Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ...

ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಆದೇಶ

ಬರ ಪರಿಸ್ಥಿತಿ, ಕೈಗೊಂಡಿರುವ ಪರಿಹಾರ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ

ವಾರ್ತಾಭಾರತಿವಾರ್ತಾಭಾರತಿ18 April 2017 1:27 PM IST
share
ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಆದೇಶ

ಬೆಂಗಳೂರು, ಎ.18: ಹಿಂದೆಂದೂ ಕಾಣದಂತಹ ಭೀಕರ ಬರಗಾಲ ರಾಜ್ಯವನ್ನು ಆವರಿಸಿದೆ. ಬರ ಪರಿಹಾರ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವ ಅಗತ್ಯವಿದ್ದು, ಇದು ಸವಾಲಿನ ಕೆಲಸವೂ ಆಗಿದೆ. ಹೀಗಾಗಿ ಜೂನ್ ತಿಂಗಳವರೆಗೆ ಜನರಿಗೆ ಕುಡಿಯುವ ನೀರು, ಉದ್ಯೋಗ, ಜಾನುವಾರುಗಳ ಮೇವಿಗೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಿ...

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ನೀಡಿದ ಆದೇಶ.

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಮತ್ತು ಕೈಗೊಂಡಿರುವ ಪರಿಹಾರ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವೀಡಿಯೋ ಸಂವಾದ ನಡೆಸಿದರು. 

ಕುಡಿಯುವ ನೀರು ಪೂರೈಸುವ, ಕೂಲಿ ಕಾರ್ಮಿಕರಿಗೆ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವುದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜವಾಬ್ದಾರಿ ಎಂದು ಸಿಎಂ ಕುಟ್ಟುನಿಟ್ಟಾಗಿ ಹೇಳಿದರು. 

ವೀಡಿಯೋ ಸಂವಾದದ ವೇಳೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಹೇಳಿದ್ದು :

ಸರ್ಕಾರ ಬಿಡುಗಡೆ ಮಾಡುವ ಇನ್‍ಪುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಬೇಕು. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲ ರೈತರಿಗೂ ಹಣ ಸೇರಬೇಕು. 
ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಇರುವುದು ಕಂಡು ಬಂತು. ಜನರು ನೀರಿಗಾಗಿ ಬಿಂದಿಗೆಗಳನ್ನು ಇಟ್ಟುಕೊಂಡು ಕಾಯುತ್ತಿದ್ದ ದೃಶ್ಯ ಗಮನಿಸಿದ್ದೇನೆ. ಈ ರೀತಿ ಎಲ್ಲಿಯೂ ಆಗಬಾರದು. ಸಮಸ್ಯೆ ಕಂಡು ಬಂದ ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. 

ಕುಡಿಯುವ ನೀರು ಪೂರೈಸಿಲು ಖಾಸಗಿ ಕೊಳವೆಬಾವಿಗಳನ್ನು ವಶಕ್ಕೆ ತೆಗೆದುಕೊಳ್ಳಿ. ಆದರೆ ಕೊಳವೆಬಾವಿಗಳ ಮಾಲಕರನ್ನು ಹೆದರಿಸಬೇಡಿ. ಸರ್ಕಾರ ನಿಗದಿ ಮಾಡಿರುವ ಹಣ ಕೊಟ್ಟು ವಶಪಡಿಸಿಕೊಳ್ಳಿ. ಒಟ್ಟಿನಲ್ಲಿ ಕುಡಿಯುವ ನೀರಿಗೆ ಅಗತ್ಯ ಅನುದಾನ ಒದಗಿಸಲು ಸರ್ಕಾರ ಬದ್ಧವಾಗಿದೆ. ಹಣಕಾಸು ತೊಂದರೆ ಎದುರಾಗುವ ಪ್ರಶ್ನೆಯೇ ಇಲ್ಲ. 

ಕುಡಿಯುವ ನೀರಿನ ಸಮಸ್ಯೆ ಕುರಿತು ಸಹಾಯವಾಣಿ, ಜನಪ್ರತಿನಿಧಿಗಳು ಅಥವಾ ಮಾಧ್ಯಮಗಳ ಮೂಲಕ ದೂರ ಬಂದ ತಕ್ಷಣ ಕ್ರಮ ಕೈಗೊಳ್ಳಬೇಕು. 

ಮುಂದಿನ ಹತ್ತು ವಾರಗಳಿಗೆ ಆಗುವಷ್ಟು ಮೇವನ್ನು ಈಗಲೇ ಸಂಗ್ರಹ ಮಾಡಿಕೊಳ್ಳಿ. ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆಗಳನ್ನು ತೆರೆಯಿರಿ. ಗೋಶಾಲೆ ಎಂದರೆ ಯಾವುದೋ ತೋಪಿನಲ್ಲಿ ಜಾನುವಾರುಗಳಿಗೆ ಜಾಗ ನೀಡುವುದಲ್ಲ. ರಾಸುಗಳಿಗೆ ನೀರು, ನೆರಳು ಒದಗಿಸಬೇಕು. ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು. ಜಾನುವಾರುಗಳ ಜೊತೆ ಬಂದವರಿಗೆ ತಂಗಲು ಮತ್ತು ಊಟದ ವ್ಯವಸ್ಥೆ ಮಾಡಬೇಕು. 

ಜಾನುವಾರುಗಳಿಗೆ ನೀರು ಒದಗಿಸಲು ಪ್ರತಿ ಹಳ್ಳಿಗಳಲ್ಲೂ ತೊಟ್ಟಿಗಳನ್ನು ನಿರ್ಮಿಸಿ. ಕಾಮಗಾರಿಯನ್ನು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೊಳ್ಳಿ. 

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ತಪ್ಪದೇ ಉದ್ಯೋಗ ನೀಡಬೇಕು. ಅವರ ವೇತವನ್ನು 15 ದಿನಗಳ ಒಳಗೆ ವಿತರಿಸುವಂತೆ ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತರಿ ಯೋಜನೆ ಸಂಬಂಧ 2017-18ನೇ ಸಾಲಿನ ಕ್ರಿಯಾ ಯೋಜನೆ ಕೂಡಲೇ ಸಿದ್ಧವಾಗಬೇಕು ಎಂದು ಮುಖ್ಯಮಂತ್ರಿ ಹೇಳಿದರು. 

ವೀಡಿಯೋ ಸಂವಾದದ ಮೂಲಕ ಮುಖ್ಯಮಂತ್ರಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಆಯಾ ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳ ಕುರಿತು ಅಂಕಿ-ಅಂಶ ಸಮೇತ ಮಾಹಿತಿ ಪಡೆದರು. 

ಸಬ್ಸಿಡಿ ಬಿಡುಗಡೆ :
ವೀಡಿಯೋ ಸಂವಾದ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳು ಇನ್‍ಪುಟ್ ಸಬ್ಸಿಡಿಯಾಗಿ 265 ಕೋಟಿ ರೂ.  ಬಿಡುಗಡೆ ಮಾಡಿದರು. 

ಸಬ್ಸಿಡಿ ಹಣ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡುವ ಆನ್‍ಲೈನ್ ಪ್ರಕ್ರಿಯೆಗೂ ಚಾಲನೆ ನೀಡಿದರು. 4.47 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ಹಣ ಜಮೆಯಾಗಲಿದೆ. ಈ ಹಿಂದೆ 12.03 ಲಕ್ಷ ರೈತರಿಗೆ 671 ಕೋಟಿ ರೂ.ಗಳ ಇನ್‍ಪುಟ್ ಸಬ್ಸಿಡಿ ಬಿಡುಗಡೆಯಾಗಿತ್ತು. ಈ ವರೆಗೆ 16 ಲಕ್ಷಕ್ಕೂ ಹೆಚ್ಚು ರೈತರಿಗೆ 936 ಕೋಟಿ ರೂ.ಗಳ ಸಬ್ಸಿಡಿ ತಲುಪಿದೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಕೃಷಿ ಸಚಿವ ಬೈರೇಗೌಡ, ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಸಚಿವ ಎಚ್.ಕೆ.ಪಾಟೀಲ್ ಮತ್ತು ಪಶು ಸಂಗೋಪನಾ ಸಚಿವ ಎ.ಮಂಜು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಯವರ ಜೊತೆ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X