳ್ಳಲಿದೆ ಎಂದರು.

ಪಿಲಿಕುಳ ನಿಸರ್ಗಧಾಮದ ವತಿಯಿಂದ ಆರಂಭದಲ್ಲಿ 8 ಕೋಟಿ ರೂ. ಯೋಜನಾ ವೆಚ್ಚದಲ್ಲಿ ತಾರಾಲಯ ನಿರ್ಮಾಣಕ್ಕೆ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಆದರೆ ಯೋಜನೆಯ ಬಗ್ಗೆ ಆರಂಭದಲ್ಲಿ ವಿಸ್ತೃತವಾದ ಮಾಹಿತಿ ಇಲ್ರಲಿಲ್ಲ. ಬಳಿಕ ಮಾಹಿತಿ ಕಲೆ ಹಾಕಿದಾದ 3ಡಿ ತಾರಾಲಯದ ನಿರ್ಮಾಣಕ್ಕೆ 15.50 ಕೋಟಿ ರೂ. ವೆಚ್ಚಕ್ಕೆ ವರದಿಯನ್ನು ಪರಷ್ಕರಿಸಲಾಯಿತು. ಇದಕ್ಕೂ ಸರಕಾರ ಒಪ್ಪಿಗೆ ಸೂಚಿಸಿತ್ತು. ಬಳಿಕ ತಾಂತ್ರಿಕ ಅಧ್ಯಯನಕ್ಕೆ ಹಾಗೂ ಯೋಜನಾ ವೆಚ್ಚ ಅಂತಿಮಗೊಳಿಸಲು ಬೆಂಗಳೂರಿನ ತಾರಾಲಯ ನಿರ್ದೇಶಕರಾದ ಡಾ. ಶುಕ್ರೆಯವರ ನೇತೃತ್ವದ ತಾಂತ್ರಿಕ ಸಮಿತಿ ರಚಿಸಲಾಯಿತು.

ಸಮಿತಿಯಲ್ಲಿ ಕೇರಳ ರಾಜ್ಯದ ವಿಜ್ಞಾನ ತಂತ್ರಜ್ಞಾನ ನಿರ್ದೇಶಕ ಡಾ. ಅರುಳ್ ಪ್ರಕಾಶ್, ತಮಿಳುನಾಡಿನ ಡಾ.ಐ.ಎಂ. ಪೆರುಆಳ್, ವಿಐಟಿಎಂ ಬೆಂಗಳೂರಿನ ನಿರ್ದೇಶಕ ಡಾ. ಶಿವಪ್ರಾಸದ್ ಕೆನೆದ್, ಪಿಲಿಕುಳನ ನಿಸರ್ಗಧಾಮದ ಡಾ.ಕೆ.ವಿ.ರಾವ್, ರಾಜ್ಯದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಡಾ. ಹೊನ್ನೇಗೌಡ ಹಾಗೂ ತನ್ನನ್ನು ಒಳಗೊಂಡ ಸಮಿತಿಯು ದೇಶದ ಹಲವು ತಾರಾಲಯಗಳನ್ನು ವೀಕ್ಷಿಸಿ, ತಜ್ಞರೊಂದಿಗೆ ಚರ್ಚಿಸಿ ರಾಷ್ಟ್ರದ ಮೊತ್ತ ಮೊದಲಿನ ಒಪ್ಟೋ ಮೆಕ್ಯಾನಿಕಲ್ ಮತ್ತು 3ಡಿ ಡಿಜಿಟಲ್ ಹೈಬ್ರೀಡ್ ವ್ಯವಸ್ಥೆಯ ತಾರಾಲಯ ನಿರ್ಮಾಣಕ್ಕೆ ಶಿಫಾರಸು ಮಾಡಿ 24.50 ಕೋಟಿ ರೂ. ಅಂದಾಜು ವೆಚ್ಚದ ವರದಿಯನ್ನು ಸರಕಾರಕ್ಕೆ ಸಲ್ಲಿಸಿ, ಮಂಜೂರಾತಿ ಪಡೆದು ಕಾಮಗಾರಿ ಆರಂಭಗೊಂಡಿತ್ತು. ಇದೀಗ ಮತ್ತೆ ಸುಮಾರು 10 ಕೋಟಿ ರೂ.ಗಳ ಹೆಚ್ಚುವರಿ ಅಂತಾರಾಷ್ಟ್ರೀಯ ಟೆಂಡರ್‌ನೊಂದಿಗೆ ಒಟ್ಟು 35.69 ಕೋಟಿ ರೂ.ಗಳಲ್ಲಿ ತಾರಾಲಯ ನಿರ್ಮಾಣವಾಗುತ್ತಿದೆ. ತಾರಾಲಯದಲ್ಲಿ ಇದೀಗ ಸ್ಪೇಸ್ ಗ್ಯಾಲರಿಯನ್ನೂ ಅಳವಡಿಸಲು ಯೋಜಿಸಲಾಗಿದೆ ಎಂದು ಶಾಸಕ ಜೆ.ಆರ್. ಲೋಬೋ ವಿವರ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ. ರಾವ್, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸಬಿತಾ ಮಿಸ್ಕಿತ್, ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಪ್ರಕಾಶ್ ಸಾಲಿಯಾನ್, ಅರುಣ್ ಕುವೆಲ್ಲೋ, ಡೆನ್ನಿಸ್ ಲೋಬೋ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X