Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಸುರಕ್ಷಿತ ನಗರ’ವೇ ಸ್ಮಾರ್ಟ್ ನಗರ:...

‘ಸುರಕ್ಷಿತ ನಗರ’ವೇ ಸ್ಮಾರ್ಟ್ ನಗರ: ಸುಭಾಷ್ ಚಂದ್ರ ಕುಂಟಿಯಾ

ವಾರ್ತಾಭಾರತಿವಾರ್ತಾಭಾರತಿ17 April 2017 11:26 PM IST
share

ಬೆಂಗಳೂರು, ಎ.17: ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿದರೆ ಯಾವುದೇ ನಗರವನ್ನು ‘ಸ್ಮಾರ್ಟ್‌ಸಿಟಿ’ಯನ್ನಾಗಿ ಮಾಡಬಹುದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ತಿಳಿಸಿದ್ದಾರೆ.

ಸೋಮವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಹಾಗೂ ಹನ್ಸ್ ಸೇಡೆಲ್ ಫೌಂಡೇಶನ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸುರಕ್ಷಿತ ನಗರವೆ ಸ್ಮಾರ್ಟ್ ನಗರ’ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಫಾಟಿಸಿ ಮಾತನಾಡಿದರು.

ನಾವು ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿಸಲು ಎಲ್ಲ ವಲಯಗಳಲ್ಲೂ ಪ್ರಯತ್ನಿಸಬೇಕು. ಸರಕಾರವು ಮಹಿಳಾ ಸುರಕ್ಷತೆಗಾಗಿ ‘ಸುರಕ್ಷಾ’ ಎಂಬ ಮೊಬೈಲ್ ಆ್ಯಪ್ ಅನ್ನು ಪರಿಚಯಿಸಿದ್ದು, ಸಂಕಷ್ಟಕ್ಕೆ ಸಿಲುಕಿದ ಮಹಿಳೆ ಈ ಆ್ಯಪ್‌ನ ಬಟನ್ ಒತ್ತಿದೊಡನೆ ಗುಲಾಬಿ ಬಣ್ಣದ ಹೊಯ್ಸಳ ವಾಹನ ಆಕೆಯ ರಕ್ಷಣೆಗೆ 10 ನಿಮಿಷದೊಳಗೆ ಬರುತ್ತದೆ. ರಾಜ್ಯದಲ್ಲಿನ ಒಟ್ಟು ಜನಸಂಖ್ಯೆಯಲ್ಲಿ ಸುಮಾರು ಅರ್ಧದಷ್ಟು ಇರುವ ಮಹಿಳಾ ಜನಸಂಖ್ಯೆಗೆ ಪೂರಕವಾಗಿ ಅವರಿಗೆ ರಕ್ಷಣೆ, ಸೌಕರ್ಯ ಒದಗಿಸಲು ಸರಕಾರ ಬದ್ಧವಾಗಿದೆ. ಮಹಿಳಾ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದೆ. ಪೊಲೀಸ್ ಹಾಗೂ ನ್ಯಾಯಾಂಗ ವ್ಯವಸ್ಥೆ ಸಹಾಯದಿಂದ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳೆಯ ಸಬಲೀಕರಣ, ರಕ್ಷಣೆಗೆ ಕೈಗೊಳ್ಳಬೇಕಾದ ವರದಿಯನ್ನು ತಯಾರಿಸಿ ನೀಡಬೇಕೆಂದು ತಿಳಿಸಿದರು.

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಮಾತನಾಡಿ, ಆಯೋಗವು ಸಾರ್ವಜನಿಕರು, ಮಹಿಳೆಯರ ಹಕ್ಕುಗಳ ರಕ್ಷಣೆಗೆ ಹೋರಾಡುತ್ತಿದೆ. ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳ ಹಾಗೂ ಎಲ್ಲರೂ ನ್ಯಾಯ ಒದಗಿಸುತ್ತದೆ. ಆಹಾರ ಸುರಕ್ಷತೆ, ವಸತಿ, ಶಿಕ್ಷಣದಿಂದ ಹಾಗೂ ರಾಜ್ಯದ ನೀತಿ ನಿರ್ದೇಶಕ ತತ್ವಗಳು ಮನುಷ್ಯನ ಜೀವನಮಟ್ಟವನ್ನು ಸುಧಾರಿಸುತ್ತಿದೆ. ಆದರೆ ಸಮಾಜದಲ್ಲಿ ವರದಕ್ಷಿಣೆ, ಜೀತಪದ್ಧತಿ, ಅತ್ಯಾಚಾರ, ಮಾನವ ಕಳ್ಳ ಸಾಗಾಣೆ ಅಸ್ತಿತ್ವದಲ್ಲಿದೆ. ಸರಕಾರವು ಮಹಿಳೆ, ಮಕ್ಕಳು, ಅಂಗವಿಕಲರು, ಹಿರಿಯ ನಾಗರಿಕರು ಹಾಗೂ ಮಂಗಳಮುಖಿಯರ ಬಗೆಗೆ ಹೆಚ್ಚಿನ ಕಾಳಜಿ ಹಾಗೂ ಸೌಕರ್ಯ ನೀಡಬೇಕಾಗಿರುವುದು ಇಂದಿನ ಅಗತ್ಯ. ಇದಕ್ಕೆ ಯೋಜನೆಗಳನ್ನು ರೂಪಿಸಿ ಅದನ್ನು ಜಾರಿಗೊಳಿಸಬೇಕಿದೆ ಎಂದವರು ತಿಳಿಸಿದರು.

ಕರ್ನಾಟಕ ಹಾಗೂ ಕೇರಳದ ಜರ್ಮನ್ ಕನ್ಸೋಲ್ ಜನರಲ್ ಮಾರ್ಗಿಟ್ ಹೆಲ್ವಿಂಗ್ ಮಾತನಾಡಿ, ಇಂದಿನ ಮಹಿಳೆಯರ ಪ್ರತಿಷ್ಠಿತ ಸ್ಥಾನಮಾನಗಳನ್ನು ಅಲಂಕರಿಸಿದ್ದಾರೆ. ಮಹಿಳೆಯರ ಮೇಲಿನ ಅಪರಾಧಗಳು ಇಂದೂ ವರದಿಗೊಳ್ಳುತ್ತಿವೆ. ಅವಳಿಗೆ ರಕ್ಷಣೆ ಒದಗಿಸುವುದು ಬಹುಮುಖ್ಯ. ಹೆಚ್ಚು ಮಹಿಳಾ ಠಾಣೆಗಳನ್ನು ತೆರೆಯಬೇಕಿದೆ. ಮಹಿಳೆಯರಿಗೆ ವಿದ್ಯಾಭ್ಯಾಸ, ಆತ್ಮಸ್ಥೆರ್ಯ ಒದಗಿಸಬೇಕಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿರುವಂತೆ ಸಮಾಜದ ಏಳ್ಗೆಯು ಮಹಿಳೆಯರ ಸಬಲೀಕರಣದ ಮೇಲೆ ನಿಂತಿದೆ. ಆಕೆ ಮುಂದುವರೆಯದಿದ್ದರೆ ಸಮಾಜವೂ ಮುಂದುವರೆಯುವುದಿಲ್ಲ ಎಂದಿದ್ದಾರೆ. ಆದುದರಿಂದ ಮಹಿಳೆಯರು ಶಕ್ತಿವಂತರಾಗಬೇಕೆಂದರು.

ಪೊಲೀಸ್ ಇಲಾಖೆ ಹೆಚ್ಚುವರಿ ಆಯುಕ್ತ ಎಸ್.ರವಿ ಮಾತನಾಡಿದರು.

ಆಹಾರ ಸುರಕ್ಷತೆ, ಶಾಲಾ ಮಕ್ಕಳ ಸುರಕ್ಷತೆ, ಬಾಲಕಾರ್ಮಿಕ ಪದ್ದತಿ, ಕಾನೂನಿನ ಅಡಿಯಲ್ಲಿ ನ್ಯಾಯ ಇತರ ವಿಷಯಗಳ ಕುರಿತು ವಿವಿಧ ಅಧಿಕಾರಿಗಳೂ, ಸಂಪನ್ಮೂಲ ವ್ಯಕ್ತಿಗಳು ವಿಷಯ ಮಂಡನೆ ಮಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ಆಯೋಗದ ಕಾರ್ಯದರ್ಶಿ ಮಧು ಶರ್ಮಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X