Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಜೈಲಲ್ಲಿರುವ ಫೆಲೆಸ್ತೀನೀಯರಿಂದ...

ಇಸ್ರೇಲ್ ಜೈಲಲ್ಲಿರುವ ಫೆಲೆಸ್ತೀನೀಯರಿಂದ ಸಾಮೂಹಿಕ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ17 April 2017 8:32 PM IST
share
ಇಸ್ರೇಲ್ ಜೈಲಲ್ಲಿರುವ ಫೆಲೆಸ್ತೀನೀಯರಿಂದ ಸಾಮೂಹಿಕ ಉಪವಾಸ ಸತ್ಯಾಗ್ರಹ

ರಮಲ್ಲಾ (ಫೆಲೆಸ್ತೀನ್), ಎ. 17: ಇಸ್ರೇಲ್‌ನ ಜೈಲುಗಳಲ್ಲಿರುವ ನೂರಾರು ಫೆಲೆಸ್ತೀನಿ ಕೈದಿಗಳು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಫೆಲೆಸ್ತೀನ್ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದರು. ಉಪವಾಸ ಸತ್ಯಾಗ್ರಹದ ನೇತೃತ್ವವನ್ನು ಕೈದಿ ಮರ್ವನ್ ಬರ್ಗೌತಿ ವಹಿಸಿದ್ದಾರೆ.

ಸುಮಾರು 1,300 ಫೆಲೆಸ್ತೀನಿ ಕೈದಿಗಳು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಹಾಗೂ ಈ ಸಂಖ್ಯೆ ಇನ್ನೂ ಹೆಚ್ಚಬಹುದು ಎಂದು ಫೆಲೆಸ್ತೀನ್ ಪ್ರಾಧಿಕಾರದ ಕೈದಿಗಳ ವ್ಯವಹಾರದ ಮುಖ್ಯಸ್ಥ ಇಸ್ಸ ಕರಾಕೆ ತಿಳಿಸಿದರು.

1,500 ಕೈದಿಗಳು ಭಾಗವಹಿಸುತ್ತಿದ್ದಾರೆ ಎಂದು ಫೆಲೆಸ್ತೀನಿಯನ್ ಕೈದಿಗಳ ಕ್ಲಬ್ ಎಂಬ ಹೆಸರಿನ ಸಂಸ್ಥೆ ಹೇಳಿದೆ. ತಾವು ಉಪವಾಸ ಸತ್ಯಾಗ್ರಹ ಮಾಡುವುದಾಗಿ 700 ಕೈದಿಗಳು ರವಿವಾರ ಘೋಷಿಸಿದ್ದಾರೆ ಎಂದು ಇಸ್ರೇಲ್‌ನ ಕಾರಾಗ್ರಹ ಇಲಾಖೆಯ ವಕ್ತಾರ ಅಸ್ಸಫ್ ಲಿಬ್ರಟಿ ಹೇಳಿದರು.

‘‘ಎಷ್ಟು ಮಂದಿ ಕೈದಿಗಳು ಉಪವಾಸ ಮಾಡುತ್ತಿದ್ದಾರೆ ಎಂಬುದನ್ನು ನಾವೀಗ ಪರಿಶೀಲಿಸುತ್ತಿದ್ದೇವೆ. ತಾವು ಕೇವಲ ಸಾಂಕೇತಿಕ ಮುಷ್ಕರ ನಡೆಸಿ ತಿನ್ನುವುದನ್ನು ಮುಂದುವರಿಸುತ್ತೇವೆ ಎಂದು ಕೆಲವು ಕೈದಿಗಳು ಹೇಳಿದ್ದಾರೆ’’ ಎಂದರು.

ಎರಡನೆ ಫೆಲೆಸ್ತೀನ್ ‘ಇಂಟಿಫಾಡ’ (ಬಂಡಾಯ)ದಲ್ಲಿ ಭಾಗವಹಿಸಿರುವುದಕ್ಕಾಗಿ ಬರ್ಗೌತಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಅವರು ಜನಪ್ರಿಯ ವ್ಯಕ್ತಿಯಾಗಿದ್ದಾರೆ. ಅವರಿಗೆ ಫೆಲೆಸ್ತೀನ್ ಅಧ್ಯಕ್ಷರಾಗುವಷ್ಟು ಜನಬೆಂಬಲವಿದೆ ಎಂದು ಸಮೀಕ್ಷೆಗಳು ಹೇಳುತ್ತವೆ.

ಪ್ರತಿ ವರ್ಷ ಆಚರಿಸಲಾಗುವ ಫೆಲೆಸ್ತೀನ್ ಕೈದಿಗಳ ದಿನದ ಭಾಗವಾಗಿ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಗುತ್ತಿದೆ. ಇಸ್ರೇಲ್‌ನ ಜೈಲುಗಳಲ್ಲಿ ಈಗ ಸುಮಾರು 6,500 ಫೆಲೆಸ್ತೀನೀಯರಿದ್ದಾರೆ.

ಕೈದಿಗಳ ಬೇಡಿಕೆಗಳು

ತಮ್ಮ ಕುಟುಂಬ ಸದಸ್ಯರ ಭೇಟಿಯನ್ನು ಸುಲಭಗೊಳಿಸಬೇಕು ಮತ್ತು ಹೆಚ್ಚು ಸಲ ಭೇಟಿಯಾಗಲು ಅವಕಾಶ ನೀಡಬೇಕು ಹಾಗೂ ತಮಗೆ ಟೆಲಿಫೋನ್ ಸಂಪರ್ಕಗಳನ್ನು ಒದಗಿಸಬೇಕು ಎನ್ನುವುದು ಉಪವಾಸ ನಿರತ ಫೆಲೆಸ್ತೀನ್ ಕೈದಿಗಳ ಪ್ರಮುಖ ಬೇಡಿಕೆಯಾಗಿದೆ.ಜೊತೆಗೆ, ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂಬುದಾಗಿಯೂ ಅವರು ಆಗ್ರಹಿಸುತ್ತಾರೆ.

ಕೈದಿಗಳು ಎರಡು ವಾರಗಳಿಗೊಮ್ಮೆ ತಮ್ಮ ಕುಟುಂಬ ಸದಸ್ಯರನ್ನು ಭೇಟಿಯಗಬೇಕು ಎಂಬುದಾಗಿ ಇಸ್ರೇಲ್ ಜೈಲುಗಳ ನಿಯಮಗಳು ಹೇಳುತ್ತವೆಯಾದರೂ, ವಾಸ್ತವ ಇದಕ್ಕಿಂತ ತೀರಾ ಭಿನ್ನವಾಗಿದೆ.

ಇಸ್ರೇಲ್ ಆಕ್ರಮಿತ ಫೆಲೆಸ್ತೀನ್‌ನಲ್ಲಿ ವಾಸಿಸುತ್ತಿರುವ ಕುಟುಂಬ ಸದಸ್ಯರು ಇಸ್ರೇಲ್‌ನ ಜೈಲುಗಳಲ್ಲಿರುವ ತಮ್ಮ ಕುಟುಂಬ ಸದಸ್ಯರನ್ನು ನೋಡಬೇಕಾದರೆ, ಮೊದಲು ಅವರು ಇಸ್ರೇಲ್‌ಗೆ ಪ್ರವೇಶಿಸುವ ಅನುಮತಿ ಪಡೆಯಲು ಅರ್ಜಿ ಸಲ್ಲಿಸಬೇಕಾಗುತ್ತದೆ. ಇಂಥ ಅರ್ಜಿಗಳನ್ನು ಇಸ್ರೇಲ್ ಅಧಿಕಾರಿಗಳು ಹೆಚ್ಚಿನ ಸಂದರ್ಭಗಳಲ್ಲಿ ತಿರಸ್ಕರಿಸುತ್ತಾರೆ.

ಎರಡು ವರ್ಷಗಳಿಂದ ಕುಟುಂಬ ಸದಸ್ಯರನ್ನು ಭೇಟಿಯಾಗದಿರುವ ಕೈದಿಗಳು ಇಸ್ರೇಲ್‌ನ ಜೈಲುಗಳಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X